ನೆರೆ ಸಂತ್ರಸ್ತರ ಪರಿಹಾರಕ್ಕೆ ಆಗ್ರಹಿಸಿ ನಾಳೆ ಬೆಂಗಳೂರು ಚಲೋ


Team Udayavani, Oct 13, 2019, 3:00 AM IST

nere-santrasata

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸಂಭವಿಸಿರುವ ಭೀಕರ ನೆರೆಗೆ ಸಂತ್ರಸ್ತರಾಗಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಪರಿಹಾರ ಒದಗಿಸಬೇಕು. ನೆರೆ ಹಾಗೂ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಬೆಂಗಳೂರು ಚಲೋ ಹಮ್ಮಿಕೊಂಡಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.

ನಗರದ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಈ ಕುರಿತು ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕದಲ್ಲಿ ನೆರೆ ಸಂಭವಿಸಿ ಎರಡು ತಿಂಗಳಾದರೂ ಇದುವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.

ಕಾಟಾಚಾರಕ್ಕೆ ಅಧಿವೇಶನ: ನೆರೆಗೆ ತುತ್ತಾಗಿರುವ ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ 17 ಜಿಲ್ಲೆಗಳಲ್ಲಿ ಲಕ್ಷಾಂತರ ಜನ ಮನೆ, ಬೆಳೆ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಕನಿಷ್ಠ ಸರ್ಕಾರ ಇದುವರೆಗೂ ಅವರಿಗೆ ಸೂಕ್ತ ಸೂರು ಕಲ್ಪಿಸುವ ಕೆಲಸ ಮಾಡಿಲ್ಲ. ರಸ್ತೆಗಳು ಸಂಪೂರ್ಣ ಹಾಳಾಗಿದೆ. ಕಾಳಜಿ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿವೆ. ಪುನರ್ವಸತಿ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ಸರ್ಕಾರ ಕಾಟಾಚಾರಕ್ಕೆ ಮೂರು ದಿನಗಳ ಅಧಿವೇಶನ ಕರೆದಿದೆ ಎಂದು ದೂರಿದರು.

ವೈಜ್ಞಾನಿಕ ನೀತಿ ರೂಪಿಸಿ: ರಾಜ್ಯ ರೈತ ಸಂಘದ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಯಾಕೂಬ್‌ ಷರೀಫ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನೀತಿಗಳು ಸಂಪೂರ್ಣ ಅವೈಜ್ಞಾನಿಕವಾಗಿ ಕೂಡಿವೆ. ಈ ಎರಡು ಯೋಜನೆಗಳಲ್ಲಿ ಅಲ್ಪ ಪರಿಹಾರ ಮಾತ್ರ ಸಿಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನೆರೆ ಹಾಗೂ ಬರಕ್ಕೆ ಸಂಬಂಧಿಸಿದ್ದಂತೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ನೀತಿಗಳನ್ನು ವೈಜ್ಞಾನಿಕವಾಗಿ ರೂಪಿಸಬೇಕೆಂದು ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನುಸೂಯಮ್ಮ, ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶಿ ಜಿ.ಎಸ್‌.ವೆಂಕಟಸ್ವಾಮಿ, ಪದಾಧಿಕಾರಿಗಳಾದ ವೆಂಕಟರೋಣಪ್ಪ, ವೆಂಕಟೇಶ್‌, ಗಂಗಾಧರ್‌, ತ್ರಿವೇಣಿ, ಶಿವಕುಮಾರ್‌, ಚಿನ್ನರೆಡ್ಡಪ್ಪ ಇದ್ದರು.

ರೈತ ಸಂಘದ ಹಕ್ಕೋತ್ತಾಯಗಳು
* ಸಂತ್ರಸ್ತರಿಗೆ ವಸತಿ ಸೌಕರ್ಯಕ್ಕೆ 10 ಲಕ್ಷ ನೀಡಬೇಕು.
* ರೈತರ ಸಾಲ ಮನ್ನಾ ಜೊತೆಗೆ ಹೊಸ ಸಾಲ ವಿತರಿಸಬೇಕು.
* ಕೇಂದ್ರ ಸರ್ಕಾರ ನೆರೆ ಪರಿಹಾರಕ್ಕೆ 30 ಸಾವಿರ ಕೋಟಿ ನೀಡಬೇಕು.
* ಬೆಳೆ ವಿಮಾ ಬಾಕಿ ಹಣ ಕೂಡಲೇ ರೈತರಿಗೆ ನೀಡಬೇಕು.
* ಅರ್ಜಿ ಸಲ್ಲಿಸಿರುವ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.