ರಸ್ತೆ ಕೆಸರು ಗದ್ದೆ; ಕಂಡಲ್ಲಿ ಕಸದ ರಾಶಿ


Team Udayavani, Sep 11, 2019, 10:37 AM IST

bg-tdy-2

ಬೈಲಹೊಂಗಲ: ಬಸವೇಶ್ವರ ಆಶ್ರಯ ಕಾಲೋನಿಯ ಕೆಸರಿನ ರಸ್ತೆ.

ಬೈಲಹೊಂಗಲ: ಪಟ್ಟಣದ ಬಸವೇಶ್ವರ ಆಶ್ರಯ ಕಾಲೋನಿಯಲ್ಲಿ ನೈರ್ಮಲ್ಯ ಕೊರತೆ ರಾರಾಜಿಸುತ್ತಿದ್ದು, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುವಂತೆ ಇಲ್ಲಿನ ರಸ್ತೆಗಳು ಕೆಸರುಗದ್ದೆಯಾಗಿ ಸಾರ್ವಜನಿಕರಿಗೆ ನೆಮ್ಮದಿ ಕೆಡಸಿವೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡಂತೆ ಇರುವ ಬಹುತೇಕ ಬಡಾವಣೆಗಳ ಒಳರಸ್ತೆಗಳ ಬದಿ ಸಮರ್ಪಕದ ಕಸದ ತೊಟ್ಟಿ ಇರದ ಪರಿಣಾಮ ಎಲ್ಲೆಂದರಲ್ಲಿ ಕಸದ ರಾಶಿ, ತ್ಯಾಜ್ಯಗಳು ಬಿದ್ದಿವೆ. ಅಲ್ಲಲ್ಲಿ ಹಂದಿ, ಬೀದಿ-ನಾಯಿ ಹಾಗೂ ಬಿಡಾಡಿ ಜಾನುವಾರುಗಳ ತಾಣವಾಗಿ ಮಾರ್ಪಟ್ಟಿದೆ.

ಎಲ್ಲೆಂದರಲ್ಲಿ ಕಸದ ರಾಶಿ: ಸರಕಾರಿ ಗೋಮಾಳ ಜಾಗೆ ಬಳಿ ಹಂದಿಗಳ ತಾಣವಾಗಿದೆ. ಎಲ್ಲ ಸಮುದಾಯ ಜನ ವಾಸಿಸುವ ಬಡಾವಣೆ ಜನತೆಗೆ ಎಲ್ಲ ಓಣಿಯಲ್ಲಿ ನೆರ್ಮಲ್ಯ ಕೊರತೆಯಿಂದ ನಾನಾ ಸಾಂಕ್ರಮಿಕ ರೋಗಗಳ ಭೀತಿ ಎದುರಿಸುವಂತಾಗಿದೆ. ರಸ್ತೆ ಮೇಲೆ ಕೆಲ ದಿನಗಳಿಂದ ಬಿದ್ದಿರುವ ಮಳೆಯಿಂದ ರಸ್ತೆಗಳು ಕೆಸರುಮಯವಾಗಿ ಪರಿಣಮಿಸಿದೆ. ಪೌರ ಕಾರ್ಮಿಕರು ಸ್ಚಚ್ಛತೆ ಕಾಪಾಡಲು ಮುಂದಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾದರೆ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರೋಗ ತಡೆಗೆ ಕ್ರಮ ಕೈಗೊಳ್ಳಿ: ಇದೇ ಕಾಲೋನಿ ಸಮುದಾಯ ಭವನದ ಬಳಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಮಳೆಯಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡು ಆಶ್ರಯವಿಲ್ಲದೆ ಸಮುದಾಯ ಭವನದಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಅಂಥವರನ್ನು ಕಂಡು ಸೂಕ್ತ ಮನೆ ಒದಗಿಸಲು ಪ್ರಯತ್ನಿಸುತ್ತಿಲ್ಲ. ಸರಕಾರಿ ಸಾರ್ವಜನಿಕ ಆಸ್ಪತ್ರೆ ಬಳಿ ಈ ಕಾಲೋನಿ ಇದ್ದರೂ ಕಾಲೋನಿಯ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ದೂರಿದ್ದಾರೆ.

ರಸ್ತೆ ಸ್ವಚ್ಛತೆಗೆ ಒತ್ತಾಯ: ಬಸವೇಶ್ವರ ಆಶ್ರಯ ನಗರ ಸರಕಾರಿ ಪ್ರಾಥಮಿಕ ಶಾಲೆ ನಂ.8 ಇಲ್ಲಿ ಕಸ ಬೆಳೆದು ನಿಂತಿದೆ. ಶಾಲೆಯ ಮುಂದೆಯ ರಾಡಿ ಇದ್ದರೂ ಅದನ್ನು ಸ್ವಚ್ಛಗೊಳಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳು ಇಂಥ ಕೆಸರು ರಸ್ತೆಯಲ್ಲಿ ನಡೆದು ಶಾಲೆಗೆ ಬರಬೇಕಿದೆ. ಹೀಗಾಗಿ ಹಲವು ಬಾರಿ ಮಕ್ಕಳು ಜಾರಿ ರಸ್ತೆಯಲ್ಲಿ ಬಿದ್ದು ಪೆಟ್ಟು ತಗುಲಿದ ಉದಾಹರಣೆ ಸಾಕಷ್ಟಿವೆ ಎಂದು ನಾಗರಿಕರು ದೂರಿದ್ದಾರೆ.

 

•ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.