ಗುಳೇದಗುಡ್ಡ ಗ್ರಂಥಾಲಯಕ್ಕಿಲ್ಲ ಸ್ವಂತ ಸೂರು


Team Udayavani, Oct 22, 2019, 12:42 PM IST

bk-tdy-1

ಗುಳೇದಗುಡ್ಡ: ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆಗೊಂಡು ಸುಮಾರು 38 ವರ್ಷ ಕಳೆದರೂ ಗ್ರಂಥಾಲಯಕ್ಕೆ ಇನ್ನೂ ಸ್ವಂತ ಸೂರಿಲ್ಲ. ಪಟ್ಟಣದ ಬನ್ನಿಕಟ್ಟಿ ಹತ್ತಿರದ ಪುರಸಭೆ ಕಟ್ಟಡದಲ್ಲಿ 1980ರಲ್ಲಿ ಈ ಸಾರ್ವಜನಿಕ ಗ್ರಂಥಾಲಯ ಆರಂಭವಾಗಿದ್ದು, ಅಂದಿನಿಂದ ಇಂದಿನವರೆಗೂ ಇದಕ್ಕೆ ಸ್ವಂತ ಜಾಗ ಇಲ್ಲ. ಇಲ್ಲಿ ಸುಮಾರು 10-15 ಜನರು ಮಾತ್ರ ಕುಳಿತುಕೊಳ್ಳುವಷ್ಟು ವ್ಯವಸ್ಥೆಯಿದೆ. ಕನಿಷ್ಠ 30-40 ಜನರು ಕುಳಿತುಕೊಳ್ಳುವಷ್ಟು ಜಾಗದ ಅವಶ್ಯಕತೆಯಿದೆ.

ಗ್ರಂಥಾಲಯ ಪಕ್ಕದಲ್ಲೇ ಪುರಸಭೆ 2008ರಲ್ಲಿ ಒಂದು ಕೊಠಡಿ ನಿರ್ಮಿಸಿ ಕೊಟ್ಟಿದೆ. ಆದರೆ, ಆ ಕೊಠಡಿಯಲ್ಲಿ ಗ್ರಂಥಾಲಯದಲ್ಲಿನ ಪುಸ್ತಕಗಳನ್ನಿರಿಸಿ ಪುಸ್ತಕ ವಿಭಾಗ ಮಾಡಲಾಗಿದೆ. ಅಲ್ಲಿ ಪುಸ್ತಕಗಳೇ ಇರುವುದರಿಂದ ಅಲ್ಲಿಯೂ ಜನರಿಗೆ ಕುಳಿತುಕೊಳ್ಳಲು ಜಾಗವಿಲ್ಲ. ಮಳೆ ಬಂದ್ರೆ ಸೋರುತ್ತದೆ: ಮಳೆ ಬಂದರೆ ಮಾತ್ರ ಕಟ್ಟಡ ಸೋರುತ್ತದೆ. ಕಟ್ಟಡ ರಿಪೇರಿ ಮಾಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪುರಸಭೆ ಗಮನ ಹರಿಸುತ್ತಿಲ್ಲ.

ಎಷ್ಟು ಪುಸ್ತಕಗಳಿವೆ?: ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ 2178 ಸದಸ್ಯರಿದ್ದು, ಸುಮಾರು 24248 ಪುಸ್ತಕಗಳಿವೆ. 10 ದಿನಪತ್ರಿಕೆಗಳು, 4 ವಾರಪತ್ರಿಕೆಗಳು, 5 ಮಾಸ ಪತ್ರಿಕೆಗಳು ಬರುತ್ತವೆ. ವರ್ಷಕ್ಕೆ 2 ಸಾವಿರ ಪುಸ್ತಕ: ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಗ್ರಂಥಾಲಯ ಇಲಾಖೆ ಪ್ರತಿವರ್ಷ ಓದುಗರಿಗೆ ಅನುಕೂಲ ವಾಗಲೆಂದು 1-2 ಸಾವಿರ ಪುಸ್ತಕಗಳನ್ನು ಒದಗಿಸುತ್ತಿದೆ.

ಪಠ್ಯಪುಸ್ತಕಗಳೂ ಬೇಕು: ಗ್ರಂಥಾಲಯದಲ್ಲಿ ಪಠ್ಯಪುಸ್ತಕ ಒದಗಿಸಿದರೆ ಕಾಲೇಜು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಮಕ್ಕಳು, ಮಹಿಳಾ ಓದುಗರ ವಿಭಾಗ ಮಾಡಿದರೆ ಇನ್ನೂ ಅನುಕೂಲ. ಅಲ್ಲದೇ ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸೌಲಭ್ಯ ಒದಗಿಸಬೇಕಿದೆ.

 

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.