ಮಂಡ್ಯದಲ್ಲೂ ವೆಂಕಟ್‌ನ ಹುಚ್ಚಾಟ


Team Udayavani, Sep 2, 2019, 3:04 AM IST

mandya

ಮಂಡ್ಯ/ರಾಮನಗರ: ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿರುವ ನಟ ವೆಂಕಟ್‌, ಕೊಡಗಿನ ನಂತರ ಮಂಡ್ಯದಲ್ಲೂ ತಮ್ಮ ಹುಚ್ಚಾಟ ಮುಂದುವರಿಸಿದ್ದಾರೆ. ಭಾನುವಾರ ಬೆಳಗ್ಗೆ ಹೋಟೆಲ್‌ವೊಂದರ ಬಳಿ ನಿಂತಿದ್ದ ಕಾರಿನ ಗಾಜನ್ನು ಕಲ್ಲಿನಿಂದ ಒಡೆದು, ಯುವಕನಿಂದ ಥಳಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಮೈಸೂರಿನಿಂದ ಮಂಡ್ಯಕ್ಕೆ ಬಂದು ಹೋಟೆಲ್‌ನಲ್ಲಿ ವಾಸ್ತವ್ಯವಿದ್ದರು. ಈ ವೇಳೆ, ಹೋಟೆಲ್‌ನಲ್ಲಿದ್ದ ಯುವಕರಿಬ್ಬರ ಪರಿಚಯವಾಯಿತು.

ಭಾನುವಾರ ಬೆಳಗ್ಗೆ ಒಂದೇ ಕಾರಿನಲ್ಲಿ ಹೊರಗಡೆ ತೆರಳಿ ಕಬ್ಬಿನ ಜ್ಯೂಸ್‌ ಕುಡಿದು, ಮತ್ತೆ ಹೋಟೆಲ್‌ಗೆ ವಾಪಸ್ಸಾಗಿದ್ದರು. ಈ ವೇಳೆ, ಇದ್ದಕ್ಕಿದ್ದಂತೆ ಯುವಕನ ಕಾರಿನ ಮೇಲೆ ಕಾಲು ಹಾಕಿ ನಿಂತುಕೊಂಡರು. ಕಲ್ಲನ್ನು ತಂದು ಕಾರಿನ ಗಾಜನ್ನು ಒಡೆದು ಹಾಕಿದರು. ಇದರಿಂದ ಆಕ್ರೋಶಗೊಂಡ ಯುವಕ, ವೆಂಕಟ್‌ಗೆ‌ ಥಳಿಸಿದ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಯುವಕನನ್ನು ಸಮಾಧಾನಪಡಿಸಿ, ನಟ ವೆಂಕಟ್‌ಗೆ ಬುದ್ಧಿವಾದ ಹೇಳಿದರು. ಬಳಿಕ, ವೆಂಕಟ್‌, ತಮ್ಮ ಕೆಂಪು ಬಣ್ಣದ ಕಾರಿನಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು.

ಮಧ್ಯಾಹ್ನದ ಹೊತ್ತಿಗೆ ರಾಮನಗರಕ್ಕೆ ಬಂದ ವೆಂಕಟ್‌, ನಗರದ ರಾಮದೇವರ ಬೆಟ್ಟದ ರಸ್ತೆಯಲ್ಲಿ ಚಹ ಸೇವಿಸಿದರು. ಯುವಕನೊಬ್ಬ ಅನ್ಯ ಭಾಷೆಯಲ್ಲಿ ಮಾತನಾಡುತ್ತಿದ್ದುದ್ದನ್ನು ಕಂಡು, “ಇದ್ಯಾವ ಭಾಷೆಯಲ್ಲಿ ಮಾತಾಡ್ತಾ ಇದ್ದಿಯಾ’ ಎಂದು ಗದರಿದರು. ಬೆಟ್ಟದ ಮೇಲಿನ ದೇವಾಲಯಕ್ಕೆ ಹೋಗಿದ್ದಿರಾ ಎಂದು ಕೆಲವರು ಪ್ರಶ್ನಿಸಿದಾಗ, “ನಾನೇ ದೇವರು. ನಾನ್ಯಾಕೆ ದೇವಸ್ಥಾನಕ್ಕೆ ಹೋಗಲಿ’ ಎಂದರು. ಅಲ್ಲೇ ಕಾಣುತ್ತಿದ್ದ ಓವರ್‌ ಹೆಡ್‌ ವಾಟರ್‌ ಟ್ಯಾಂಕ್‌ ತೋರಿಸಿ, “ಇದನ್ನು ನನ್ನಪ್ಪ ಕಟ್ಟಿಸಿದ್ದು’ ಎಂದು ಹೇಳಿ ಕಾರಿನಲ್ಲಿ ಬೆಂಗಳೂರು ಕಡೆ ನಿರ್ಗಮಿಸಿದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.