ನಾಡಕುಸ್ತಿಗೆ ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಚಾಲನೆ


Team Udayavani, Sep 23, 2019, 3:00 AM IST

nada-kustige

ಮೈಸೂರು: ದಸರಾ ಮಹೋತ್ಸವ ನಾಡ ಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಭಾನುವಾರ ಚಾಲನೆ ದೊರೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ಬಿ.ವಿ.ಕಾರಂತ ರಂಗಮಂದಿರದಲ್ಲಿ ಜೋಡಿ ಕಟ್ಟುವ ಕಾರ್ಯದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 400ಕ್ಕೂ ಹೆಚ್ಚು ಪೈಲ್ವಾನರು ಭಾಗವಹಿಸಿದ್ದರು. ಮೊದಲ ದಿನವಾದ ಭಾನುವಾರ ವಯೋಮಿತಿ ಮತ್ತು ತೂಕದ ಆಧಾರದ ಮೇಲೆ 120 ಜೋಡಿ ಪೈಲ್ವಾನರ ಜೋಡಿ ಕಟ್ಟಲಾಯಿತು.

ಬೆಂಗಳೂರು, ಕನಕಪುರ, ನಂಜನಗೂಡು, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ, ಮೈಸೂರು ಗರಡಿಗಳಿಂದ ಪೈಲ್ವಾನರು ಭಾಗವಹಿಸಿದ್ದರು. ಇನ್ನೆರೆಡು ದಿನಗಳಲ್ಲಿ ಜೋಡಿ ಕಟ್ಟುವ ಕಾರ್ಯ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಸುಮಾರು 200 ಜೋಡಿಗಳು ನಾಡಕುಸ್ತಿಯಲ್ಲಿ ಭಾಗವಹಿಸಲಿವೆ. ಉದ್ಘಾಟನೆ ಸಮಾರಂಭಕ್ಕೆ ಉತ್ತಮ 25 ಜೋಡಿಗಳನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ ಎಂದು ಸಂಘಟಕರು ತಿಳಿಸಿದರು.

ನವರಾತ್ರಿಯ ಮೊದಲ ದಿನವಾದ ಸೆ. 29 ರಂದು ವಸ್ತು ಪ್ರದರ್ಶನ ಆವರಣದ ದೇವರಾಜ ಅರಸು ಕುಸ್ತಿ ಅಖಾಡದಲ್ಲಿ ನಾಡ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಅ.4ರಂದು ಮುಗಿಯಲಿದೆ. ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಪಂದ್ಯಗಳು ಆರಂಭವಾಗಲಿದ್ದು, 20 ರಿಂದ 25 ನಾಡ ಕುಸ್ತಿಗಳು ಹಾಗೂ 1 ದೊಡ್ಡ ಕುಸ್ತಿ ನಡೆಯಲಿದೆ. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ದಂಡ ಹಿಡಿದು ತಿರುಗಿಸಿ ಜೋಡಿ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಿ, ದಸರಾ ಮೂಲಕ ಪೈಲ್ವಾನರು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.

ಪೈಲ್ವಾನ್‌ ಪ್ರೊ.ರಂಗಯ್ಯ ಮಾತನಾಡಿ, ದಸರಾದಲ್ಲಿ ಉಳಿದ ಕಾರ್ಯಕ್ರಮಗಳಿಗಿಂತ ನಾಡಕುಸ್ತಿ ಹೆಚ್ಚು ಆಕರ್ಷಕವಾಗಿರುತ್ತದೆ. ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕುಮಾರ ಪ್ರಶಸ್ತಿಗಳನ್ನು ಗೆಲ್ಲುವುದು ಪೈಲ್ವಾನರ ಕನಸಾಗಿರುತ್ತದೆ. ನಾಡಕುಸ್ತಿಯನ್ನು ರಾಜ ಮಹಾರಾಜರ ಕಾಲದಿಂದಲೂ ಯಶಸ್ವಿಯಾಗಿ ನಡೆಸಲಾಗುತ್ತದೆ. ದಸರಾ ಕುಸ್ತಿಯಿಂದ ಸಾವಿರಾರು ಪೈಲ್ವಾನರು ಬೆಳೆದಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸ್ನೇಹ, ದಸರಾ ಕುಸ್ತಿ ಸಮಿತಿ ಕಾರ್ಯದರ್ಶಿ ರವಿಕುಮಾರ್‌, ಹಿರಿಯ ಪೈಲ್ವಾನರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.