“ಏನ್‌ ಚಂದನೋ ತಕ್ಕೋ’ ಹಾಡಿನ ವಿರುದ್ಧ ಆರೋಪ


Team Udayavani, Sep 8, 2019, 3:01 AM IST

Naveen-Sajju

ಇತ್ತೀಚೆಗಷ್ಟೇ ಗಾಯಕ ನವೀನ್‌ ಸಜ್ಜು ಹಾಡಿರುವ “ಬಡ್ಡೀ ಮಗನ್‌ ಲೈಫ‌ು’ ಚಿತ್ರದ “ಏನ್‌ ಚಂದನೋ ತಕ್ಕೋ’ ಎಂಬ ಹಾಡು ಬಿಡುಗಡೆಯಾಗಿತ್ತು. ಬಿಡುಗಡೆಯಾಗುತ್ತಿದ್ದಂತೆ, ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಸಾಕಷ್ಟು ವೈರಲ್‌ ಆಗಿ ಹರಿದಾಡುತ್ತಿದೆ. ಒಂದೆಡೆ ಈ ಗೀತೆ ಜನಪ್ರಿಯವಾಗುತ್ತಿದ್ದಂತೆ, ಮತ್ತೂಂದೆಡೆ ಈ ಗೀತೆಯ ವಿರುದ್ಧ ಒಕ್ಕಲಿಗರ ಸಮುದಾಯದ ಹೆಣ್ಣು ಮಕ್ಕಳನ್ನು ತೇಜೋವಧೆ ಮಾಡಲಾಗಿದೆ ಎನ್ನುವ ಆರೋಪ ಕೂಡ ಕೇಳಿ ಬರುತ್ತಿದೆ.

ಅಲ್ಲದೆ ಈ ಹಾಡಿಗೆ ಧ್ವನಿಯಾಗಿರುವ ಗಾಯಕ ನವೀನ್‌ ಸಜ್ಜು ಮತ್ತು ಚಿತ್ರತಂಡ ಕ್ಷಮೆ ಕೋರಬೇಕು ಎಂದು ಒಕ್ಕಲಿಗ ಸಮುದಾಯದ ಮಹಿಳಾ ಸಂಘಟನೆಗಳು ಆಗ್ರಹಿಸಿವೆ. ಇನ್ನು ಈ ಆರೋಪಕ್ಕೆ ಧ್ವನಿಗೂಡಿಸಿರುವ ನಿರ್ಮಾಪಕ ಬಾ.ಮಾ ಹರೀಶ್‌, ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಚಿತ್ರತಂಡದ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ ಈ ಹಾಡಿನ ಬಗ್ಗೆ ಕೇಳಿ ಬರುತ್ತಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಗಾಯಕ ನವೀನ್‌ ಸಜ್ಜು, “ಮೊದಲನೆಯದಾಗಿ ನಾನು ಈ ಚಿತ್ರಕ್ಕೆ ಗಾಯಕ ಅಷ್ಟೇ.

ಸಂಗೀತ ನಿರ್ದೇಶಕರು, ನಿರ್ದೇಶಕರು ಹೇಳಿದ ಸನ್ನಿವೇಶವನ್ನು ಅರ್ಥೈಸಿಕೊಂಡು ಹಾಡನ್ನು ಹಾಡಿದ್ದೇನೆ. ಅವರು ಹೇಳಿದಂತೆ ಚಿತ್ರದ ಸನ್ನಿವೇಶದಲ್ಲಿ ನನಗೆ ಅಂಥ ಯಾವುದೇ ಅವಹೇಳನಕಾರಿ ಅಂಶಗಳು ಕಾಣಲಿಲ್ಲ. ಅಲ್ಲದೆ ಸುಮಾರು ಆರು ತಿಂಗಳ ಹಿಂದಷ್ಟೇ ಈ ಹಾಡಿನ ಫೀಮೇಲ್‌ ವರ್ಶನ್‌ ಕೂಡ ಬಿಡುಗಡೆಯಾಗಿದೆ. ಈಗಾಗಲೇ ಈ ಚಿತ್ರಕ್ಕೆ ಸೆನ್ಸಾರ್‌ ಸರ್ಟಿಫಿಕೆಟ್‌ ಕೂಡ ಸಿಕ್ಕಿದೆ. ಈಗ ಚಿತ್ರದ ಮೇಲ್‌ ವರ್ಶನ್‌ ಬಿಡುಗಡೆಯಾಗಿದೆ ಅಷ್ಟೇ. ಇನ್ನೇನು ಚಿತ್ರ ಬಿಡುಗಡೆಯಾಗಬೇಕು ಎಂಬ ಹಂತದಲ್ಲಿ ಈ ಹಾಡಿನ ಬಗ್ಗೆ ಈ ಥರದ ಆರೋಪ ಏಕೆ ಬರುತ್ತಿದೆಯೋ ಗೊತ್ತಿಲ್ಲ’ ಎಂದಿದ್ದಾರೆ.

ಅಂದ್ಹಾಗೆ “ಬಡ್ಡೀ ಮಗನ್‌ ಲೈಫ‌ು’ ಚಿತ್ರದಲ್ಲಿ ಬರುವ ಸನ್ನಿವೇಶವೊಂದರಲ್ಲಿ ಹುಡುಗಿಯೊಬ್ಬಳು ಲವ್‌ ಮಾಡಿ ಓಡಿ ಹೋದರೆ, ಅವಳ ಅಕ್ಕ-ಪಕ್ಕದ ಮನೆಯ ಹೆಂಗಸರು ಅದನ್ನು ಹೇಗೆ ಆಡಿಕೊಳ್ಳುತ್ತಾರೆ ಎನ್ನುವುದನ್ನು ಈ ಹಾಡಿನ ಮೂಲಕ ಹೇಳಲಾಗಿದೆಯಂತೆ. “ಸಿನಿಮಾದ ಕಥೆ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಹಾಡಿದೆ. ಇಲ್ಲಿ ಹೆಣ್ಣು ಮಕ್ಕಳ ತೇಜೋವಧೆ ಆಗಿಲ್ಲ. ಗೌಡ್ರು ಅಂದ್ರೆ ಊರಿನ ಮುಖ್ಯಸ್ಥ, ಯಜಮಾನ, ಊರಿನಲ್ಲಿರುವ ದೊಡ್ಡವರು ಎಂಬ ಅರ್ಥವಿದೆ. ಗೌಡ್ರು ಅಂದ್ರೆ ಕೇವಲ ಒಕ್ಕಲಿಗರು ಮಾತ್ರವಲ್ಲ. ಎಲ್ಲಾ ಸಮುದಾಯದಲ್ಲೂ ಗೌಡ್ರು ಇರುತ್ತಾರೆ.

ಅದೊಂದು ದೊಡ್ಡ ಅಂತಸ್ತಿರುವವರನ್ನು ಸೂಚಿಸುವ ಪದ. ಇಲ್ಲಿ ಯಾರಿಗೂ ಅವಮಾನ ಮಾಡುವ ಉದ್ದೇಶ ನಮಗಿಲ್ಲ’ ಎನ್ನುವ ಸಮರ್ಥನೆಯ ಉತ್ತರ ನೀಡುತ್ತಾರೆ ನವೀನ್‌ ಸಜ್ಜು. ಇನ್ನು “ಬಡ್ಡೀ ಮಗನ್‌ ಲೈಫ‌ು’ ಚಿತ್ರದ ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಹಾಡಿಗೆ ಸಂಗೀತ ಸಂಯೋಜಿಸಿದ್ದು, ವೀರು ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಚಿತ್ರಕ್ಕೆ ಪವನ್‌ ಪ್ರಸಾದ್‌ ನಿರ್ದೇಶನವಿದೆ. ಸದ್ಯ ಬಿಡುಗಡೆಗೆ ಸಿದ್ಧವಾಗಿರುವ “ಬಡ್ಡೀ ಮಗನ್‌ ಲೈಫ‌ು’ ಚಿತ್ರದ ವಿರುದ್ದ ಕೇಳಿಬಂದಿರುವ ಇಂಥದ್ದೊಂದು ಆರೋಪ, ಚಿತ್ರತಂಡಕ್ಕೆ ತಲೆನೋವು ತಂದಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.