ಆಫ್ರಿಕಾ ವೈದ್ಯರಿಗೆ ಮಣಿಪಾಲದಲ್ಲಿ ತರಬೇತಿ


Team Udayavani, Oct 12, 2019, 5:54 AM IST

IVF-CERTIFICATE-COURSE

ಉಡುಪಿ: ಯಾವುದೇ ದೇಶದಲ್ಲಾದರೂ ಬಂಜೆತನ ಮಹಿಳೆಯರಿಗೆ ನೋವುಂಟು ಮಾಡುತ್ತದೆ. ಬಂಜೆತನಕ್ಕೆ ಪುರುಷರು ಮತ್ತು ಮಹಿಳೆಯರಿಬ್ಬರೂ ಕಾರಣರಾಗುತ್ತಾರೆ. ಆದರೆ ಮಹಿಳೆಯರಿಗೇ ಇದರ ನೋವು ಕಾಣಿಸುತ್ತದೆ ಎಂದು ಮಣಿಪಾಲ ಮಾಹೆ ವಿ.ವಿ. ಸಹಕುಲಾಧಿಪತಿ ಡಾ|ಎಚ್‌.ಎಸ್‌.ಬಲ್ಲಾಳ್‌ ಹೇಳಿದರು.

ಮಣಿಪಾಲದಲ್ಲಿ ಆಫ್ರಿಕಾದ ವೈದ್ಯರಿಗೆ ಮೂರು ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌ ಮುಗಿಸಿದವರಿಗೆ ಬುಧವಾರ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಬಹುತೇಕ ಕಡೆ ಮಕ್ಕಳಿಲ್ಲದ ಮಹಿಳೆಯರನ್ನು ತಾರತಮ್ಯದಿಂದ ಕಾಣುತ್ತಾರೆ. ಮಕ್ಕಳಿಲ್ಲದೆ ಅವರು ಒಂಟಿಯಾಗಬೇಕಾಗುತ್ತದೆ. ಇದಕ್ಕಾಗಿ ಮಾಹೆಯು ಮರ್ಕ್‌ ಪ್ರತಿಷ್ಠಾನದ ವತಿಯಿಂದ ಸರ್ಟಿಫಿಕೇಟ್‌ ಕೋರ್ಸ್‌ ನೀಡುತ್ತಿದೆ. ಇದುವರೆಗೆ ಆಫ್ರಿಕಾ, ಬಾಂಗ್ಲಾದೇಶ, ರಶ್ಯಾ, ದಕ್ಷಿಣ ಪೂರ್ವ ಏಶ್ಯನ್‌ ದೇಶಗಳ 55 ವಿಜ್ಞಾನಿಗಳು ಮತ್ತು ವೈದ್ಯರಿಗೆ ಒಂದೂವರೆ ವರ್ಷಗಳಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಮಣಿಪಾಲ ಕೆಎಂಸಿ ಕ್ಲಿನಿಕಲ್‌ ಭ್ರೂಣಶಾಸ್ತ್ರ ವಿಭಾಗವು ಆಫ್ರಿಕ ದೇಶಗಳ ಸ್ತ್ರೀರೋಗ ಶಾಸ್ತ್ರಜ್ಞರು ಮತ್ತು ವಿಜ್ಞಾನಿಗಳಿಗೆ ಮಣಿಪಾಲದಲ್ಲಿ ತರಬೇತಿ ಆರಂಭಿಸಿತು. ಈಗ ಹಲವರು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ವಿ.ವಿ. ಸಹಕುಲಪತಿ ಡಾ|ಪೂರ್ಣಿಮಾ ಬಾಳಿಗಾ ಹೇಳಿದರು.

ತರಬೇತಿ ಮತ್ತು ಕೌಶಲವಿರುವ ಆರೋಗ್ಯ ವೃತ್ತಿಪರರ ಕೊರತೆ ನೀಗಿಸಲು ಕೆಎಂಸಿ ಭ್ರೂಣಶಾಸ್ತ್ರಜ್ಞರ ಸಂಖ್ಯೆ ಹೆಚ್ಚಿಸುವ ಗುರಿ ಇರಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಮರ್ಕ್‌ ಪ್ರತಿಷ್ಠಾನ ಈ ಪ್ರಕ್ರಿಯೆಯ ಒಂದು ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೆಎಂಸಿ ಡೀನ್‌ ಡಾ|ಶರತ್‌ ರಾವ್‌ ಹೇಳಿದರು. ಆಫ್ರಿಕ ಮತ್ತು ಏಶ್ಯನ್‌ ದೇಶಗಳಲ್ಲದೆ ಅಭಿವೃದ್ಧಿಶೀಲ ರಾಷ್ಟ್ರಗಳಿಗೂ ಐವಿಎಫ್ ತರಬೇತಿ ನೀಡಲು ಮಾಹೆ ಮತ್ತು ಮರ್ಕ್‌ ಪ್ರತಿಷ್ಠಾನ ಯೋಜಿಸಿದೆ ಎಂದು ಕಾರ್ಯಕ್ರಮದ ಸಮನ್ವಯಕಾರ ಡಾ|ಸತೀಶ ಅಡಿಗ ಮಾಹಿತಿ ನೀಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.