350ಕ್ಕೂ ಹೆಚ್ಚು ಟೆಕ್ಕಿಗಳ ರಕ್ಷಣೆ

ವಿರೂಪಾಪುರಗಡ್ಡಿಯಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಟೆಕ್ಕಿಗಳು

Team Udayavani, Oct 20, 2019, 6:00 AM IST

c-43

ಸಾಂದರ್ಭಿಕ ಚಿತ್ರ

ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ ರೆಸಾರ್ಟ್‌ನಲ್ಲಿದ್ದ ಈ ಟೆಕ್ಕಿಗಳನ್ನು ರೆಸಾರ್ಟ್‌ ಮಾಲಕರೇ ಸುರಕ್ಷಿತವಾಗಿ ನದಿ ದಾಟಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಪ್ರವಾಹ ಬಂದಿದ್ದ ಸಂದರ್ಭ ಗಡ್ಡಿಯಲ್ಲಿ 500ಕ್ಕೂ ಹೆಚ್ಚು ಟೆಕ್ಕಿಗಳು ಸಿಲುಕಿಕೊಂಡು ಸಮಸ್ಯೆ ಸೃಷ್ಟಿಯಾಗಿತ್ತು. ಹೀಗಾಗಿ ಜಿಲ್ಲಾಡಳಿತ ರೆಸಾರ್ಟ್‌ ಮಾಲಕರ ಮೇಲೆ ಪ್ರಕರಣ ದಾಖಲಿಸಿತ್ತು. ಸುಮಾರು ಎರಡು ತಿಂಗಳ ಕಾಲ ವಿರೂಪಾಪುರಗಡ್ಡಿ ಯಲ್ಲಿರುವ ರೆಸಾರ್ಟ್‌, ಹೊಟೇಲ್‌ ಸೇರಿ ಎಲ್ಲ ಅಂಗಡಿ-ಮುಂಗಟ್ಟುಗಳು ವ್ಯಾಪಾರ ಸ್ಥಗಿತಗೊಳಿಸಿ ದ್ದವು. ರೆಸಾರ್ಟ್‌ ಮಾಲಕರಿಗೆ ನಿರೀಕ್ಷಣ ಜಾಮೀನು ದೊರೆತ ಬಳಿಕ 15 ದಿನಗಳ ಹಿಂದೆ ಪುನಃ ಎಲ್ಲ ವ್ಯಾಪಾರ ವಹಿವಾಟು ಆರಂಭಗೊಂಡಿತ್ತು.

ಈ ಮಧ್ಯೆ, ತುಂಗಭದ್ರಾ ನದಿಯಲ್ಲಿ ಹರಿಗೋಲು ಹಾಕುವುದಕ್ಕೆ ನಿಷೇಧ ಇರುವುದರಿಂದ ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಲೆಕ್ಕಾ ಧಿಕಾರಿ ಮಹಾಲಕ್ಷ್ಮೀ ಸ್ಥಳಕ್ಕೆ ಆಗಮಿಸಿ, ಹರಿಗೋಲುಗಳನ್ನು ವಶಕ್ಕೆ ಪಡೆದಿದ್ದಾರೆ.

ವಿದೇಶಿ ಪ್ರವಾಸಿಗರ ಆಗಮನ
ಮಳೆಗಾಲ ಕೊನೆಗೊಂಡು ಚಳಿಗಾಲ ಆಗಮಿಸುವ ಸಂದರ್ಭ ವಿದೇಶಿ ಪ್ರವಾಸಿಗರು ವಿರೂಪಾಪುರಗಡ್ಡಿಗೆ ಆಗಮಿಸಿ ತಿಂಗಳುಗಟ್ಟಲೆ ಇದ್ದು ಹೋಗುತ್ತಾರೆ. ಈಗ ವಿದೇಶಿ ಪ್ರವಾಸಿಗರ ಆಗಮನವಾಗುತ್ತಿದ್ದು, ನದಿಯಲ್ಲಿ ಪ್ರವಾಹ ಬರುತ್ತಿರುವುದರಿಂದ ಆನ್‌ಲೈನ್‌ ಮೂಲಕ ರೂಂಗಳ ಬುಕ್ಕಿಂಗ್‌ ಮಾಡಿಕೊಳ್ಳಲು ರೆಸಾರ್ಟ್‌ ಮಾಲಕರು ಹಿಂದೇಟು ಹಾಕುತ್ತಿದ್ದಾರೆ. ರೆಸಾರ್ಟ್‌ ನಲ್ಲಿ ಪ್ರವಾಸಿಗರು ಇರುವ ಕುರಿತ ಮಾಹಿತಿಯನ್ನು ಪ್ರತಿದಿನ ಗ್ರಾಮೀಣ ಠಾಣೆಗೆ ಕಡ್ಡಾಯವಾಗಿ ನೀಡಬೇಕಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರಗಿಸಲು ಅವಕಾಶವಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.