3 ದಶಕ ಕಳೆದರೂ ಗ್ರಂಥಾಲಯಕ್ಕಿಲ್ಲ ಸೂರು!


Team Udayavani, Oct 20, 2019, 12:29 PM IST

bk-tdy-3

ಅಮೀನಗಡ: ಸಾರ್ವಜನಿಕ ಗ್ರಂಥಾಲಯ ಶ್ರೀಸಾಮಾನ್ಯರ ವಿಶ್ವವಿದ್ಯಾಲಯವಿದ್ದಂತೆ. ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಸರ್ಕಾರ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಿದೆ. ಆದರೆ ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಮೂರು ದಶಕಗಳು ಕಳೆದರೂ ಕೂಡ ಸ್ವಂತ ಕಟ್ಟಡವಿಲ್ಲ. ಇದರಿಂದ ನೂರಾರು ಗ್ರಂಥಗಳು ಮೂಲೆಯಲ್ಲಿ ಕೊಳೆಯುವಂತಾಗಿದೆ.

ಹೌದು, ಕರದಂಟು ನಗರ ಅಮೀನಗಡ ಪಟ್ಟಣದಲ್ಲಿ 2011 ಜನಗಣತಿ ಪ್ರಕಾರ 15,076 ಜನಸಂಖ್ಯೆ ಇದ್ದು, 5 ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ಅಮೀನಗಡ, ಗ್ರಾಪಂ ಇದ್ದಾಗಲೇ ಸುಮಾರು 32 ವರ್ಷಗಳ ಹಿಂದೆ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿದೆ. ಪಟ್ಟಣವು ಗ್ರಾಮ ಪಂಚಾಯತಿಯಿಂದ ಪಪಂ ಆಗಿ ಪರಿವರ್ತನೆಯಾದರೂ ಜ್ಞಾನಾರ್ಜನೆಗಾಗಿ ನಿರ್ಮಾಣವಾಗಿರುವ ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಸ್ವಂತ ಸೂರು ಕಲ್ಪಿಸಿಲ್ಲ. ಶಿಥಿಲಗೊಂಡ ಪಪಂಗೆ ಸಂಬಂಧಪಟ್ಟ ಹಳೆ ಕಟ್ಟಡದಲ್ಲಿ ಗ್ರಂಥಾಲಯ ನಡೆಯುತ್ತಿದೆ.

ಇಲಾಖೆ ನಿರ್ಲಕ್ಷ್ಯಕ್ಕೆ: ಅಗತ್ಯ ಸೌಲಭ್ಯದ ಕೊರತೆಯಿಂದಾಗಿ ಓದುಗರು ಸಾರ್ವಜನಿಕ ಗ್ರಂಥಾಲಯದಿಂದ ದೂರ ಉಳಿದಿದ್ದಾರೆ. ಮೂರು ದಶಕಗಳು ಕಳೆದರೂ ಸ್ವಂತ ಕಟ್ಟಡ ಇಲ್ಲದಿರುವುದು ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸೌಲಭ್ಯಗಳ ಕೊರತೆ: ಸ್ಪರ್ಧಾತ್ಮಕ ಪರೀಕ್ಷೆಗಾಗಿ ಗ್ರಾಮೀಣ ಪ್ರದೇಶದ ಯುವಕರು ಇತ್ತೀಚೆ ಗೆ ಗ್ರಂಥಾಲಯಗಳನ್ನು ಅವಲಂಬಿಸುತ್ತಿದ್ದು, ಜ್ಞಾನ ದಾಹ ಇಂಗಿಸಬೇಕಾದ ಗ್ರಂಥಾಲಯಗಳು, ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ಗ್ರಂಥಾಲಯಕ್ಕೆ ಕೇವಲ ಎರಡು ದಿನ ಪತ್ರಿಕೆಗಳು ಬರುತ್ತವೆ. ಪ್ರತಿದಿನ ಓದುಗರು ಗ್ರಂಥಾಲಯಕ್ಕೆ ಭೇಟಿ ನೀಡಿದರೂ, ಕನಿಷ್ಟ ಪಕ್ಷ ದಿನಪತ್ರಿಕೆಗಳೆಲ್ಲ ಇಲ್ಲಿ ಸಿಗುವುದಿಲ್ಲ. ಆದರೆ ಸೂಕ್ತ ವ್ಯವಸ್ಥೆಯಿಲ್ಲ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಯಾವುದೇ ರೀತಿಯ ಪುಸ್ತಕಗಳು ಸಿಗುತ್ತಿಲ್ಲ, ಶೌಚಾಲಯ ವ್ಯವಸ್ಥೆಯಿಲ್ಲ. ಮೂಲಭೂತ ಸೌಲಭ್ಯಗಳು ಇಲ್ಲ, ಕೆಲ ಪುಸ್ತಗಳು ಮಾತ್ರ ಲಭ್ಯವಾಗುತ್ತವೆ. ಅವುಗಳು ಕೂಡ ಹೆಸರಿಗೆ ಮಾತ್ರ ಸೀಮಿತವಾಗಿವೆ.

ನಾಮಫಲಕವೇ ಇಲ್ಲ: ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಸುಮಾರು 1,500 ಪುಸ್ತಗಳು ಇವೆ. 375 ಜನರು ಸದಸ್ಯತ್ವ ಹೊಂದಿದ್ದಾರೆ. ಆದರೆ ಎರಡು ದಿನ ಪತ್ರಿಕೆಗಳು ಬಿಟ್ಟರೆ ಬೇರೆ ಪತ್ರಿಕೆಗಳು ಕಾಣಿಸುವುದಿಲ್ಲ. ಇದರಿಂದ ಓದುಗ ಮತ್ತು ಸಾರ್ವಜನಿಕರಿಗೆ ಗ್ರಂಥಾಲಯ ಉಪಯುಕ್ತ ಮಾಹಿತಿ ನೀಡದೆ ಬಣಗುಟ್ಟುತ್ತಿವೆ. ಗ್ರಂಥಾಲಯದ ಕಟ್ಟಡಕ್ಕೆ ನಾಮಫಲಕ ಮತ್ತು ವೇಳಾಪಟ್ಟಿ ಅಳವಡಿಸಿಲ್ಲ, ಹೀಗಾಗಿ ಸಮಯಕ್ಕೆ ಮಹತ್ವ ಕಲ್ಪಿಸದೇ ಇರುವುದರಿಂದ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ಇಲಾಖೆ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು, ಸಾರ್ವಜನಿಕ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ನಿರ್ಮಿಸಬೇಕು, ಸ್ವಂತ ಕಟ್ಟಡ ಹೊಂದಿ ಪತ್ರಿಕಾ ವಿಭಾಗ, ಪರಾಮರ್ಶನೆ ವಿಭಾಗ ಮಕ್ಕಳು, ಮಹಿಳಾ ಸ್ಪರ್ಧಾತ್ಮಕ ವಿದ್ಯಾರ್ಥಿಗಳ ವಿಭಾಗ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸುವ ಕಾರ್ಯ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡಬೇಕು ಎಂಬುದು ಪಟ್ಟಣದ ಜನರ ಒತ್ತಾಯ.

ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ 372 ಓದುಗರುಸದಸ್ಯತ್ವ ಹೊಂದಿದ್ದಾರೆ.ಅನುದಾನಕ್ಕೆ ಅನುಗುಣವಾಗಿ ಸೌಲಭ್ಯ ಒದಗಿಸಲಾಗಿದೆ. ಹೊಸದಾಗಿ ನಾಮಫಲಕ ಮಾಡಿಸಲು ಕೊಟ್ಟಿದ್ದು, ಹಳೆಯ ಫಲಕ ತೆಗೆಯಲಾಗಿದೆ. ಗ್ರಂಥಾಲಯದ ಆಸ್ತಿಯ ಉತಾರ ಇದೆ. ಆದರೆ ಕಟ್ಟಡವಿಲ್ಲ. ಆದ್ದರಿಂದ ಪಪಂಗೆ ಸಂಬಂಧಿಸಿದ ಕಟ್ಟಡದಲ್ಲಿ ಗ್ರಂಥಾಲಯ ನಡೆಸುತ್ತಿದ್ದೇವೆ. ಪ್ರಕಾಶ ಚಳ್ಳಿಗಿಡದ, ಗ್ರಂಥಾಲಯ ಮೇಲ್ವಿಚಾರಕ

 

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.