![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
ನೀರಿಲ್ಲದೇ ಬತ್ತಿದ ಗದ್ದೆ
Team Udayavani, Sep 9, 2019, 11:23 AM IST
![kopala-tdy-2](https://www.udayavani.com/wp-content/uploads/2019/09/kopala-tdy-2-6-620x402.jpg)
ಕಾರಟಗಿ: ಮರ್ಲಾನಹಳ್ಳಿ ಗ್ರಾಮದ ಕಾಲುವೆ ವ್ಯಾಪ್ತಿಯಲ್ಲಿ ಸಮರ್ಪಕ ನೀರಿಲ್ಲದೇ ನಾಟಿ ಮಾಡಿದ ಭತ್ತದ ಸಸಿಗಳು ಒಣಗಿ ಗದ್ದೆ ಬಿರುಕು ಬಿಟ್ಟಿರುವುದು.
ಕಾರಟಗಿ: ತಾಲೂಕಿನ ರೈತರು ವರುಣದೇವ ಕೃಪೆಗಾಗಿ ಕಾಯುತ್ತಿದ್ದಾರೆ. ಮುಂಗಾರು ಅಂತಿಮ ಹಂತಕ್ಕೆ ಬಂದರೂ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗದಿರುವುದು ರೈತರನ್ನು ಕಂಗಾಲಾಗಿಸಿದೆ. ತುಂಗಭದ್ರಾ ಜಲಾಶಯ ಭರ್ತಿಯಾಗಿ ಎಡದಂಡೆ ನಾಲೆಗೆ ನೀರು ಹರಿಸಿದರೂ ವಿತರಣಾ ನಾಲೆಯ ಉಪ ಕಾಲುವೆಗಳಿಗೆ ಇದುವರೆಗೂ ತಲುಪದ ಕಾರಣ ರೈತರು ಭತ್ತದ ಸಸಿ ನಾಟಿ ಮಾಡದೇ, ಇನ್ನೂ ಕೆಲ ರೈತರು ನಾಟಿ ಮಾಡಿ ನೀರಿಲ್ಲದೆ ಕೈಕಟ್ಟಿ ಕುಳಿತಿದ್ದಾರೆ.
ಸಮೀಪದ ಮರ್ಲಾನಹಳ್ಳಿ ಗ್ರಾಮದ ವ್ಯಾಪ್ತಿಯ 31/3/2 ಕೆನಾಲ್ಗೆ ಸಂಬಂಧಿಸಿದ ಹೊಲ ಗದ್ದೆಗಳಿಗೆ ಉಪ ಕಾಲುವೆಗಳಿಗೆ ನೀರು ಬಿಟ್ಟರೂ ಎಲ್ಲ ರೈತರಿಗೆ ಒಂದೆ ಬಾರಿ ಗದ್ದೆಗಳಿಗೆ ನೀರು ಹರಿಸಲು ಆಗುವುದಿಲ್ಲ. ರೈತರಿಗೆ ಹಂತ ಹಂತವಾಗಿ ಪ್ರಕಾರ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಒಮ್ಮೆ ಗದ್ದೆಗಳಿಗೆ ನೀರು ಹರಿಸಿದರೆ ಮುಂದಿನ ಸರದಿ 40 ದಿನಕ್ಕೆ ಬರುತ್ತದೆ. ಭತ್ತದ ಸಸಿ ನಾಟಿ ಮಾಡಿದ್ದ ಗದ್ದೆ ಒಣಗಿ ಬಿರುಕು ಬಿಟ್ಟಿದೆ. ಹೀಗಾದರೆ ಭತ್ತ ಬೆಳೆಯುವುದಾದರು ಹೇಗೆ? ಮಳೆ ಬರುವ ನೀರಿಕ್ಷೆಯಲ್ಲಿ ಭತ್ತ ನಾಟಿ ಮಾಡಿದ್ದೇವೆ. ಇತ್ತ ಮಳೆಯೂ ಇಲ್ಲ. ಕಾಲುವೆಗೆ ಸಮರ್ಪಕವಾಗಿ ನೀರು ಇಲ್ಲದೇ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡರು.
31/3/2. ಕೆನಾಲ್ ವ್ಯಾಪ್ತಿಗೆ ನೀರಾವರಿ ಇಲಾಖೆಯ ಲೆಕ್ಕದ ಪ್ರಕಾರ 2200 ಎಕರೆ ಭೂಮಿಯಿದೆ. ಆದರೆ ಈ ಕಾಲುವೆ ವ್ಯಾಪ್ತಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಭತ್ತ ನಾಟಿ ಮಾಡಲಾಗಿದೆ. ಹೀಗಾದರೆ ಯಾರಿಗೆ ಸರದಿ ಪ್ರಕಾರ ಪ್ರಕಾರ ಸರಿಯಾಗಿ ನೀರು ಸಿಗುತ್ತದೆ, ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಕಷ್ಟವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ರೈತರು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ. ಕಾಲುವೆ ಮೇಲ್ಭಾಗದಲ್ಲಿ ಬಲಾಡ್ಯ ರೈತರು ತಮ್ಮಿಷ್ಟದಂತೆ ಕಾಲುವೆ ನೀರು ಬಳಸಿಕೊಂಡರು ನೀರಾವರಿ ಇಲಾಖೆ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಇದರಿಂದಾಗಿ ಕೆಳಭಾಗದ ರೈತರು ತೊಂದರೆ ಅನುಭವಿಸುವುದು ಸಾಮಾನ್ಯವಾಗಿದೆ ಎನ್ನುತ್ತಾರೆ ರೈತರು.
ಮಳೆಗಾಗಿ ತಾಲೂಕು ವ್ಯಾಪ್ತಿಯ ಗ್ರಾಮಗಳ ರೈತರು ಕಂಡ ಕಂಡ ದೇವರಿಗೆ ಪ್ರಾರ್ಥನೆ, ಕಪ್ಪೆ ಮದುವೆ, ಕತ್ತೆ ಮದುವೆ, ಸಪ್ತಭಜನೆ ಮಾಡಿದರೂ ವರುಣ ದೇವ ಕೃಪೆ ತೋರುತ್ತಿಲ್ಲ. ಇನ್ನು ಭತ್ತದ ಬೆಳೆ ಕೈಸೇರುವುದು ಇನ್ನೆಲ್ಲಿ ಎಂದು ರೈತ ಸುಬ್ಟಾರಡ್ಡಿ ನಿರಾಸೆಯಿಂದ ಹೇಳುತ್ತಾರೆ.
ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿ ರೈತರು ಪ್ರತಿಭಾರಿ ಭತ್ತ ಬೆಳೆಯಲು ಹರಸಾಹಸ ಪಡಲೇಬೇಕಾದ ಅನಿವಾರ್ಯತೆ ಉದ್ಭವಿಸಿದೆ. ಕೆಲವೊಮ್ಮೆ ನೀರು ಬಾರದೆ ಮಳೆಯೂ ಬಾರದೇ ಸಂಕಷ್ಟಕ್ಕೆ ಸಿಲುಕುತ್ತಾರೆ. ಕೆಲವೊಮ್ಮೆ ಅಕಾಲಿಕ ಮಳೆ ಬಂದು ಬೆಳೆದ ಭತ್ತದ ಬೆಳೆ ನಾಶವಾಗುತ್ತದೆ. ಇನ್ನು ಕೆಲವೊಮ್ಮೆ ಭತ್ತದ ಬೆಳೆ ಕಟಾವಿಗೆ ಬಂದ ಸಮಯದಲ್ಲಿ ಕ್ರಿಮಿಕೀಟಗಳ ಹಾವಳಿಗೆ ಬೆಳೆ ನಾಶವಾಗುತ್ತದೆ. ಹೀಗೆ ಹಲವಾರು ಸಮಸ್ಯೆಗಳಿಂದ ರೈತರು ನಲುಗಿ ಹೋಗಿದ್ದಾರೆ. ನೀರಾವರಿ ಇಲಾಖೆ 31/3/2 ಕಾಲುವೆ ವ್ಯಾಪ್ತಿಯ ಭೂಮಿಗಳಿಗೆ ಹೆಚ್ಚಿನ ನೀರು ಪೂರೈಕೆಗೆ ಮುಂದಾಬೇಕೆಂಬುದು ರೈತರ ಒತ್ತಾಯವಾಗಿದೆ.
ಟಾಪ್ ನ್ಯೂಸ್
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kushtagi-patte](https://www.udayavani.com/wp-content/uploads/2025/01/Kushtagi-patte-150x90.jpg)
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
![Koppala–women](https://www.udayavani.com/wp-content/uploads/2025/01/Koppala-women-150x90.jpg)
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
![kushtagi-School](https://www.udayavani.com/wp-content/uploads/2024/12/kushtagi-School-150x90.jpg)
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
![watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?](https://www.udayavani.com/wp-content/uploads/2024/12/Melon1-150x100.jpg)
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ](https://www.udayavani.com/wp-content/uploads/2025/01/sari-150x87.jpg)
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
![7-dhaka](https://www.udayavani.com/wp-content/uploads/2025/01/7-dhaka-150x90.jpg)
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-150x100.jpg)
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
![Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?](https://www.udayavani.com/wp-content/uploads/2025/01/roh-150x85.jpg)
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
![Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು](https://www.udayavani.com/wp-content/uploads/2025/01/ramag-150x87.jpg)
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.