![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 1, 2019, 5:28 PM IST
ಕೋಲಾರ: ತಾಲೂಕಿನ ತೊರದೇವಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುವಂತೆ ಕರ್ನಾಟಕ ಪ್ರಾಂತ ರೈತ ಸಂಘ ಗ್ರಾಪಂ ಮುಂದೆ ಧರಣಿ ನಡೆಸಿತು.
ಕುಡಿಯುವ ನೀರು, ಚರಂಡಿ, ರಸ್ತೆ, ಇಸ್ವತ್ತು, ಬೀದಿದೀಪ, ಮನೆ, ನಿವೇಶನ ಹಾಗೂ ಸ್ವತ್ಛತೆ ಕೈಗೊಳ್ಳುತ್ತಿಲ್ಲ, ಕೇಂದ್ರ, ರಾಜ್ಯದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಪಿಡಿಒ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ. ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಮಾತನಾಡಿ, ಗ್ರಾಪಂ ವ್ಯಾಪ್ತಿಯ ನಿವೇಶನ ರಹಿತರನ್ನು ಗುರುತಿಸಿ ಮನೆ ಕಟ್ಟಿಕೊಳ್ಳಲು ಜಾಗ ನೀಡಬೇಕು. ಎಸ್ಸಿ, ಎಸ್ಟಿಗೆ ಮೀಸಲಾದ ಹಣವನ್ನು ಪಾರದರ್ಶಕವಾಗಿ ಉಪಯೋಗಿಸಬೇಕು. ಬಹುತೇಕ ಗ್ರಾಮಗಳಲ್ಲಿನ ಚರಂಡಿ ದುರಸ್ತಿ ಮಾಡಿ ವರ್ಷಗಳೇ ಕಳೆದಿವೆ. ಇದರಿಂದಾಗಿ ಸೊಳ್ಳೆಗಳು ಹೆಚ್ಚಾಗಿ ಮಲೇರಿಯಾ ಮತ್ತಿತರರ ಮಾರಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದರು. ಕೆಪಿಆರ್ಎಸ್ ತಾಲೂಕು ಅಧ್ಯಕ್ಷ ಎನ್.ಎನ್.ಶ್ರೀರಾಮ್ ಮಾತನಾಡಿ, ಉದ್ಯೋಗ ಖಾತ್ರಿಯಲ್ಲಿ ವೈಯಕ್ತಿಕ ಕೆಲಸಗಳು ಮಾಡಿದವರಿಗೆ ಬಿಲ್ ನೀಡಲು ತುಂಬಾ ವಿಳಂಬವಾಗುತ್ತಿದೆ ಎಂದರು.
ಕೆಪಿಆರ್ಎಸ್ ತಾಲೂಕು ಗೌರವಾಧ್ಯಕ್ಷ ಕುರ್ಕಿ ದೇವರಾಜ್, ತಾಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಎಸ್.ರಮೇಶ್, ಗಂಗಮ್ಮ, ರಾಮರೆಡ್ಡಿ, ಆಲಹಳ್ಳಿ ವೆಂಕಟೇಶಪ್ಪ, ಎಚ್.ಎಂ.ಆಂಜಿನಪ್ಪ, ದಸ್ತ್ಗಿರಿ, ಸುಶೀಲಮ್ಮ, ಸಿ.ನಾಗರಾಜ್ ಭಾಗವಹಿಸಿದ್ದರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.