![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 9, 2019, 3:03 AM IST
ಮರಿಯಮ್ಮನಹಳ್ಳಿ: ಮಕ್ಕಳ ತಿನಿಸುಗಳ ಜತೆ ಉಚಿತವಾಗಿ ಕೊಡುವ ಬಲೂನ್ ನುಂಗಿ ಐದು ವರ್ಷದ ಮಗು ಮೃತಪಟ್ಟ ಘಟನೆ ಸಮೀಪದ ಅಯ್ಯನಹಳ್ಳಿ ಗ್ರಾಮದಲ್ಲಿ ಜರುಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಯ್ಯನಹಳ್ಳಿ ಗ್ರಾಮದ ಹರಿಜನ ಚಂದ್ರಪ್ಪ ಮತ್ತು ಕವಿತಾ ದಂಪತಿಯ ಮಗು ಎಚ್.ಈರಮ್ಮ (5) ಮೃತಪಟ್ಟ ದುರ್ದೈವಿ. ಅ.3ರಂದು ಗುರುವಾರ ಬೆಳಗ್ಗೆ ಚಂದ್ರಪ್ಪ ತನ್ನೆರಡು ಹೆಣ್ಣು ಮಕ್ಕಳಿಗೆ ದುಡ್ಡು ಕೊಟ್ಟು ತಿಂಡಿ ತಿನ್ನಲು ಕಳುಹಿಸಿದ್ದಾರೆ.
ಅವರ ಮನೆ ಸಮೀಪದ ತಾಯಮ್ಮನಗುಡಿ ಹತ್ತಿರವಿರುವ ಗೂಡಂಗಡಿಯೊಂದರಲ್ಲಿ ಫ್ರಿ ಬಲೂನ್ ಸ್ನ್ಯಾಕ್ಸ್ ಎಂಬ ಹೆಸರಿನ ತಿನಿಸಿನ ಜತೆ ಉಚಿತವಾಗಿ ಕೊಡುವ ಬಲೂನನ್ನು ತೆಗೆದುಕೊಂಡು ಹೋಗಿದ್ದಾರೆ. ಗುಡಿ ಹತ್ತಿರ ತಿನಿಸನ್ನು ತಿಂದು ಬಲೂನನ್ನು ಬಾಯಲ್ಲಿಟ್ಟುಕೊಂಡು ಆಟವಾಡುತ್ತಿದ್ದಾಗ ಮಗು ಈರಮ್ಮನ ಗಂಟಲಲ್ಲಿ ಸಿಲುಕಿಕೊಂಡಿದೆ. ಅಲ್ಲಿಂದ ಮನೆಗೆ ಓಡಿ ಹೋಗಿ ತಂದೆ ಹತ್ತಿರ ಹೇಳುವಷ್ಟರಲ್ಲಿ ಕುಸಿದುಬಿದ್ದಿದೆ.
ಕೂಡಲೇ ಮರಿಯಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದ ಆಂಬ್ಯುಲೆನ್ಸ್ ಮೂಲಕ ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ತಪಾಸಣೆ ಮಾಡಿದಾಗ ಜೀವ ಹೋಗಿದೆ ಎಂದು ವೈದ್ಯರು ಹೇಳಿದ್ದಾರೆ. ಭಾವನಾತ್ಮಕ ಕಾರಣಗಳಿಗಾಗಿ ಮರಣೋತ್ತರ ಪರೀಕ್ಷೆಗೆ ಸಂಬಂಧಿಕರು ಒಪ್ಪದೆ ಮಗುವಿನ ಕಳೇಬರವನ್ನು ಅಯ್ಯನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.