ಪರವಾನಿಗೆ ರಹಿತ ವ್ಯಾಪಾರಕ್ಕೆ ಅವಕಾಶ ನೀಡದಂತೆ ಆಗ್ರಹ


Team Udayavani, Oct 2, 2019, 5:57 AM IST

paravanige-rahita

ಕಾರ್ಕಳ: ಪುರಸಭೆ ಮಾರುಕಟ್ಟೆ ಸಂಕೀರ್ಣದ ಮೀನು ವ್ಯಾಪಾರ ಮಳಿಗೆಯಲ್ಲದೇ ನಗರದ ಇತರೆಡೆ ಪರವಾನಿಗೆ ರಹಿತವಾಗಿ ಮೀನು ವ್ಯಾಪಾರ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಮೀನು ವ್ಯಾಪಾರಿಗಳು ಪುರಸಭೆ ಮುಖ್ಯಾಧಿಕಾರಿ ಅವರನ್ನು ಆಗ್ರಹಿಸಿದ ಘಟನೆ ಅ. 1ರಂದು ನಡೆದಿದೆ
ಪುರಸಭೆ ಮಾರುಕಟ್ಟೆಯ ಸುಮಾರು 30 ಮಂದಿ ಮೀನು ವ್ಯಾಪಾರಸ್ಥರು ಪುರಸಭೆ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ, ಕಾರ್ಕಳ ನಗರದ ಆನೆಕೆರೆ, ಉಡುಪಿ ಬಸ್‌ ಸ್ಟಾಂಡ್‌ ಬಳಿ, ಬಂಗ್ಲೆಗುಡ್ಡೆ ಹೀಗೆ ಹಲವೆಡೆ ಪರವಾನಿಗೆ ಪಡೆಯದೇ ಮೀನು ವ್ಯಾಪಾರ ನಡೆಸಲಾಗುತ್ತಿದೆ. ಇದರಿಂದ ಸುಂಕ ಪಾವತಿ ಮಾಡಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹವರಿಗೆ ತೊಂದರೆಯಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.

ಮೀನು ತಂದು ಪ್ರತಿಭಟಿಸಲಿದ್ದೇವೆ
10 ದಿನಗಳ ಒಳಗಾಗಿ ಪುರಸಭೆ ಸೂಕ್ತ ಕ್ರಮ ಕೈಗೊಳ್ಳದೇ ಹೋದಲ್ಲಿ ಮೀನು ಪುರಸಭಾ ಕಚೇರಿಗೆ ತಂದು ಉಗ್ರವಾಗಿ ಪ್ರತಿಭಟಿಸಲಿದ್ದೇವೆ. ಬಳಿಕ ನಾವು ಕೂಡ ನಗರದ ವಿವಿಧೆಡೆ ಮೀನು ವ್ಯಾಪಾರ ಮಾಡಲಿದ್ದೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬೋರ್ಡ್‌ ಅಳವಡಿಸಿದ್ದಾರೆ
ಅನಧಿಕೃತವಾಗಿ ಮೀನಿನ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳು ಪುರಸಭೆಯ ಪರವಾನಗಿ ಬೋರ್ಡ್‌ ಅಳವಡಿಸಿಕೊಂಡಿದ್ದಾರೆ. ಪುರಸಭೆ ನಗರದೆಲ್ಲೆಡೆ ಮೀನಿನ ವ್ಯಾಪಾರಕ್ಕೆ ಅನುಮತಿ ನೀಡಿದೆಯೇ ? ಎಂದು ಮುಖ್ಯ ಅಧಿಕಾರಿ ಮೇಬಲ್‌ ಡಿ’ಸೋಜಾ ಅವರನ್ನು ಪ್ರಶ್ನಿಸಿದರು. ಸಮಸ್ಯೆಗೆ ತತ್‌ಕ್ಷಣವೇ ಸ್ಪಂದಿಸುವಂತೆ ಮುಖ್ಯಾಧಿಕಾರಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿ, ಮನವಿ ಪ್ರತಿಯನ್ನು ಜಿಲ್ಲಾಧಿಕಾರಿ ಅವರಿಗೂ ರವಾನಿಸುವಂತೆ ಕೋರಿ ದರು. ಪುರಸಭಾ ಸದಸ್ಯ ಶುಭದಾ ರಾವ್‌ ಉಪಸ್ಥಿತರಿದ್ದರು.

ಶುಚಿತ್ವವಿಲ್ಲ
ಪುರಸಭೆ ಮಾರುಕಟ್ಟೆ ಸಂಕೀರ್ಣದಲ್ಲಿ ಶುಚಿತ್ವ ಕಣ್ಮರೆಯಾಗಿದೆ. ಪುರಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯವಿಲ್ಲ. ಇದರಿಂದ ವ್ಯಾಪಾರಿಗಳು ಹಾಗೂ ಮಾರುಕಟ್ಟೆಗೆ ಆಗಮಿಸುವ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಪುರಸಭೆ ಸಿಬಂದಿ ನೇಮಿಸಿ, ನಿಗದಿತವಾಗಿ ಶುಚಿಗೊಳಿಸುವ ಕಾರ್ಯಮಾಡಬೇಕು ಎಂದು ಮೀನು ವ್ಯಾಪಾರಿಗಳಾದ ಸಂದೇಶ್‌ ಹಾಗೂ ಮಾಲಕ್ಕ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.