![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 9, 2019, 3:03 AM IST
ಬಹುಕಾಲದ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಹಿರಿತೆರೆಗೆ ರೀ-ಎಂಟ್ರಿ ಕೊಡುತ್ತಿರುವ ಚಿತ್ರ ಎಂದೇ ಹೇಳಲಾಗುತ್ತಿರುವ, ಮಹಿಳಾ ಪ್ರಧಾನ ಚಿತ್ರ “ಭೈರಾದೇವಿ’ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಸದ್ಯ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ “ಭೈರಾದೇವಿ’ ನಿಧಾನವಾಗಿ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿದ್ದು, ಅದರ ಮೊದಲ ಭಾಗವಾಗಿ ಚಿತ್ರದ ಆಡಿಯೋ ಅದ್ಧೂರಿಯಾಗಿ ಹೊರಬಂದಿದೆ.
ಇತ್ತೀಚೆಗೆ ನಡೆದ ವಿಶ್ವವಿಖ್ಯಾತ ಮೈಸೂರು ದಸರಾದ ಯುವ ದಸರಾದ ವರ್ಣರಂಜಿತ ಕಾರ್ಯಕ್ರಮದಲ್ಲಿ “ಭೈರಾದೇವಿ’ ಚಿತ್ರದ ಆಡಿಯೋವನ್ನು ಹೊರತರಲಾಯಿತು. ಇದೇ ವೇಳೆ ಸಂಸದ ಪ್ರತಾಪ ಸಿಂಹ, ನಟ ರಮೇಶ್ ಅರವಿಂದ್, ನಟಿ ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರು, ಸಾವಿರಾರು ಪ್ರೇಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಇನ್ನು “ಶಮಿಕಾ ಎಂಟರ್ಪ್ರೈಸಸ್’ ಬ್ಯಾನರ್ನಲ್ಲಿ ರಾಧಿಕಾ ಕುಮಾರಸ್ವಾಮಿ ಮುಖ್ಯ ಭೂಮಿಕೆಯಲ್ಲಿ ನಟಿಸಿ, ನಿರ್ಮಿಸುತ್ತಿರುವ “ಭೈರಾದೇವಿ’ ಚಿತ್ರಕ್ಕೆ ಶ್ರೀ ಜೈ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಜೆ.ಎಸ್.ವಾಲಿ ಛಾಯಾಗ್ರಹಣ, ರವಿಚಂದ್ರನ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಕೆ.ಕೆ ಸೆಂಥಿಲ್ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ.
ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅವರೊಂದಿಗೆ ರಮೇಶ್ ಅರವಿಂದ್, ರವಿಶಂಕರ್, ರಂಗಾಯಣ ರಘು, ಶಿವರಾಂ, ಸ್ಕಂದ ಅಶೋಕ್, ಸುಚೇಂದ್ರ ಪ್ರಸಾದ್, ಮಾಳವಿಕಾ ಅವಿನಾಶ್, ಪದ್ಮಜಾ ರಾವ್ ಮುಂತಾದವರಿದ್ದಾರೆ. ಕಾಶಿ, ಬೆಂಗಳೂರು, ತಮಿಳುನಾಡು ಮೊದಲಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮುಂದಿನ ತಿಂಗಳ ಅಂತ್ಯಕ್ಕೆ “ಭೈರಾದೇವಿ’ಯನ್ನು ತೆರೆಗೆ ತರುವ ಪ್ಲಾನ್ನಲ್ಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.