ಝೂನಲ್ಲಿ ವಿಶ್ವ ಘೇಂಡಾಮೃಗ ದಿನಾಚರಣೆ


Team Udayavani, Sep 23, 2019, 3:00 AM IST

zoonalli

ಮೈಸೂರು: ವಿಶ್ವ ಘೇಂಡಾಮೃಗ ದಿನದ ಅಂಗವಾಗಿ ಚಾಮರಾಜೇಂದ್ರ ಮೃಗಾಲಯದಲ್ಲಿ ಭಾನುವಾರ ಪ್ರವಾಸಿಗರಿಗೆ ಫೇಂಡಾಮೃಗಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಅವುಗಳ ಸಂತತಿ ರಕ್ಷಣೆ ಬಗೆಗೆ ಅರಿವು ಮೂಡಿಸಲಾಯಿತು.

ಮೃಗಾಲಯದಲ್ಲಿನ ಘೇಂಡಾಮೃಗಗಳ ಕೇಜ್‌ ಬಳಿ ಮೃಗಾಲಯದ ವತಿಯಿಂದ ವಿಶ್ವ ಘೇಂಡಾಮೃಗಗಳ ದಿನ ಶುಭಾಶಯ ಕೋರುವ ಬ್ಯಾನರ್‌ ಹಾಕಿ, ಘೇಂಡಾಮೃಗಗಳ ಜೀವನ ಕ್ರಮ ವಿವರಣೆ ನೀಡಲು ಓರ್ವ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದಿನಾಚರಣೆ ಭಾನುವಾರವಾಗಿದ್ದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಅಲ್ಲದೆ ಯೂತ್‌ ಕ್ಲಬ್‌ ವಿದ್ಯಾರ್ಥಿಗಳ ತರಗತಿಯೂ ನಡೆಯುತ್ತಿದ್ದರಿಂದ ಘೇಂಡಾಮೃಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾಹಿತಿ ಕಲೆ ಹಾಕಿದರು.

ಪ್ರವಾಸಿಗರಿಗೆ ವಿವರಿಸಲು ಮೃಗಾಲಯದ ಜೀವಶಾಸ್ತ್ರಜ್ಞರಾದ ಸಿ.ಸ್ನೇಹಾ ಎಂಬುವರನ್ನು ನಿಯೋಜಿಸಲಾಗಿತ್ತು. ಸಸ್ಯಹಾರಿ ಪ್ರಾಣಿಯಾಗಿರುವ ಘೇಂಡಾಮೃಗವು ಐದು ಪ್ರಬೇಧಗಳಲ್ಲಿ ಕಂಡು ಬರುತ್ತವೆ. ಬಿಳಿ ಮತ್ತು ಕಪ್ಪು ಘೇಂಡಾಮೃಗ, ಒಂದು ಕೊಂಬಿನ ಘೇಂಡಾಮೃಗ, ಸುಮಾತ್ರ ಘೇಂಡಾಮೃಗ ಹಾಗೂ ಜಾವನ್‌ ಘೇಂಡಾಮೃಗ ಎಂದು ವಿಂಗಡಿಸಲಾಗಿದೆ.

ವಿಶ್ವದಲ್ಲಿಯೇ ಕೇವಲ 30 ಸಾವಿರವಷ್ಟೇ ಘೇಂಡಾಮೃಗಳಿದ್ದು, ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿದೆ. ಭಾರತದಲ್ಲಿ 2600 ಘೇಂಡಾಮೃಗಗಳು ಇವೆ. ಅಸ್ಸಾಂ ಹೆಚ್ಚಿನ ಸಂಖ್ಯೆಯಲ್ಲಿ ಘೇಂಡಾಮೃಗ ಹೊಂದಿರುವ ರಾಜ್ಯವಾಗಿದೆ. ಆದರೆ ಈ ಪ್ರಾಣಿಯನ್ನು ಕೊಂಬಿಗಾಗಿ ಬೇಟೆಯಾಡುತ್ತಿದ್ದಾರೆ.

ಇದನ್ನು ತಪ್ಪಿಸಿ ಮುಂದಿನ ಪೀಳಿಗೆಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ವಿಶ್ವ ವನ್ಯಜೀವಿ ನಿಧಿ ಸಂಸ್ಥೆಯು 2010ರಿಂದ ಸೆ.22ರಂದು ವಿಶ್ವ ಘೇಂಡಾಮೃಗ ದಿನವಾಗಿ ಆಚರಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಮೈಸೂರು ಮೃಗಾಲಯದಲ್ಲಿ ಒಂದು ಜೊತೆ ಬಿಳಿ ಘೇಂಡಾಮೃಗ, ಒಂದು ಜೋಡಿ ಭಾರತೀಯ ಘೇಂಡಾಮೃಗವಿದೆ ಎಂದು ಪ್ರವಾಗಿಸಿಗರಿಗೆ ವಿವರಿಸಿದರು.

ಇದೇ ವೇಳೆ ಘೇಂಡಾಮೃಗಗಳ ಜೀವಿತಾವಧಿ, ಆಹಾರ ಪದ್ಧತಿ, ಸಂತಾನೋತ್ಪತ್ತಿ ಸೇರಿದಂತೆ ಇನ್ನಿತರ ವಿಷಯವನ್ನು ಪ್ರವಾಸಿಗರು ಕೇಳಿ ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ಆರ್‌ಎಫ್ಓ ರಕ್ಷಿತ್‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಮೈಸೂರಿನ ಮೃಗಾಲಯದಲ್ಲಿ ಭಾನುವಾರ ವಿಶ್ವ ಘೇಂಡಾಮೃಗ ದಿನ ಆಚರಿಸಿ ಪ್ರವಾಸಿಗರಲ್ಲಿ ಘೇಂಡಾ ಮೃಗಗಳ ರಕ್ಷಣೆ ಕುರಿತಂತೆ ಜಾಗೃತಿ ಮೂಡಿಸಲಾಯಿತು.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.