“ಮುಂದಿನ ನಿಲ್ದಾಣ’ದಲ್ಲೊಂದು ಸ್ಪೆಷಲ್ ಸಾಂಗ್
Team Udayavani, Sep 8, 2019, 3:00 AM IST
ಕನ್ನಡದಲ್ಲಿ ಈಗಾಗಲೇ ಬಹುತೇಕ ಹೊಸಬರೇ ಸೇರಿ ಮಾಡಿರುವ “ಮುಂದಿನ ನಿಲ್ದಾಣ’ ಚಿತ್ರ ಒಂದಷ್ಟು ಸುದ್ದಿಯಲ್ಲಿದೆ. ಚಿತ್ರದ ಫಸ್ಟ್ಲುಕ್, ಟೀಸರ್, ಪೋಸ್ಟರ್ನಿಂದಲೇ ಗಮನಸೆಳೆದ ಚಿತ್ರ ಅಕ್ಟೋಬರ್ಗೆ ಬರಲು ಸಜ್ಜಾಗಿದೆ. ಈ ಚಿತ್ರದ ವಿಶೇಷವೆಂದರೆ, ಈ ಚಿತ್ರಕ್ಕೆ ತೆಲುಗಿನ ಯಶಸ್ವಿ ಚಿತ್ರ “ಮಹಾನಟಿ’ ಚಿತ್ರದ “ಮೂಗ ಮನಸುಲು..’ ಹಾಡಿಗೆ ನೃತ್ಯ ಸಂಯೋಜಿಸಿದ್ದ ವಿಶ್ವಕಿರಣ್ ನಂಬಿ ಅವರು ಹಾಡೊಂದಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ.
ಹೌದು, ಕಿರಣ್ ಕಾವೇರಪ್ಪ ಅವರು ಬರೆದಿರುವ “ಮನಸೇ ಮಾಯ..’ ಎಂಬ ಹಾಡಿಗೆ ವಿಶ್ವ ಕಿರಣ್ ನಂಬಿ ನೃತ್ಯ ಸಂಯೋಜಿಸಿದ್ದಾರೆ. ಈ ಹಾಡಿಗೆ ಮಸಾಲ ಕಾಫಿ ಬ್ಯಾಂಡ್ ಸಂಗೀತ ಸಂಯೋಜಿಸಿದ್ದು, ಸೂರಜ್ ಸಂತೋಷ್ ಮತ್ತು ವರುಣ್ ಸುನೀಲ್ ಅವರು ಹಾಡಿದ್ದಾರೆ. ಹಾಡಲ್ಲಿ ಪ್ರವೀಣ್ ತೇಜ್ ಹಾಗು ಅಜೇಯ್ ರಾಜ್ ಕಾಣಿಸಿಕೊಂಡಿದ್ದಾರೆ.
ಇನ್ನೊಂದು ವಿಶೇಷವೆಂದರೆ, ಹಿಂದಿಯ “ರಾಝಿ’ ಚಿತ್ರದಲ್ಲಿ ಸಂಗೀತ ನುಡಿಸಿರುವ ಅರ್ಷದ್ ಖಾನ್ ಅವರು ಚಿತ್ರದಲ್ಲಿ ಎಸ್ರಾಜ್ ವಾದ್ಯವನ್ನು ನುಡಿಸಿದ್ದಾರೆ. ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ಹೊಸ ಪ್ರಯತ್ನವಾಗಿದ್ದು, ಕೇಳುಗರಿಗೆ ಆ ಹಾಡು ಹೊಸತನಕ್ಕೆ ಸಾಕ್ಷಿಯಾಗಲಿದೆ ಎಂಬುದು ಚಿತ್ರತಂಡದ ಮಾತು. ಚಿತ್ರಕ್ಕೆ ವಿನಯ್ ಭಾರಧ್ವಜ್ ನಿರ್ದೇಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.