
ಅಡಿಪಾಯ ಹಾಕಲು ಅಗೆಯುವಾಗ ಸಿಕ್ತು ಲಕ್ಷಾಂತರ ರೂಪಾಯಿ ಚಿನ್ನಾಭರಣ… ಮುಂದೇನಾಯ್ತು!
Team Udayavani, Sep 6, 2019, 5:21 PM IST

ಲಕ್ನೋ:ಹೊಸ ಮನೆ ಕಟ್ಟಲು ಅಡಿಪಾಯ ತೆಗೆಯುತ್ತಿದ್ದ ವೇಳೆ ನೂರು ವರ್ಷದ ಹಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಹಾರ್ಡೊಯಿ ಎಂಬಲ್ಲಿ ನಡೆದಿದೆ. ಆದರೆ ವಿಷಯ ತಿಳಿದ ಪೊಲೀಸರು ಭೂಮಿಯಲ್ಲಿ ಪತ್ತೆಯಾದ ಚಿನ್ನಾಭರಣ ವಶಪಡಿಸಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ.
ಮನೆಯ ಅಡಿಪಾಯ ಅಗೆಯುವಾಗ ದೊರೆತ ನೂರಾರು ವರ್ಷಗಳ ಹಿಂದಿನ 650 ಗ್ರಾಮ್ ಚಿನ್ನ, 4.53 ಕೆಜಿ ಬೆಳ್ಳಿ ಆಭರಣಗಳ ದೊರೆತಿರುವುದಾಗಿ ಹಾರ್ಡೊಯಿ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ.
ಪತ್ತೆಯಾದ ಚಿನ್ನಾಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ನಾವು ಆ ವ್ಯಕ್ತಿಯಿಂದ ಅದನ್ನು ವಶಪಡಿಸಿಕೊಂಡಿರುವುದಾಗಿ ಪ್ರಿಯದರ್ಶಿ ಹೇಳಿದ್ದಾರೆ.
ಮನೆಯ ಅಡಿಪಾಯ ತೆಗೆಯುತ್ತಿದ್ದಾಗ ಚಿನ್ನಾಭರಣ ಸಿಕ್ಕಿದ ಸುದ್ದಿ ಇಡೀ ಗ್ರಾಮದ ತುಂಬಾ ಹರಡಿತ್ತು. ಹೀಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಮೊದಲು ನಿರಾಕರಿಸಿದ್ದು, ಬಳಿಕ ಚಿನ್ನಾಭರಣ ದೊರೆತ ವಿಷಯ ಬಾಯ್ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಭೂಮಿಯನ್ನು ಅಗೆಯುವಾಗ ಯಾವುದೇ ಚಿನ್ನಾಭರಣ ಅಥವಾ ಬೆಲೆಬಾಳುವ ವಸ್ತು ಪತ್ತೆಯಾದಲ್ಲಿ ಅದನ್ನು ನಿಧಿ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಇಂಡಿಯನ್ ಟ್ರೆಶರ್ ಟ್ರೋವ್ ಕಾಯ್ದೆ 1878ರ ಸೆಕ್ಷನ್ 4ರ ಪ್ರಕಾರ ಸರಕಾರದ ವಶಕ್ಕೆ ಒಪ್ಪಿಸಬೇಕು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.