ಡೇಟಿಂಗ್ ಪ್ರಿಯರಿಗೆ ಬಂದಿದೆ ಫೇಸ್ಬುಕ್ಕಿನ ಹೊಸ ಆಪ್ಷನ್!


Team Udayavani, Sep 6, 2019, 9:00 PM IST

Dating-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸ್ಯಾನ್‌ಫ್ರಾನ್ಸಿಸ್ಕೋ: ಸಾಮಾಜಿಕ ಜಾಲತಾಣಗಳ ದೈತ್ಯ ಫೇಸ್ಬುಕ್‌ ಜಗತ್ತಿನಾದ್ಯಂತ ಸಾವಿರಾರು ಕೋಟಿ ಬಳಕೆದಾರರನ್ನು ಹೊಂದಿದೆ. ಇದೀಗ ಬದಲಾಗುತ್ತಿರುವ ಜೀವನಶೈಲಿಗೆ ಹಾಗೂ ಯುವಜನತೆಯ ಮನೋಕಾಮನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಈ ಸಂಸ್ಥೆ ಪೇಸ್ಬುಕ್‌ ಡೇಟಿಂಗ್‌ ತಾಣವನ್ನು ಆರಂಭಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಸಂಗಾತಿಯ ಹುಡುಕಾಟದಲ್ಲಿರುವವರಿಗೆ ಈ ತಾಣ ನೆರವಾಗಬಹುದು ಎಂಬುದು ಇದರ ಹಿಂದಿರುವ ಯೋಚನೆಯಾಗಿದೆ. ಪ್ರಸ್ತುತ ಅಮೆರಿಕ ಸೇರಿದಂತೆ ಇತರ 19 ದೇಶಗಳಲ್ಲಿ ಈ ಡೇಟಿಂಗ್‌ ತಾಣವನ್ನು ಆರಂಭಿಸಿದ್ದು ಮುಂಬರುವ ದಿನಗಳಲ್ಲಿ ಜಗತ್ತಿನಾದ್ಯಂತ ಲಭ್ಯವಾಗಲಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಪೇಸ್ಬುಕ್‌ ಬಳಕೆದಾರರು ಡೇಟಿಂಗ್‌ ಮಾಡಲು ಇಚ್ಚಿಸಿದರೆ ಇಲ್ಲಿ ಪ್ರತ್ಯೇಕವಾದ ಡೇಟಿಂಗ್‌ ಪ್ರೊಫೈಲ್‌ ಅನ್ನು ರಚಿಸಬೇಕಾಗುತ್ತದೆ. ಇದು ಫೇಸ್ಬುಕ್ಕಿನದ್ದೇ ಖ್ಯಾತ ಫೋಟೋ ಶೇರಿಂಗ್‌ ತಾಣವಾದ ಇನ್‌ ಸ್ಟಾಗ್ರಾಂ ಗೆ ಲಿಂಕ್‌ ಹೊಂದಿರಲಿದೆ.

ಇನ್‌ ಸ್ಟಾಗ್ರಾಂನಲ್ಲಿ ನಾವು ಹಂಚಿಕೊಂಡಿರುವ ಚಿತ್ರಗಳನ್ನು ಈ ಡೇಟಿಂಗ್‌ ತಾಣದಲ್ಲಿ ನಾವು ನೋಡಬಹುದಾಗಿದೆ. ಈ ಡೇಟಿಂಗ್‌ ಗೆ ತಮ್ಮ ಫೇಸ್ಬುಕ್‌ ಖಾತೆಯ ಸ್ನೇಹಿತರು ಮಾತ್ರವಲ್ಲದೇ ನಮ್ಮ ಇನ್‌ ಸ್ಟಾಗ್ರಾಂ ಖಾತೆಯ ಬೆಂಬಲಿಗರನ್ನು ಸೇರಿಸಿಕೊಳ್ಳಬಹುದಾಗಿದೆ.

ಈಗಾಗಲೇ ನೂರಾರು ಡೇಟಿಂಗ್‌ ಆ್ಯಪ್‌ ಗಳು ಇದ್ದು, ಅವುಗಳು ಜಾಹೀರಾತುಗಳತ್ತ ಮಾತ್ರ ಗಮನಹರಿಸುತ್ತಿದ್ದು ಜನ ಸಂಪರ್ಕ ಸಾಧಿಸಲು ನೆರವಾಗುತ್ತಿಲ್ಲ ಎಂಬ ಆರೋಪ ಇದೆ. ಈ ನಿಟ್ಟಿನಲ್ಲಿ ಫೇಸ್ಬುಕ್‌ ತಮ್ಮದೇ ಆದ ಡೇಟಿಂಗ್‌ ತಾಣವನ್ನು ಹೊಂದಲು ತೀರ್ಮಾನಿಸಿದೆ.

ನಿಮಗೆ ಯಾರ ಮೆಲಾದರೂ ಕ್ರಶ್‌ ಆಗಿದ್ದರೆ ಅಥವಾ ನೀವು ಯಾರನ್ನಾದರೂ ಇಷ್ಟ ಪಡುತ್ತಿದ್ದರೆ ಅಂತಹವರ ಪ್ರೊಫೈಲ್‌ಗೆ ಹೋಗಿ ಅಲ್ಲಿ ಕಮೆಂಟ್‌ ಮತ್ತು ಲೈಕ್‌ ಮಾಡಬೇಕು. ಈ ಮೂಲಕ ಪರಿಚಯವಾದ ಅಥವ ಲಭ್ಯವಾದ ಸಂಬಂಧಗಳ ಸಂಪರ್ಕಗಳು ಇದೇ ತಾಣದ ಮುಖಾಂತರ ನಡೆಯುತ್ತದೆ. ಆದರೆ ಇದು ನಿಮ್ಮ ಅಧಿಕೃತ ಫೇಸ್ಬುಕ್‌ ಪುಟದಲ್ಲಿ ಕಾಣಿಸುವುದಿಲ್ಲ. ಹಾಗಾಗಿ ನಿಮ್ಮ ಸಂಬಂಧಗಳ ಗುಟ್ಟು ಹೊರ ಜಗತ್ತಿಗೆ ತಿಳಿಯುವುದಕ್ಕೆ ಸಾಧ್ಯವೇ ಇಲ್ಲ.

ಈಗಾಗಲೇ ಜಗತ್ತಿನಾದ್ಯಂತ ಪ್ರೈವಸಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಅದಕ್ಕೂ ಈ ಹೊಸ ತಾಣದಲ್ಲಿ ಮಹತ್ವವನ್ನು ನೀಡಲಾಗಿದೆ. ಬಳಕೆದಾರರ ಸುರಕ್ಷೆ ಮುಖ್ಯ ಎಂದು ಸಂಸ್ಥೆ ಹೇಳಿದೆ.

ಸಾಂಪ್ರದಾಯಿಕ ಮನಸ್ಥಿತಿಯ ಜನರಿರುವ ಭಾರತದಂತಹ ದೇಶಗಳಲ್ಲಿ ಈ ಹೊಸ ಆ್ಯಪ್ ಗೆ ಯಾವ ರೀತಿಯ ಸ್ವಾಗತ ಸಿಗುತ್ತದೆ ಎಂಬುದನ್ನು ಮುಂಬರುವ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಪಾಶ್ಚಿಮಾತ್ಯ ರಾಷ್ಟ್ರಗಳು ಮತ್ತು ಅಲ್ಲಿನ ಸಂಸ್ಕೃತಿಗೆ ಇದು ಸರಿಯಾಗಿ ಕಂಡರೂ ಭಾರತದಂತಹ ಸಂಸ್ಕೃತಿಗೆ ಮೌಲ್ಯ ನೀಡುವ ದೇಶಗಳಲ್ಲಿ ಈ ಪ್ರಯೋಗ ಹೇಗೆ ಸ್ವೀಕರಿಸಲ್ಪಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.