ರುಕ್ಮಾಪುರದಲ್ಲಿ ನೀರವ ಮೌನ

•ದುಃಖದಲ್ಲಿ ಮೊಳಗಿದ ಕುಟುಂಬ•ಸರ್ಕಾರ ಕಾರ್ತಿಕ್‌ ಕುಟುಂಬಕ್ಕೆ ನೆರವಾಗಲಿ

Team Udayavani, Sep 9, 2019, 12:52 PM IST

9-Sepctember-11

ಸುರಪುರ: ಅಂಗಾಂಗ ದಾನ ಮಾಡಿದ ರುಕ್ಮಾಪುರ ಗ್ರಾಮದ ಕಾರ್ತಿಕ್‌ನ ಕುಟುಂಬದವರು ದುಃಖೀಸುತ್ತಿರುವುದು.

ಸಿದ್ದಯ್ಯ ಪಾಟೀಲ
ಸುರಪುರ: ಕಾರ್ತಿಕ್‌ ಬಡಗಾ ಜನಿಸಿದ ರುಕ್ಮಾಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಕಾರ್ತಿಕನ ತಂದೆ ಕೀರಪ್ಪ, ತಾಯಿ ಭಾರತಿ ಬಡಗಾ ದುಃಖ ಮಡುಗಟ್ಟಿತ್ತು. ಒತ್ತರಿಸಿ ಬರುತ್ತಿದ್ದ ಅಶ್ರುಧಾರೆ ತಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೂ ಮಗನ ಅಂಗಾಂಗಗಳು ಆರು ಜೀವ ಉಳಿಸಿದವು ಎನ್ನುವ ಧನ್ಯತಾಭಾವ ಅವರ ಮೊಗದಲ್ಲಿತ್ತು.

ಪಾಲಕರನ್ನು ಸಮಾಧಾನ ಪಡಿಸಲು ಬಂಧು-ಬಳಗದವರು, ನೆರೆಹೊರೆಯವರು ಸಾಲುಗಟ್ಟಿ ಬರುತ್ತಿದ್ದರು. ಈ ವೇಳೆ ಇವರೆಲ್ಲ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗದೇ ಕಾರ್ತಿಕ್‌ನ ತಂದೆ-ತಾಯಿ ಪರಿತಪಿಸುತ್ತಿದ್ದ ದೃಶ್ಯ ಕರಳು ಹಿಂಡುವಂತಿತ್ತು.

ಚಿಕಿತ್ಸೆ ತಡವಾಗಿದ್ದೇ ಸಾವಿಗೆ ಕಾರಣ: ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದರೆ ಕಾರ್ತಿಕ್‌ ಬದುಕುಳಿಯ ಬಹುದಾಗಿತ್ತು. ಕೊನೆ ಹಂತದಲ್ಲಿ ಬಂದಿದ್ದರಿಂದ ನಾವೆಷ್ಟೆ ಪ್ರಯತ್ನ ಮಾಡಿದ್ದರೂ ಚಿಕಿತ್ಸೆಗೆ ದೇಹ ಸ್ಪಂದಿಸಲಿಲ್ಲ. ಇದರಿಂದ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಸೊಲ್ಲಾಪುರ ಯೋಶಧರಾ ಆಸ್ಪತ್ರೆ ಡೀನ್‌ ಡಾ| ಬಸವರಾಜ ಕೊಳ್ಳೂರ ಮೊಬೈಲ್ ಮೂಲಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜಾಗೃತಿ ಅಗತ್ಯ: ಕಾರ್ತಿಕ್‌ನನ್ನು ಆವರಿಸಿಕೊಂಡಿದ್ದ ‘ಸರೆಬ್ರಲ್ ವೇನೆಸಿಸ್‌ ಟ್ರೋಮೊrಸಿಸ್‌’ ಎನ್ನುವ ಈ ರೋಗ ಅತ್ಯಂತ ಅಪಾಯಕಾರಿಯಾಗಿತ್ತು. ಈ ರೋಗ ಮೆದುಳಿನ ರಕ್ತ ಪರಿಚಲನೆ ನಿಲ್ಲಿಸುತ್ತದೆ. ಈ ರೋಗದ ಬಗ್ಗೆ ಜನ ಜಾಗೃತಿ ಅವಶ್ಯ ಎಂದು ಸೊಲ್ಲಾಪುರ ಯಶೋಧರಾ ಆಸ್ಪತ್ರೆ ವೈದ್ಯ ಡಾ| ನೀಲರೋಹಿತ ಪಾಕೆ ತಿಳಿಸಿದ್ದಾರೆ.

ಕುಟುಂಬದ ಆರ್ಥಿಕ ಸ್ಥಿತಿ ಗಂಭೀರ: ಈಗಾಗಲೇ ಎರಡು ಮಕ್ಕಳನ್ನು ಕಳೆದುಕೊಂಡಿದ್ದ ಬಡಗಾ ಕುಟುಂಬಕ್ಕೆ ಇದು ಇನ್ನೊಂದು ಆಘಾತ. ಈ ಕುಟುಂಬ ತೀರಾ ಬಡತನದಲ್ಲಿದೆ. ಜೀವನಕ್ಕೆ ಆಧಾರ ಆಗಬೇಕಿದ್ದ ಕಾರ್ತಿಕ್‌ ಸಾವಿನಿಂದ ಕುಟುಂಬ ಕಂಗೆಟ್ಟಿದೆ. ಮಗನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಬಡಗಾ ಕುಟುಂಬಕ್ಕೆ ಸರ್ಕಾರ ಸರಕಾರಿ ನೌಕರಿ ಕೊಡಬೇಕು. ಕುಟುಂಬದ ಆರ್ಥಿಕ ಸ್ಥಿತಿಗೆ ನೆರವಾಗಬೇಕು ಎಂದು ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.