ಸಣ್ಣ ವಿಷಯಕ್ಕೆ 3 ದಿನ ಶೋಧ ಮಾಡಿ ನಮಗೆ ಕಿರುಕುಳ ಕೊಟ್ಟರು

ಜಾಲಪ್ಪ ಸಂಬಂದಿ ಜಿ.ಎಚ್.ನಾಗರಾಜ್ ಹೇಳಿಕೆ

Team Udayavani, Oct 12, 2019, 9:24 PM IST

e-18

ಚಿಕ್ಕಬಳ್ಳಾಪುರ: ಸಣ್ಣ ವಿಷಯಕ್ಕೆಲ್ಲಾ ಮೂರು ದಿವಸ ನಮ್ಮ ಮನೆಯಲ್ಲಿ ಇದ್ದು ವಿಚಾರಣೆ ನಡೆಸಿದ್ದಾರೆ. ಬೇಕಾಗಿಯೇ ನಮಗೆ ಕಿರುಕುಳ ನೀಡುವ ದುರುದ್ದೇಶದಿಂದಲೇ ಐಟಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ನಡೆಸಿದ್ದಾರೆಂದು ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸಂಬಂದಿ ನಾಗರಾಜ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಆದಾಯಕ್ಕೂ ಮೀರಿ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂಬ ಆರೋಪದಡಿ ಕಳೆದ ಗುರುವಾರ ಬೆಳ್ಳಂ ಬೆಳಗ್ಗೆ ನಗರದ ಪ್ರಶಾಂತ ನಗರದಲ್ಲಿರುವ ಮಾಜಿ ಕೇಂದ್ರ ಸಚಿವ ಆರ್.ಎಲ್,ಜಾಲಪ್ಪ ಸೋದರ ಅಳಿಯ ಜಿ.ಎಚ್.ನಾಗರಾಜ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳ ತಂಡ ಶನಿವಾರ ತನ್ನ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದೆ.

ಕೋಲಾರದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ನಾಗರಾಜ್ ಕಾರ್ಯದರ್ಶಿಯಾಗಿದ್ದರೆ, ಜಾಲಪ್ಪ ಸ್ಥಾಪಿಸಿರುವ ದೇವರಾಜ ಅರಸು ವೈದ್ಯಕೀಯ ಕಾಲೇಜಿಗೆ ಖಜಾಂಚಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ಕೋಲಾಟದ ಟಮಕ ಸಮೀಪ ಇರುವ ಜಾಲಪ್ಪ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ಮೇಲೆ ದಾಳಿ ಸಂದರ್ಭದಲ್ಲಿಯೆ ಚಿಕ್ಕಬಳ್ಳಾಪುರ ನಗರದಲ್ಲಿರುವ ನಾಗರಾಜ್ ಮನೆ ಮೇಲೆ ಕೂಡ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.

ನಮ್ಮಲ್ಲಿ ಇದ್ದಿದ್ದು 12 ಲಕ್ಷ ಅಷ್ಟೆ:
ಮೂರು ದಿನಗಳ ಐಟಿ ಕಾರ್ಯಾಚರಣೆ ಮುಗಿದ ಬಳಿಕ ಶನಿವಾರ ಮದ್ಯಾಹ್ನ ಮನೆಯ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಎಲ್.ಜಾಲಪ್ಪ ಸಂಬಂಧಿಯಾಗಿರುವ ನಾಗರಾಜ್, ನಮ್ಮ ಮನೆಯಲ್ಲಿ ಇದ್ದಿದ್ದು ಬರೀ 12 ಲಕ್ಷ ರೂ, ಮಾತ್ರ. ಅದು ವ್ಯಾಪಾರದ ದುಡ್ಡು. ಅದಕ್ಕೆಲ್ಲಾ ನಾವು ಐಟಿ ಅಧಿಕಾರಿಗಳಿಗೆ ಅಕೌಂಟ್‌ಸ್ ತೋರಿದ್ದೇವೆ. ನಮ್ಮಲ್ಲಿರುವ ಎಲ್ಲ ಚಿನ್ನಾಭರಣ, ನಮಗೆ ಇರುವ ಜಮೀನು ಬಗ್ಗೆ ಎಲ್ಲ ಶೋ‘ನೆ ಮಾಡಿ ಅವರು ನಮಗೆ ಲೀಸ್‌ಟ್ ಬರೆದುಕೊಂಡಿದ್ದಾರೆಂದರು.

ಮಲಗಕ್ಕೂ ಬಿಡಲಿಲ್ಲ:
ನಮಗೆ ನ್ಯೂಸ್ ನೊಡಲಿಕ್ಕೆ ಸಹ ಅಧಿಕಾರಿಗಳು ಬಿಡಲಿಲ್ಲ. ಪೋನ್ ಮಾಡಲಿಕ್ಕೂ ಬಿಡಲಿಲ್ಲ. ರಾತ್ರಿ 10 , 11 ಗಂಟೆಯವರೆಗೂ ಶೋಧ ಕಾರ್ಯ ನಡೆಸಿದರು. ಸಾಮಾನ್ಯವಾಗಿ ನಾನು 9 ಗಂಟೆಗೆಲ್ಲಾ ಊಟ ಮುಗಿಸಿ ಮಲಗಿ ಬೆಳಗ್ಗೆ 6 ಗಂಟೆಗೆ ಎದ್ದೇಳುತ್ತಿದ್ದೆ. ಆದರ ಐಟಿ ಅಧಿಕಾರಿಗಳು ರಾತ್ರಿ 10 ಗಂಟೆಯಾದರೂ ನಮ್ಮನ್ನು ಮಲಗಕ್ಕೆ ಬಿಡಲಿಲ್ಲ ಎಂದರು. ಸಣ್ಣ ಕೆಲಸವನ್ನು ಒಂದು ದಿನದಲ್ಲಿ ಶೋಧ ಕಾರ್ಯ ಮುಗಿಸಬಹುದಿತ್ತು ಎಂದರು. ನಮಗೆ ಐಟಿ ದಾಳಿ ಹೊಸದೇನು ಅಲ್ಲ. ಸಾಕಷ್ಟು ಅನು‘ವ ಇದೆ. ಯಾವುದೇ ಐಟಿ ದಾಳಿಯನ್ನು ಒಂದು ದಿನದಲ್ಲಿ ಬೆಳಗ್ಗೆ ಬಂದು ಸಂಜೆಯೊಳಗೆ ಮುಗಿಸಿ ಹೋಗುತ್ತಿದ್ದರು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.