3 ಬಾರಿ ಸೋತಾಗ ಯತ್ನಾಳ ಶಕ್ತಿ ಎಲ್ಲಿ ಹೋಗಿತ್ತು?: ಪಟ್ಟಣಶೆಟ್ಟಿ

ಸಚಿವ ಸ್ಥಾನಕ್ಕೆ ದೆಹಲಿಯಲ್ಲಿ ಯಾರ್ಯಾರ ಕಾಲಿಗೆ ಬಿದ್ದಿದ್ದಾರೆ ಎನ್ನೋದು ಹೇಳಲಿ

Team Udayavani, Oct 16, 2019, 2:40 PM IST

Udayavani Kannada Newspaper

ವಿಜಯಪುರ: ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರು ಬಾರಿ ಸೋತಿದ್ದ ಶಾಸಕ ಬಸನಗೌಡ ಪಾಟೀಲ ಅವರ ಶಕ್ತಿ ಆಗೆಲ್ಲಿ ಹೋಗಿತ್ತು. ಬಿಜೆಪಿಯಲ್ಲಿ ಯಡಿಯೂರಪ್ಪ ನಂತರ ನಾನೇ ನಾಯಕ ಎಂದು ಜಾಕೆಟ್‌ ಹಾಕಿಕೊಂಡು ಪ್ರಚಾರಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ. ಸಂತ್ರಸ್ತರ ಪರ ತಮ್ಮ ಹೇಳಿಕೆಯಿಂದಲೇ ಕೇಂದ್ರ ರಾಜ್ಯದ ನೆರವಿಗೆ ಅನುದಾನ ನೀಡಿದೆ ಎನ್ನುವ ಯತ್ನಾಳ ಅವರ ಶಕ್ತಿ ಸೋತಾಗ ಎಲ್ಲಿ ಹೋಗಿತ್ತು ಎಂದು ಬಿಜೆಪಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಪ್ರಶ್ನಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನಾಗಿ ಪಕ್ಷದ ಶಾಸಕರ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ. ಹಾಗಂತ ಯತ್ನಾಳ ಅವರ ವಿರುದ್ಧ ಮಾತನಾಡುವ ಅಗತ್ಯವಿಲ್ಲ. ಆದರೆ ನಿರಂತರ ಸುಳ್ಳುಗಳ ಭಾಷಣ ಮಾಡುವ ಅವರ ವಿರುದ್ಧ ಪಕ್ಷದ ಮುಖಂಡನಾಗಿ ಧ್ವನಿ ಎತ್ತಲೇ ಬೇಕಿದೆ. ತಮ್ಮ ಹೇಳಿಕೆಯಿಂದ ಕೇಂದ್ರ ಸರ್ಕಾರ ರಾಜ್ಯದ ಸಂತ್ರಸ್ತರಿಗೆ ನೆರವಿಗಾಗಿ ಅನುದಾನ ಬಿಡುಗಡೆ ಮಾಡಿದೆ ಎಂಬುದು ಬಾಲಿಶತನದಿಂದ ಕೂಡಿದೆ ಎಂದರು.

ಹಿಂದೆಲ್ಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಆರೆಸ್ಸೆಸ್‌, ಪ್ರಮೋದ ಮುತಾಲಿಕ್‌ ವಿರುದ್ಧ ಮಾತನಾಡಿದ್ದ ಯತ್ನಾಳ, ಯಡಿಯೂರಪ್ಪ ಹಠಾವೋ, ಬಿಜೆಪಿ ಬಚಾವೋ ಅಭಿಯಾನ ಮಾಡಿದ್ದನ್ನು ಇಷ್ಟು ಬೇಗ ಮರೆತಿದ್ದಾರೆ. ಯಡಿಯೂರಪ್ಪ ಅವರನ್ನು ಟೀಕಿಸಿ ಬಿಜೆಪಿಯಿಂದ ಉಚ್ಛಾಟಿತರಾಗಿ ಜೆಡಿಎಸ್‌ ಸೇರಿದ್ದರು. ಆಗೆಲ್ಲ ತಮ್ಮನ್ನು ತಾವು ಜಾತ್ಯತೀಯ ನಾಯಕ ಎಂದು ಬಣ್ಣಿಸಿಕೊಂಡಿದ್ದ ಯತ್ನಾಳ, ಎಚ್‌.ಡಿ. ಕುಮಾರಸ್ವಾಮಿ ಹಾಗೂ ನೀನು ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಸ್ವಯಂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರೇ ಹೇಳಿದ್ದರು ಎಂದು ಹೊಗಳಿಕೊಂಡಿದ್ದರು. ಈಗ ಮತ್ತೆ ಸಿಎಂ ಯಡಿಯೂರಪ್ಪ ಅವರನ್ನು ಹೊಗಳಲು ಮುಂದಾಗಿದ್ದಾರೆ. ಹೀಗಾಗಿ ಸಮಯ ಸಾಧಕ ರಾಜಕೀಯ ವ್ಯಕ್ತಿಯಾಗಿರುವ ಯತ್ನಾಳ, ಕ್ವಾಯಿನ್‌ ಬಾಕ್ಸ್‌ ಇದ್ದಂತೆ ಎಂದರು.

ಸುಳ್ಳನ್ನೇ ತಮ್ಮ ರಾಜಕೀಯ ದಾಳ ಮಾಡಿಕೊಂಡಿರುವ ಯತ್ನಾಳ ಮೂರು ತಿಂಗಳಿಗೊಮ್ಮೆ ಪಕ್ಷ ಹಾಗೂ ನಾಯಕತ್ವದ ನಿಷ್ಠೆ ಬದಲಿಸುತ್ತಾರೆ. ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಎಲ್ಲೆಲ್ಲೆ ಸುತ್ತಿ, ಯಾರ್ಯಾರ ಮನೆ ಬಾಗಲಿಗೆ ಅಲೆದು, ಯಾರ್ಯಾರ ಕಾಲಿಗೆ ಬಿದ್ದಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂತ್ರಸ್ತರ ಕುರಿತು ಏಕಾಏಕಿ ಕಣ್ಣೀರು ಸುರಿಸುತ್ತಿರುವ ಯತ್ನಾಳ, ಸಂತ್ರಸ್ತರಿಗಾಗಿ ತಾವು ಮಾಡಿದ ಸೇವೆಯಾದರೂ ಏನು? ತಾವು ಅಧ್ಯಕ್ಷರಾಗಿರುವ ಸಂಸ್ಥೆಗಳಿಂದ ಎಷ್ಟು ನೆರವು ನೀಡಿದ್ದಾರೆ. ಕೂಡಿದ ಮಂದಿಯಲ್ಲಿ ಆವೇಶಭರಿತವಾಗಿ ಮಾತನಾಡಿ ಚಪ್ಪಾಳೆ ಗಿಟ್ಟಿಸಿಕೊಂಡ ಮಾತ್ರಕ್ಕೆ ಯಾರೂ ನಾಯಕರಾಗಲು ಸಾಧ್ಯವಿಲ್ಲ ಎಂದರು.

ಸಂತ್ರಸ್ತರ ಕುರಿತು ಮೊಸಳೆ ಕಣ್ಣೀರು ಸುರಿಸುವ ಬದಲು ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿ ಜನರು ಶಾಪ ಹಾಕುವ ಮಟ್ಟ ತಲುಪಿದೆ. ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಜಿಲ್ಲಾಡಳಿತ ಸಮಸ್ಯೆಗಳ ಕುರಿತು ಸ್ಪಂದಿಸುತ್ತಿಲ್ಲ. ನಗರ ಶಾಸಕರಾಗಿ ಮೊದಲು ಈ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಲಿ. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಬೀದಿಗೆ ಇಳಿದು ಹೋರಾಟಕ್ಕೆ ಅಣಿಯಾಗಬೇಕಾದೀತು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.