ಕೃಷ್ಣಾತೀರದಲ್ಲಿ ಮತ್ತೆ ಪ್ರವಾಹ ಭೀತಿ

•ಜಮಖಂಡಿ ತಾಲೂಕಿನ 27,ಬಾಗಲಕೋಟೆ ತಾಲೂಕಿನ 12 ಹಳ್ಳಿಗಳು ಪುನಃ ಪ್ರವಾಹಕ್ಕೊಳಗಾಗುವ ಸಾಧ್ಯತೆ

Team Udayavani, Sep 6, 2019, 10:57 AM IST

bk-tdy-2

ಬಾಗಲಕೋಟೆ: ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಡ್ಯಾಂಗೆ ಅಪಾರ ನೀರು ಬಿಡಲಾಗಿದೆ. ಹೀಗಾಗಿ ಕೂಡಲಸಂಗಮ ಬಳಿ ಹೆಚ್ಚಿದ ನೀರು.

ಬಾಗಲಕೋಟೆ: ಜಿಲ್ಲೆಯ ಮೂರು ನದಿಗಳ ಪ್ರವಾಹ ನಿಂತು ಇನ್ನೂ ತಿಂಗಳು ಗತಿಸಿಲ್ಲ. ಈಗ ಕೃಷ್ಣಾ ತೀರದಲ್ಲಿ ಮತ್ತೇ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳು ಕಳೆದ ತಿಂಗಳು ರುದ್ರನರ್ತನ ಮಾಡಿದ್ದು, ಈ ರೌದ್ರಾವತಾರಕ್ಕೆ ಜಿಲ್ಲೆಯ ಬರೋಬ್ಬರಿ 195 ಹಳ್ಳಿಗಳು ಅಕ್ಷರಶಃ ನಲುಗಿವೆ. ಇದರಿಂದ 43,136 ಕುಟುಂಬಗಳ 1,49,408 ಜನರು ಬೀದಿಗೆ ಬಿದ್ದಿದ್ದವು. ಇದೀಗ ಅವರೆಲ್ಲ ನೀರು ಹೊಕ್ಕು ಹೋದ ಮನೆಗಳತ್ತ ನಿರಾಳವಾಗಿ ಹೆಜ್ಜೆ ಇಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತೆ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ.

2ಲಕ್ಷ ಕ್ಯೂಸೆಕ್‌ ದಾಟುವ ಆತಂಕ: ಕೃಷ್ಣಾ ನದಿ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರ ಸೇರಿದಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿದೆ. ಹೀಗಾಗಿ 519.60 ಮೀಟರ್‌ (123 ಟಿಎಂಸಿ ಅಡಿ) ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಈಗಾಗಲೇ 519.14 ಮೀಟರ್‌ (115.221 ಟಿಎಂಸಿ ಅಡಿ ನೀರು)ಸಂಗ್ರಹವಾಗಿದ್ದು, ಗುರುವಾರ ಸಂಜೆ ಆಲಮಟ್ಟಿ ಜಲಾಶಯಕ್ಕೆ 63,760 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಹೆಚ್ಚಿನ ನೀರನ್ನು ಹೊರ ಬಿಡುವಂತೆ ಈಗಾಗಲೇ ಬೆಳಗಾವಿ ಜಿಲ್ಲಾಡಳಿತ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು, ಕೆಬಿಜೆಎನ್‌ಎಲ್ಗೆ ಮನವಿ ಮಾಡಿದ್ದು, ಆ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಿಂದ ಕಾಲುವೆ ಮತ್ತು ಗೇಟ್ ಮೂಲಕ ಒಟ್ಟು 1,85,095 ಕ್ಯೂಸೆಕ್‌ ನೀರು ಹೊಡ ಬಿಡಲಾಗುತ್ತಿದೆ. ಇನ್ನೂ 2ರಿಂದ 3 ದಿನಗಳಲ್ಲಿ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್‌ ವರೆಗೆ ನೀರು ಹರಿದು ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಜಮಖಂಡಿ ತಾಲೂಕಿನ 27 ಹಳ್ಳಿಗಳು, ಬಾಗಲಕೋಟೆ ತಾಲೂಕಿನ 12 ಹಳ್ಳಿಗಳು ಪುನಃ ಪ್ರವಾಹಕ್ಕೊಳಗಾಗುವ ಸಾಧ್ಯತೆ ಇದೆ.

ಈ ಬಾರಿ ದಾಖಲೆ ಪ್ರವಾಹ: ಕೃಷ್ಣಾ ನದಿಗೆ ಈ ಬಾರಿ 5.79 ಲಕ್ಷ ಕ್ಯೂಸೆಕ್‌ (4.13 ಲಕ್ಷ ಕ್ಯೂಸೆಕ್‌ ಹಳೆಯ ದಾಖಲೆ) ನೀರು ಹರಿದು ಬಂದರೆ, ಘಟಪ್ರಭಾ ನದಿಗೆ 2.29 ಲಕ್ಷ (65 ಸಾವಿರ ಹಳೆಯ ದಾಖಲೆ) ಕ್ಯೂಸೆಕ್‌, ಮಲಪ್ರಭಾ ನದಿಗೆ 93,920 ಕ್ಯೂಸೆಕ್‌ (22 ಸಾವಿರ ಹಳೆಯ ದಾಖಲೆ) ನೀರು ಹರಿದು ಬಂದಿದೆ. ಇದು ಮೂರು ನದಿಗಳ ಇತಿಹಾಸದಲ್ಲೇ ದಾಖಲೆ ನೀರಿನ ಹರಿವಾಗಿತ್ತು.

ಆಲಮಟ್ಟಿ, ನಾರಾಯಣಪುರ ಜಲಾಶಯಗಳ ಹಿನ್ನೀರು ಹಾಗೂ ಮೂರೂ ನದಿಗಳ ದಡದಲ್ಲಿ ಆಗಾಗ ಒತ್ತಿ ಬರುವ ನೀರಿನಿಂದ ಬಹುತೇಕ ಮುಳುಗಡೆ ಜಿಲ್ಲೆಯಾಗಿರುವ ಬಾಗಲಕೋಟೆಗೆ ಪ್ರವಾಹ ಹೊಸದೇನಲ್ಲ. 2007 ಮತ್ತು 2009ರಲ್ಲಿ ಬಂದ ಪ್ರವಾಹಗಳನ್ನೇ ಭೀಕರ ಜಲಪ್ರಳಯ ಎಂದು ಹೇಳಲಾಗಿತ್ತು. ಆದರೆ, ಅದೆಲ್ಲ ದಾಖಲೆಗಳನ್ನು ಮುರಿದು, 105 ವರ್ಷಗಳ ಹಿಂದೆ ಬಂದಿದ್ದ ಪ್ರವಾಹದ ದಾಖಲೆಯನ್ನೂ ಜಿಲ್ಲೆಯ ಮೂರೂ ನದಿಗಳು ಮುರಿದಿವೆ.

ಆಗಲೂ ಆಗಸ್ಟ್‌ ತಿಂಗಳಲ್ಲೇ ಬಂದಿತ್ತು: 1914ರ ಆಗಸ್ಟ್‌ 8ರಂದು ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ ಬಂದಿತ್ತು. ಅಂದು ಬಂದಿದ್ದ ಪ್ರವಾಹ ಬಹುದೊಡ್ಡ ಹಾಗೂ ಭೀಕರವಾಗಿತ್ತು ಎಂದು ಆಗಿನ ಹಿರಿಯರಿಂದ ಕೇಳಿದ್ದ ಈಗಿನ ಹಿರಿಯರು ಹೇಳುತ್ತಾರೆ. ಆಗಲೂ ಆಗಸ್ಟ್‌ ತಿಂಗಳಲ್ಲೇ ಪ್ರವಾಹ ಬಂದಿತ್ತು. ಈ ಬಾರಿಯೂ ಆಗಸ್ಟ್‌ 1ರಿಂದ ಆರಂಭಗೊಂಡ ಕೃಷ್ಣೆಯ ವೇಗದ ಹರಿದು, ಆಗಸ್ಟ್‌ 8ರಂದು (105 ವರ್ಷಗಳ ಹಿಂದೆಯೂ ಆಗಸ್ಟ್‌ 8ರಂದು ಬಂದಿತ್ತು) 5.79 ಲಕ್ಷ ಕ್ಯೂಸೆಕ್‌ಗೆ ದಾಟಿತ್ತು. ಕೃಷ್ಣಾ ನದಿಯಲ್ಲಿ ಈ ನೀರು ಹರಿದು ನದಿಯ ಇತಿಹಾಸದಲ್ಲೇ ದೊಡ್ಡ ದಾಖಲೆಯಾಗಿತ್ತು.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.