ಮರಣೋತ್ತರ ಪರೀಕ್ಷೆಯಿಂದ ಸಿಕ್ಕಿಬಿದ್ದ ಹಂತಕ


Team Udayavani, Oct 24, 2019, 3:05 AM IST

maranottra

ಬೆಂಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಮಹಿಳೆಯ ಮರಣೊತ್ತರ ಪರೀಕ್ಷಾ ವರದಿಯಿಂದ ಕೊಲೆಗಾರ ಸಿಕ್ಕಿಬಿದ್ದ ಪ್ರಕರಣ ಸಂಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆದ್ದಲಹಳ್ಳಿ ನಿವಾಸಿ ಗೌರಿ (43) ಎಂಬವರ ಕೊಲೆ ಪ್ರಕರಣ ಸಂಬಂಧ ಕೆಎಸ್‌ಆರ್‌ಟಿಸಿ ಸೇವೆಯಿಂದ ಅಮಾನತುಗೊಂಡಿದ್ದ ಚಾಲಕ ಲಕ್ಷ್ಮೀನಾರಾಯಣ (38) ಎಂಬಾತನನ್ನು ಬಂಧಿಸಿರುವ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದೊಡ್ಡಬಳ್ಳಾಪುರ ಮೂಲದ ಆರೋಪಿ ಲಕ್ಷ್ಮೀನಾರಾಯಣ ಈ ಹಿಂದೆ ಕೆಎಸ್‌ಆರ್‌ಟಿಸಿ ಚಾಲಕ ಹಾಗೂ ನಿರ್ವಾಹಕನಾಗಿ ಸೇವೆ ಸಲ್ಲಿಸುತ್ತಿದ್ದ. ಆದರೆ, ಕರ್ತವ್ಯಕ್ಕೆ ಪದೇ ಪದೆ ಗೈರುಹಾಜರಾಗುತ್ತಿದ್ದರಿಂದ ಸೇವೆಯಿಂದ ಅಮಾನತುಗೊಂಡಿದ್ದ. ಒತ್ತೆಯಿಟ್ಟಿದ್ದ ಚಿನ್ನದ ಒಡವೆ ಬಿಡಿಸಿಕೊಡುವಂತೆ ಹಠ ಮಾಡಿದ್ದಕ್ಕೆ ಗೌರಿ ಅವರನ್ನು ಕೊಲೆ ಮಾಡಿದ್ದಾಗಿ ಆರೋಪಿ ಲಕ್ಷ್ಮೀನಾರಾಯಣ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರಿ ಅವರು ಗೆದ್ದಲಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು ಮನೆಕೆಲಸ ಮಾಡಿಕೊಂಡಿದ್ದರು. ಅವರ ಮಗ ಅರುಣ್‌ ಮೈಸೂರಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದರು. ಐದಾರು ವರ್ಷಗಳಿಂದ ಗೌರಿ ಅವರಿಗೆ ಲಕ್ಷ್ಮೀನಾರಾಯಣ್‌ ಪರಿಚಯವಿತ್ತು. ಆಗಾಗ ಮನೆಗೂ ಬಂದು ಹೋಗುತ್ತಿದ್ದ. ಈ ಮಧ್ಯೆ ಗೌರಿ ಅವರ ಬಳಿ ಚಿನ್ನಾಭರಣ ಪಡೆದಿದ್ದ ಆತ, ಗಿರವಿ ಅಂಗಡಿಯಲ್ಲಿ ಒತ್ತೆಯಿಟ್ಟಿದ್ದು ಬಿಡಿಸಿಕೊಟ್ಟಿರಲಿಲ್ಲ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು.

ಅ.1ರಂದು ರಾತ್ರಿ ಲಕ್ಷ್ಮೀನಾರಾಯಣ್‌ ಮನೆಗೆ ಬಂದಾಗ ಒಡವೆ ಬಿಡಿಸಿಕೊಡುವ ವಿಚಾರಕ್ಕೆ ಜಗಳ ನಡೆದಿದೆ. ಹೀಗಾಗಿ, ಮಲಗಿದ್ದ ಗೌರಿ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಆತ, ಆಕೆಯ ಫೋನ್‌ ಸ್ವಿಚ್‌ ಆಫ್ ಮಾಡಿಟ್ಟು ಹೊರಗಡೆಯಿಂದ ಬೀಗ ಹಾಕಿಕೊಂಡು ಹೊರಟುಹೋಗಿದ್ದ. ಅ.4ರಂದು ಗೌರಿ ಅವರ ಮನೆಯಿಂದ ಕೆಟ್ಟವಾಸನೆ ಬರುತ್ತಿತ್ತು.

ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಂಬಂಧಿಕರು ಬೀಗ ಒಡೆದು ನೋಡಿದಾಗ ಅರ್ಧಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಂಬಂಧ ಸಂಜಯ ನಗರ ಪೊಲೀಸರು ಮೊದಲಿಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಗೌರಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಎಂ.ಎಸ್‌. ರಾಮಯ್ಯ ಆಸ್ಪತ್ರೆ ವೈದ್ಯರು, ಬಲವಾದ ಹಲ್ಲೆ ನಡೆದಿರುವುದರಿಂದ ಮೃತಪಟ್ಟಿದ್ದಾರೆ ಎಂದು ವರದಿ ನೀಡಿದ್ದರು.

ಈ ವರದಿ ಆಧರಿಸಿ ಕೊಲೆಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ಲಕ್ಷ್ಮೀನಾರಾಯಣ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಗೌರಿ ಅವರ ಕೊಲೆಯ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.