ಶಿಕ್ಷಕರು ಸಮಸ್ಯೆಯಲ್ಲಿದ್ದರೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ : ಸಚಿವ ಸುರೇಶ್‌ ಕುಮಾರ್‌


Team Udayavani, Oct 4, 2019, 9:15 PM IST

Suresh-Kumar-750

ಬೆಂಗಳೂರು: ಶಿಕ್ಷಕರ ಸಮಸ್ಯೆಗಳ ನಿವಾರಣೆಗಾಗಿ ಉಪವಾಸ, ಪ್ರತಿಭಟನೆ ಮಾಡುವಂಥ ಪರಿಸ್ಥಿತಿ ಎದುರಾದರೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದರು.

ಶುಕ್ರವಾರ ಮಹಾರಾಣಿ ವಿಜ್ಞಾನ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಪ್ರಾಥಮಿಕ ಶಾಲಾ ಶಿಕ್ಷಕರ ಹೊಸ ವೃಂದ ಮತ್ತು ವೃಂದಬಲ ನಿಗದಿ, ವೃಂದ ಮತ್ತು ನೇಮಕಾತಿ ನಿಯಮಗಳು-2017ರ ಸಾಧಕ-ಬಾಧಕಗಳು ವಿಷಯದ ಕುರಿತು ಆಯೋಜಿಸಿದ್ದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರಗತಿಯಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಜತೆಗೆ ಸಾಕಷ್ಟು ಸವಾಲು ಮತ್ತು ಅವಕಾಶಗಳೂ ಶಿಕ್ಷಣ ಕ್ಷೇತ್ರದಲ್ಲಿವೆ ಎಂದರು.

ಎಲ್ಲ ಸವಾಲುಗಳು ಒಂದೊಂದಾಗಿ ಎದುರಾಗುತ್ತಿದ್ದು, ಅವುಗಳ ನಿವಾರಣೆಗೆ ಸಾಕಷ್ಟು ಸಲಹೆ, ಸೂಚನೆಗಳೂ ಸಹ ಸಿಗುತ್ತಿವೆ. ಇದರಿಂದ ಹೊಸ ಅನುಭವ ಸಿಗುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳನ್ನ ಅವಕಾಶಗಳನ್ನಾಗಿ ಮಾಡಿಕೊಂಡು ಕಾರ್ಯ ನಿರ್ವಹಿಸುವ ಆತ್ಮವಿಶ್ವಾಸವಿದೆ ಎಂದವರು ಹೇಳಿದರು.

ಶೀಘ್ರವೇ ಸಭೆ
ಸರಕಾರಿ ಶಾಲಾ ಪದವೀಧರ ಶಿಕ್ಷಕರ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ. ಹೀಗಾಗಿ ಶಿಕ್ಷಕರ ಎಲ್ಲ ಸಮಸ್ಯೆಗಳ ನಿವಾರಣೆಗೆಗಾಗಿ ಅ. 14ರ ಅನಂತರ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಜತೆಗೆ ಮಕ್ಕಳು ಮತ್ತು ಶಿಕ್ಷಕರಿಗೆ ಪೂರಕವಾಗುವಂಥ ಉತ್ತಮ ನಿರ್ಧಾರ ಕೈಗೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್‌.ವೈ. ಸೊರಟ್ಟಿ ಮಾತನಾಡಿ, ಸರಕಾರ 2017ರಲ್ಲಿ ಶಿಕ್ಷಕರಿಗೆ ಮಾರಕವಾಗುವಂಥ ಹೊಸ ವೃಂದ ಮತ್ತು ವೃಂದಬಲ ನಿಗದಿ ಹಾಗೂ ಸಿ ಮತ್ತು ಆರ್‌ ಕುರಿತು ಆದೇಶ ಹೊರಡಿಸಿದೆ. ಈ ಆದೇಶ ತಿದ್ದುಪಡಿ ಕುರಿತು ಈಗಾಗಲೇ ಶಿಕ್ಷಕರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಜತೆಗೆ ತರಗತಿ ಬಹಿಷ್ಕರಿಸಿ ಹೋರಾಟ ಮಾಡಲಾಗಿದೆ.

ಆದರೂ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಹೀಗಾಗಿ ಪ್ರಸ್ತುತ ರಾಜ್ಯ ಸರಕಾರ ಈ ಆದೇಶಗಳಿಗೆ ತುರ್ತಾಗಿ ತಿದ್ದುಪಡಿ ಮಾಡಬೇಕು. ರಾಜ್ಯದ ಎಲ್ಲ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಪ್ರಾರಂಭಿಸಬೇಕು. ರಾಜ್ಯದ ಒಟ್ಟು ಶಿಕ್ಷಕರಲ್ಲಿ 81 ಸಾವಿರಕ್ಕೂ ಅಧಿಕ ಪದವೀಧರ ಶಿಕ್ಷಕರಿದ್ದು, ಅವರನ್ನು ಸೇವಾ ಜೇಷ್ಠತೆ ಆಧರಿಸಿ 6-8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನಾಗಿ ಮರು ನೇಮಕ ಮಾಡಬೇಕು. ಗುಣಮಟ್ಟದ ಶಿಕ್ಷಣಕ್ಕಾಗಿ 6-8ನೇ ತರಗತಿಯ ಎಲ್ಲ 6 ವಿಷಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಬಸವರಾಜ್‌ ಹೊರಟ್ಟಿ ಮಾತನಾಡಿ, ಶಿಕ್ಷಕರು ಮಾನಸಿಕ ನೆಮ್ಮದಿಯಿಂದ ಪಾಠ ಬೋಧಿಸಬೇಕು. ಆದರೆ ರಾಜ್ಯದಲ್ಲಿ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಹಂತದಲ್ಲಿ ನೇಮಕ ಮಾಡಲಾಗುತ್ತಿದೆ. ಇದರಿಂದ ಆ ಶಿಕ್ಷಕರು ನೆಮ್ಮದಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ. ಹೀಗಾಗಿ ಅರ್ಹತೆಗೆ ಅನುಗುಣವಾಗಿ ದೇಶದಲ್ಲಿ ಜಾರಿಯಲ್ಲಿರುವ ಮೂರು ವಿಧದ ಶಿಕ್ಷಣ ನಿಯಮಗಳ ಪ್ರಕಾರ ಶಿಕ್ಷಕರ ನೇಮಕಾತಿ, ಮುಂಭಡ್ತಿ ಪ್ರಕ್ರಿಯೆ ನಡೆಯಬೇಕು. ಸದ್ಯ ಶಿಕ್ಷಕರ ನೇಮಕಾತಿ, ಮುಂಭಡ್ತಿ ಪ್ರಕ್ರಿಯೆಗಳು ಕಾನೂನು ಬದ್ಧವಾಗಿಲ್ಲ. ಹೀಗಾಗಿ ಭಡ್ತಿ ನಿಡುವಾಗ ಶೇ. 75ರಷ್ಟು ಜನರಿಗೆ ಮುಂಭಡ್ತಿ ನೀಡಬೇಕು. ಜತೆಗೆ ಶೇ. 25ರಷ್ಟು ಜನರನ್ನ ನೇಮಕ ಮಾಡಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.