ರಿಯಾಜ್‌ ಭಟ್ಕಳ್‌ ಸಹಚರ ಉಗ್ರನ ತೀವ್ರ ವಿಚಾರಣೆ!


Team Udayavani, Sep 28, 2019, 3:06 AM IST

ccb

ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಓಬಾಮಾ 2015ರ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಆಗಮಿಸಿದ್ದ ವೇಳೆ ದೇಶದ ಹಲವೆಡೆ ಬಾಂಬ್‌ಸ್ಫೋಟ ನಡೆಸಲು ರೂಪಿಸಿದ್ದ ಸಂಚಿನ ಮಾಸ್ಟರ್‌ಮೈಂಡ್‌, ಇಂಡಿಯನ್‌ ಮುಜಾಹಿದ್ದೀನ್‌ (ಐಎಂ) ಉಗ್ರ ಭಟ್ಕಳ ಮೂಲದ ಜೈನುಲ್ಲಾಬ್ಬೀನ್‌ ಎಂಬ ಮಾಹಿತಿ ಹೊರಬಿದ್ದಿದೆ.

ಈ ಸಂಚು ರೂಪಿಸಿದ ಆರೋಪ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಶಂಕಿತ ಉಗ್ರರು ವಿಚಾರಣೆ ವೇಳೆ ನೀಡಿದ್ದ ಮಾಹಿತಿ ಆಧರಿಸಿ ಮುಂಬೈನ ಆರ್ಥರ್‌ ಜೈಲಿನಲ್ಲಿದ್ದ ಉಗ್ರ ಜೈನುಲ್ಲಾಬ್ಬೀನ್‌ ಎಂಬಾತನನ್ನು ವಶಕ್ಕೆ ಪಡೆದು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ದ ಎಸಿಪಿ ವೆಂಕಟೇಶ್‌ ಪ್ರಸನ್ನ ಮತ್ತವರ ತಂಡ ತೀವ್ರ ವಿಚಾರಣೆ ನಡೆಸುತ್ತಿದೆ.

ಆತನ ವಿಚಾರಣೆಯಿಂದ ದೇಶದಲ್ಲಿ ಅಲ್ಲಲ್ಲಿ ನಡೆದಿದ್ದ ನಡೆಸಿದ ಸ್ಫೋಟಕ ಕೃತ್ಯಗಳಲ್ಲಿ ಜೈನಾಲ್ಲಾದ್ದೀನ್‌ ಮಾಸ್ಟರ್‌ ಮೈಂಡ್‌ ಎಂದು ಮೂಲಗಳು ತಿಳಿಸಿವೆ. ಆತನ ವಿಚಾರಣೆಯಿಂದ ದಕ್ಷಿಣ ಭಾರತದಲ್ಲಿ, ಪ್ರಮುಖವಾಗಿ ಕರ್ನಾಟಕದಲ್ಲಿ ನಡೆಸಿರುವ ಸ್ಫೋಟಕ ಕೃತ್ಯಗಳ ಮಾಹಿತಿ ದೊರೆಯಬಹುದು ಎನ್ನಲಾಗಿದೆ.

2015ರ ಜನವರಿಯಲ್ಲಿ ಕಾರ್ಯಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸ್ಫೋಟಕ ಸರಬರಾಜು ಮಾಡಿದ, ಸ್ಫೋಟಕ ಸಂಗ್ರಹಿಸಿದ್ದ ಭಟ್ಕಳ ಮೂಲದ ಸೈಯದ್‌ ಇಸ್ಮಾಯಿಲ್‌ ಅಫಾಕ್‌, ಅಬ್ದುಲ್‌ ಸಬೂರ್‌, ಸದ್ದಾಂ ಹುಸೇನ್‌, ರಿಯಾಜ್‌ ಅಹಮದ್‌ ಸೈಯದಿ ಎಂಬುವವರನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೆ ಫ್ರೆಜರ್‌ಟೌನ್‌ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ಜಪ್ತಿ ಮಾಡಿಕೊಂಡಿದ್ದರು.

ಆರೋಪಿಗಳಿಗೂ ಹಾಗೂ ಜೈನುಲ್ಲಾಬ್ಬೀನ್‌ಗೆ ಸಂಪರ್ಕವಿದ್ದ ಬಗ್ಗೆ ಸಂಪರ್ಕ ಇರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಅಲ್ಲದೆ, ಜೈನುಲ್ಲಾಬ್ಬೀನ್‌ ಸೂಚನೆ ಮೇರೆಗೆ ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಗತಿಯೂ ಗೊತ್ತಾಗಿತ್ತು. ಆದರೆ, ಆತ ಎಲ್ಲಿದ್ದಾನೆ ಎಂಬುದುರ ಬಗ್ಗೆ ಸುಳಿವು ನೀಡಿರಲಿಲ್ಲ.

ಈ ಬೆನ್ನಲ್ಲೇ ಜೈನುಲ್ಲಾಬ್ಬೀನ್‌ ಮುಂಬೈನಲ್ಲಿ 2011ರಲ್ಲಿ ಜವೇರಿ ಬಜಾರ್‌, ಖಬೂತರ್‌ ಖಾನಾ ಸೇರಿ ಮೂರು ಕಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಅರ್ಥರ್‌ ರಸ್ತೆ ಜೈಲಿನಲ್ಲಿರುವ ಬಗ್ಗೆ ಮಾಹಿತಿ ಖಚಿತವಾಗಿತ್ತು. ಈ ಮಾಹಿತಿ ಆಧರಿಸಿ ನ್ಯಾಯಾಲಯಕ್ಕೆ ಬಾಡಿವಾರೆಂಟ್‌ ಸಲ್ಲಿಸಿ ಆತನನ್ನು ವಶಕ್ಕೆ ಪಡೆದು ಕರೆತರಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಐಎಂ ಸಂಘಟನೆಯ ಸ್ಥಾಪಕ ರಿಯಾಜ್‌ ಭಟ್ಕಳ್‍ನ ಆಪ್ತನಾಗಿರುವ ಜೈನುಲ್ಲಾಬ್ಬೀನ್‌ ಆತನ ಸೂಚನೆ ಮೇರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಐಎಂ ಸಂಘಟನೆ ಬಲಗೊಳಿಸುತ್ತಿದ್ದ. 2011ರಿಂದ 2014ರವರೆಗೆ ದೇಶದಲ್ಲಿ ನಡೆದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸಹಚರರ ಮೂಲಕ ಸ್ಫೋಟಕ ರವಾನಿಸಿದ್ದಾನೆ. ಅಷ್ಟೇ ಅಲ್ಲದೆ, ಫ್ರೆಜರ್‌ಟೌನ್‌ನಲ್ಲಿ ಬಂಧಿತರಾದ ಆರೋಪಿಗಳ ಜತೆ ನೇರ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಜೈಲಿನಲ್ಲಿದ್ದ ಐಎಂ ಸಂಘಟನೆಯ ಸದಸ್ಯ ಜೈನುಲ್ಲಾಬ್ಬೀನ್‌ನನ್ನು ಹೆಚ್ಚಿನ ವಿಚಾರಣೆ ಸಲುವಾಗಿ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
-ಕುಲದೀಪ್‌ ಕುಮಾರ್‌ ಜೈನ್‌, ಸಿಸಿಬಿ ಡಿಸಿಪಿ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.