![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 10, 2019, 3:02 AM IST
ಇತ್ತೀಚೆಗಷ್ಟೆ “ಕುರುಕ್ಷೇತ್ರ’ ಚಿತ್ರದ ಯಶಸ್ವಿ ಐವತ್ತು ದಿನಗಳ ಸಂಭ್ರವನ್ನು ಭರ್ಜರಿಯಾಗಿ ಆಚರಿಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಚಿತ್ತ ಈಗ ದರ್ಶನ್ ಅಭಿನಯದ ಮುಂಬರುವ ಚಿತ್ರ “ಒಡೆಯ’ನತ್ತ ನೆಟ್ಟಿದೆ. ಅದಕ್ಕೆ ಕಾರಣ ಈ ಹಿಂದೆಯೇ, ದರ್ಶನ್ ಅವರ ಮುಂಬರುವ ಚಿತ್ರ “ಒಡೆಯ’ ಎಂದು ಘೋಷಿಸಿದ್ದ ಚಿತ್ರತಂಡ, ಇದೇ ವಿಜಯದಶಮಿಯಂದು “ಒಡೆಯ’ನ ಮೋಶನ್ ಪೋಸ್ಟರ್ ಬಿಡುಗಡೆಯಾಗಲಿದೆ.
ನವೆಂಬರ್ ವೇಳೆಗೆ ಚಿತ್ರ ತೆರೆಗೆ ಬರಲಿದೆ ಎಂದು ಪ್ರಕಟಿಸಿತ್ತು. ಅದರಂತೆ ಈ ವಿಜಯದಶಮಿಯ ವೇಳೆ “ಒಡೆಯ’ನ ಮೋಶನ್ ಪೋಸ್ಟರ್ಗಾಗಿ ಎದುರು ನೋಡುತ್ತಿದ್ದ ಅಭಿಮಾನಿಗಳ ಮುಂದೆ ತಾಂತ್ರಿಕ ಕಾರಣಗಳಿಂದ “ಒಡೆಯ’ನ ದರ್ಶನ ಸಾಧ್ಯವಾಗಲಿಲ್ಲ. ಇದು ಸಹಜವಾಗಿ ದರ್ಶನ್ ಅಭಿಮಾನಿಗಳ ನಿರಾಸೆಗೆ ಕಾರಣವಾದಂತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಅಭಿಮಾನಿಗಳು ತಮ್ಮ ಬೇಸರ, ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.
ಇದನ್ನು ಗಮನಿಸಿದ ಚಿತ್ರತಂಡ “ಒಡೆಯ’ನ ಮೋಶನ್ ಪೋಸ್ಟರ್ ನಿಗದಿತ ಸಮಯಕ್ಕೆ ಬಿಡುಗಡೆ ಮಾಡಲು ಸಾಧ್ಯವಾಗದಿರುವುದಕ್ಕೆ ದರ್ಶನ್ ಅಭಿಮಾನಿಗಳ ಬಳಿ ಕ್ಷಮೆ ಯಾಚಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲೇ ಪ್ರತಿಕ್ರಿಯಿಸಿರುವ “ಒಡೆಯ’ ಚಿತ್ರದ ನಿರ್ಮಾಪಕ ಸಂದೇಶ್, “ವಿಜಯದಶಮಿ ಪ್ರಯುಕ್ತ ಬಿಡುಗಡೆಯಾಗಬೇಕಿದ್ದ ನಮ್ಮ ಡಿ ಬಾಸ್ರವರ “ಒಡೆಯ’ ಚಿತ್ರದ ಮೋಶನ್ ಪೋಸ್ಟರ್ ಅನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಮುಂದೂಡಲಾಗಿದೆ.
ಇಷ್ಟರಲ್ಲೇ ನಿಮಗೆ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುವುದು ಕ್ಷಮೆ ಇರಲಿ’ ಎಂದಿದ್ದಾರೆ. ಇನ್ನು ಅಣ್ಣ-ತಮ್ಮಂದಿರ ಸೆಂಟಿಮೆಂಟ್ ಕಥಾಹಂದರ ಹೊಂದಿರುವ “ಒಡೆಯ’ ಚಿತ್ರದಲ್ಲಿ ನಟ ದರ್ಶನ್ ಗಜೇಂದ್ರ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಎಂ.ಡಿ ಶ್ರೀಧರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ರಾಘವಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ದೇವರಾಜ್, ಸಾಧುಕೋಕಿಲ, ಚಿಕ್ಕಣ್ಣ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ತನ್ನ ಟೈಟಲ್ ಮತ್ತು ಫಸ್ಟ್ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ “ಒಡೆಯ’ ಚಿತ್ರರಂಗದ ಮೂಲಗಳ ಪ್ರಕಾರ, ಇದೇ ನವೆಂಬರ್ ವೇಳೆಗೆ ಅದ್ದೂರಿಯಾಗಿ ತೆರೆ ಮೇಲೆ ತರಲು ಪ್ಲಾನ್ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.