ಜಟಿಲವಾದ ಶಿಕ್ಷಕರ ನೇಮಕಾತಿ ಸಮಸ್ಯೆ

•ಅವೈಜ್ಞಾನಿಕ ನಿಯಮದಿಂದ ಖಾಲಿ ಉಳಿದ ಹುದ್ದೆ•ಮೆರಿಟ್ ಆಧಾರದಲ್ಲಿ ನೇಮಕಕ್ಕೆ ಆಗ್ರಹ

Team Udayavani, Sep 13, 2019, 11:28 AM IST

Udayavani Kannada Newspaper

ಗಂಗಾವತಿ: ಶೈಕ್ಷಣಿಕ ಬದಲಾವಣೆಗಾಗಿ ರಾಜ್ಯ ಸರಕಾರ ಹಲವು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಭರ್ತಿ ಮಾಡಲಾಗುತ್ತಿದೆ. ಶೈಕ್ಷಣಿಕ ವ್ಯವಸ್ಥೆಯನ್ನು ಪೂರ್ವಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗವಾಗಿ ವಿಂಗಡಿಸಿ ಆಯಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ. 2016-17ರಲ್ಲಿ ಖಾಲಿ ಇದ್ದ 3000 ಕಲಾ, ವಿಜ್ಞಾನ ಭಾಷಾ ವಿಷಯ ಶಿಕ್ಷಕರ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿತ್ತು. ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರಿಂದ 2017-18ರಲ್ಲಿ ಉಳಿದ ಹುದ್ದೆಗಳನ್ನು ಸೇರ್ಪಡೆ ಮಾಡಿ 10,700 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಯಿತು. ಸಿಇಟಿ ಪರೀಕ್ಷೆಯಲ್ಲಿ 2,700 ಜನ ಕಲಾ ಮತ್ತು ಕನ್ನಡ ವಿಷಯದ ಅಭ್ಯರ್ಥಿಗಳು ಅರ್ಹತೆ ಪಡೆದು 8000 ಹುದ್ದೆಗಳು ಪುನಃ ಖಾಲಿ ಉಳಿದವು. ಇದರಲ್ಲಿ ಕಲ್ಯಾಣ (ಹೈಕ) ಕರ್ನಾಟಕದಲ್ಲಿ ಸುಮಾರು 5000 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಮೂರು ವರ್ಷಗಳಿಂದ ಟಿಜಿಟಿ ಅರ್ಹತೆ ಪಡೆದ ಶಿಕ್ಷಕರು ಖಾಲಿ ಇರುವ ವಿಜ್ಞಾನ ಮತ್ತು ಆಂಗ್ಲಭಾಷೆ ಹುದ್ದೆಗಳಿಗೆ ನೇಮಕವಾಗುತ್ತಿಲ್ಲ. ಇದರಿಂದ ರಾಜ್ಯದ ಬಹುತೇಕ ಪ್ರೌಢಶಾಲೆಗಳಲ್ಲಿ ವಿಜ್ಞಾನ ಮತ್ತು ಇಂಗ್ಲಿಷ್‌ ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಆಯ್ಕೆ ವಿಧಾನ ಅವೈಜ್ಞಾನಿಕ: 6-8ನೇ ತರಗತಿ ಶಿಕ್ಷಕರ ನೇಮಕ ಪ್ರಕ್ರಿಯೆ ಅವೈಜ್ಞಾನಿಕವಾಗಿದೆ ಎಂದು ಅಭ್ಯರ್ಥಿಗಳ ಆರೋಪವಾಗಿದೆ. ಟಿಇಟಿ ಪರೀಕ್ಷೆ ಬರೆದು ಅರ್ಹರಾದವರು ಮಾತ್ರ ಶಿಕ್ಷಕ ಹುದ್ದೆಗಳ ನೇಮಕಾತಿಯ ಸಿಇಟಿಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಿರುತ್ತಾರೆ. ಪ್ರಸ್ತುತ ಸಿಇಟಿ ಪರೀಕ್ಷೆಯ ಪಠ್ಯ ಎನ್‌ಸಿಆರ್‌ಟಿ ವಿಷಯಗಳನ್ನೊಳಗೊಂಡಿದೆ. ಬಹು ಆಯ್ಕೆಯ 50 ಅಂಕಗಳ ಪ್ರಶ್ನೆ, ವಿವರಣಾತ್ಮಕ 100 ಅಂಕಗಳ ಪ್ರಶ್ನೆಗಳಿದ್ದು, ಅಭ್ಯರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಶೇ. 50ಕ್ಕಿಂತ (75 ಅಂಕಕ್ಕಿಂತ) ಕಡಿಮೆ ಅಂಕ ಪಡೆದರೆ ಅವರು ನೇಮಕಾತಿ ಆಗುವುದಿಲ್ಲ. ಇದರಿಂದ 2016ರಿಂದ ಇಲ್ಲಿಯ ತನಕ 10700 ಹುದ್ದೆಗಳ ಪೈಕಿ ಕೇವಲ 2700 ಹುದ್ದೆ ಮಾತ್ರ ಭರ್ತಿಯಾಗಿವೆ.

ಹುಸಿಯಾದ ಭರವಸೆ: 6-8ನೇ ತರಗತಿ ಬೋಧನೆ ಮಾಡಲು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅವೈಜ್ಞಾನಿಕವಾಗಿದ್ದು ಇದನ್ನು ಬದಲಿಸುವಂತೆ 2016ರಿಂದ ಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳು ರಾಜ್ಯ ಸರಕಾರವನ್ನು ಒತ್ತಾಯಿಸುತ್ತ ಬಂದಿದ್ದಾರೆ. 2018ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಇಟಿ ಪರೀಕ್ಷೆ ಅರ್ಹತೆ ಬದಲಿಗೆ ಟಿಇಟಿ ಮತ್ತು ಸಿಇಟಿ ಮೇರಿಟ್ ಆಧಾರದಲ್ಲಿ ನೇಮಕಾತಿ ಮಾಡುವ ಭರವಸೆ ನೀಡಿ ನಂತರ ಅದನ್ನು ಅನುಷ್ಠಾನಗೊಳಿಸಲು ಮರೆತರು.

2016ರಿಂದ ಕಲ್ಯಾಣ(ಹೈದ್ರಾಬಾದ್‌)ಕರ್ನಾಟಕದಲ್ಲಿ ವಿಜ್ಞಾನ ಮತ್ತು ಆಂಗ್ಲಭಾಷೆ ವಿಷಯದ ಸುಮಾರು 5000 ಹುದ್ದೆಗಳು ಖಾಲಿ ಇದ್ದು, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರಕಾರ ವಿಫಲವಾಗುತ್ತಿದೆ. ಸರಕಾರ ಮಾನವೀಯತೆ ಆಧಾರದಲ್ಲಿ ಕೂಡಲೇ ಟಿಇಟಿ ಉತ್ತೀರ್ಣರಾಗಿ ಸಿಇಟಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳನ್ನು ನೇಮಕ ಮಾಡುವ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಬೇಕು.

 

•ಕೆ. ನಿಂಗಜ್ಜ

ಟಾಪ್ ನ್ಯೂಸ್

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.