![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 24, 2019, 9:20 PM IST
ಚಿತ್ರದುರ್ಗ: ಮೋದಿ ಜನೋಪಯೋಗಿ ಕಾರ್ಯಕ್ರಮಗಳಿಂದ ಜನಾಶೀರ್ವಾದ ಸಿಕ್ಕಿದ್ದು ದೇಶಾದ್ಯಂತ ಕಮಲ ಅರಳುತ್ತಿದೆ. ಕರ್ನಾಟಕದಲ್ಲಿ ಮೂರು ವರ್ಷ ಮಾತ್ರವಲ್ಲ, ಮುಂದಿನ 20 ವರ್ಷ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲಸಮವಾಗುತ್ತಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ಜನಪ್ರಿಯತೆ ಗಳಿಸುತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿ ಮುಖ್ಯಮಂತ್ರಿಗಳು ಜನಪ್ರಿಯತೆ ಗಳಿಸಿದ್ದಾರೆ ಎಂಬುದಕ್ಕೆ ಅಲ್ಲಿನ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದರು.
ಡಿಕೆಶಿ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿದ್ದೇವೆ. ಶಿವಕುಮಾರ್ ಅವರು ಕಾನೂನು ಪ್ರಕಾರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಶತ್ರುವೇ ಆಗಿದ್ದರೂ ಕಷ್ಟದಿಂದ ಪಾರು ಮಾಡಲು ಪ್ರಯತ್ನಿಸುತ್ತೇವೆ. ಬಿಜೆಪಿ ಯಾರಿಗೂ ಕೇಡು ಬಯಸಿಲ್ಲ ಮತ್ತು ಬಯಸುವುದೂ ಇಲ್ಲ. ಮತ್ತೂಬ್ಬರಿಗೆ ಕೇಡು ಬಯಸುವುದು ಹಿಂದೂ ಧರ್ಮದಲ್ಲಿ ಇಲ್ಲ. ಕೇಡು ಬಯಸಿದರೆ ಹಿಂದೂಗಳಲ್ಲ ಎಂದರು.
ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನವಾಗಿರಲ್ಲ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸುತ್ತಾರೆ. ಸದಾ ಕೆಣಕುವ, ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಹೀಗೆಯೇ ಮಾತನಾಡಿ ಸರ್ಕಾರ ಪತನಕ್ಕೆ ಕಾರಣವಾಗಿದ್ದಾರೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.