ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಜಿಲ್ಲೆಯ ರೈತರಿಗೆ ವರದಾನ
ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಭಾ.ಕಿ.ಸಂ.
Team Udayavani, Sep 28, 2019, 5:20 AM IST
ಉಡುಪಿ: ಜಿಲ್ಲೆಯ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರ ಹಿತಾಸಕ್ತಿಯ ದೃಷ್ಟಿಯಿಂದ ಜಾರಿಗೆ ತರಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಒಂದು ಉತ್ತಮ ಪರಿಹಾರ ಯೋಜನೆಯಾಗಿದೆ. ಅತೀ ಹೆಚ್ಚು ಅಥವಾ ಅತೀ ಕಡಿಮೆ ಮಳೆ ಸುರಿದು, ಫಸಲಿನಲ್ಲಾಗುವ ನಷ್ಟವನ್ನು ಭರಿಸಲು ರೈತರಿಗೆ ಈ ಯೋಜನೆ ಉತ್ತಮ ಕಾರ್ಯಕ್ರಮವಾಗಿದೆ ಎಂದು ಭಾ.ಕಿ.ಸಂ. ಅಭಿಪ್ರಾಯ ಪಟ್ಟಿದೆ.
ಜಿಲ್ಲಾಧ್ಯಕ್ಷ ನವೀನ್ಚಂದ್ರ ಜೈನ್ ಅವರ ನೇತೃತ್ವದಲ್ಲಿ ಸೆ. 26ರಂದು ನಡೆದ ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಅಡಿಕೆ ಕೊಳೆರೋಗದಿಂದ ನಷ್ಟವಾದ ರೈತರು ಅರ್ಜಿಯನ್ನು ತೋಟಗಾರಿಕಾ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ನೀಡಬೇಕು. ಹಿಂದಿನ ವರ್ಷದ ಕೊಳೆರೋಗದ ಪರಿಹಾರದ ವಿತರಣೆಯ ಬಗ್ಗೆಯೂ ಸಂಘಟನೆ ವಿಚಾರ ವಿಮರ್ಶೆ ಮಾಡಿ ಇನ್ನೂ ಪರಿಹಾರ ಸಿಗದ ರೈತರಿಗೆ ಯಾವ ಕಾರಣಕ್ಕೆ ಪರಿಹಾರ ಲಭಿಸಿಲ್ಲ ಎಂಬುದರ ಬಗ್ಗೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದೆ. ರೈತರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿರುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಪಡಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ರೈತರಿಗೆ ಸಹಾಯಧನದ ಮೂಲಕ ನೀಡಲಾಗುವ ಗೋಬರ್ಗ್ಯಾಸ್ ಘಟಕಗಳ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೋಶಾಧಿಕಾರಿ ವಾಸುದೇವ ಶ್ಯಾನುಭಾಗ್, ಉಪಾಧ್ಯಕ್ಷ ಶ್ರೀನಿವಾಸ ಭಟ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ವಿ.ಪೂಜಾರಿ, ಸಮಿತಿಯ ಪ್ರಮುಖರಾದ ಸದಾನಂದ ಶೆಟ್ಟಿ, ಪಾಂಡುರಂಗ ಹೆಗ್ಡೆ, ಸುಂದರ ಶೆಟ್ಟಿ, ಆಸ್ತೀಕ ಶಾಸ್ತ್ರೀ, ಪದ್ಮನಾಭ ಶೆಟ್ಟಿ, ಸೀತಾರಾಮ ಗಾಣಿಗ, ವಿಶ್ವನಾಥ ಶೆಟ್ಟಿ, ಉಮಾನಾಥ ರಾನಡೆ, ಕೆ.ಪಿ ಭಂಡಾರಿ, ಪ್ರಾಣೇಶ ಯಡಿಯಾಳ, ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.