ಯು ಟರ್ನ್ ಬಂದ್ಗೆ ಸಾರ್ವಜನಿಕರ ಆಕ್ಷೇಪ
Team Udayavani, Sep 20, 2019, 5:25 AM IST
ಉಪ್ಪುಂದ: ನಾಗೂರು ರಾ.ಹೆದ್ದಾರಿ 66ರ ಆಂಜನೇಯ ದೇವಸ್ಥಾನದ ಎದುರು ಇರುವ ಯು ಟರ್ನ್ ಬಂದ್ ಮಾಡಲು ಸ್ಥಳೀಯ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.
ಚತುಷ್ಪಥ ಕಾಮಗಾರಿ ಕಂಪನಿ ಅಧಿಕಾರಿಗಳು ಗುರುವಾರ ಬೆಳಗ್ಗೆ ಸಿಬಂದಿಗಳೊಂದಿಗೆ ಆಂಜನೇಯ ದೇವಸ್ಥಾನದ ಎದುರು ಚತುಷ್ಪಥ ರಸ್ತೆ ಕಾಮಗಾರಿ ಸಂದರ್ಭ ಯು ಟರ್ನ್ ಬಿಟ್ಟಿರುವುದರಿಂದ ಅದನ್ನು ಮುಚ್ಚಲು ಸಲಕರಣಗಳ ಸಮೇತ ಸ್ಥಳಕ್ಕೆ ಆಗಮಿಸಿದರು. ಇದನ್ನು ತಿಳಿದ ಸ್ಥಳೀಯರು ಕಾಮಗಾರಿ ಪ್ರದೇಶದಲ್ಲಿ ಜಮಾಯಿಸಿ ಇದನ್ನು ಬಂದ್ ಮಾಡುವುದರಿಂದ ಸಾರ್ವಜನಕರಿಗೆ, ವಾಹನ ಸವಾರರಿಗೆ ಸಮಸ್ಯೆ ಉಂಟಾಗುತ್ತದೆ. ಆದರಿಂದ ಇದನ್ನು ಮುಚ್ಚಲು ಅವಕಾಶ ನೀಡುವುದಿಲ್ಲ ಎಂದರು.
ಸ್ಥಳಕ್ಕಾಗಮಿಸಿದ ಬೈಂದೂರು ಪೊಲೀಸ್ ಮಹಾಬಲ ಹಾಗೂ ಐಆರ್ಬಿ ಆಧಿಕಾರಿಗಳು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಈಗಾಗಲೇ ಮಸೀದಿ ಬಳಿ ಯು ಟರ್ನ್ ಇರುವುದರಿಂದ ಇಲ್ಲಿ ಇದನ್ನು ಹಾಗೇ ಬಿಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಯು ಟರ್ನ್ ಬಂದ್ ಮಾಡಬೇಕಾದ ಅನಿವಾರ್ಯತೆಯ ಕುರಿತು ಸ್ಥಳೀಯರಿಗೆ ಮನದಟ್ಟು ಮಾಡಿದರು.
ಸಾರ್ವಜನಿಕರ ಸಮಸ್ಯೆಗೆ ಪರಿಹಾರಕ್ಕಾಗಿ ಪರ್ಯಾಯವಾಗಿ ನಾಗೂರು ಮಸೀದಿ ಬಳಿಯಿಂದ ದೇವಸ್ಥಾನದ ವರೆಗೆ ಸರ್ವಿಸ್ ರಸ್ತೆ ನಿರ್ಮಿಸುವಂತೆ ಮನವಿ ಮಾಡಿದಾಗ ಹೊಸದಾಗಿ ಸರ್ವಿಸ್ ರಸ್ತೆ ನಿರ್ಮಿಸಲು ಅವಕಾಶ ಇಲ್ಲ ಎಂದರು.
ಪೊಲೀಸ್ ಅಧಿಕಾರಿ ಮಹಾಬಲ ಅವರು ಮಸೀದಿ ಸಮೀಪ ಸಂಚಾರಕ್ಕೆ ಅನುಕೂಲವಾಗುವಂತೆ ಮಣ್ಣನ್ನು ಸಮತಟ್ಟುಗೊಳಿಸಿ ಸಾರ್ವಜನಿಕರು ನಿತ್ಯ ಓಡಾಡಟಕ್ಕೆ ಅನುಕೂಲ ಮಾಡಿಕೊಡಲು ಸಹಕರಿಸುವಂತೆ ತಿಳಿಸಿದ್ದಾರೆ. ಇದಕ್ಕೆ ಐಆರ್ಬಿ ಅಧಿಕಾರಿಗಳೂ ಒಪ್ಪಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.