![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-415x241.jpg)
ರೈತರಿಗೆ-ಭೂಮಿ, ಕೂಲಿಕಾರರಿಗೆ-ಕೆಲಸ ನೀಡಲು ಹಿಂದೇಟು
Team Udayavani, Oct 25, 2019, 5:43 PM IST
![25-October–30](https://www.udayavani.com/wp-content/uploads/2019/10/25-October-30-620x266.jpg)
ಹುಣಸಗಿ: ಆಡಳಿತ ನಡೆಸಿದ ಎಲ್ಲ ಸರಕಾರಗಳು ಬಂಡವಾಳಶಾಹಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಉಚಿತ ಭೂಮಿ ನೀಡುವ ಜತೆಗೆ ಎಲ್ಲ ಮೂಲ ಸೌಲಭ್ಯ ನೀಡುತ್ತಿವೆ. ಆದರೆ ಊಳುವ ರೈತನಿಗೆ ಭೂಮಿ ಮತ್ತು ಕೃಷಿ ಕೂಲಿಕಾರರರಿಗೆ ಕೆಲಸ ನೀಡಲು ಕಾನೂನು ತೊಡಕಾಗುತ್ತಿದೆ ನೆಪ ಹೇಳಿ ಜಾರಿಕೊಳ್ಳುತ್ತಿವೆ ಎಂದು ರಾಜ್ಯ ಮುಖಂಡ ನಿತ್ಯಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೃಷಿ ಕೂಲಿಕಾರರ ತಾಲೂಕು ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.
ಸಮ ಸಮಾಜ ನಿರ್ಮಾಣಕ್ಕಾಗಿ ದಾಸರು, ಶರಣರು, ಸಂತರು ಸಮಾಜಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು. ಆದರೆ ಇದುವರೆಗೂ ಅದು ಕೈಗೂಡುತ್ತಿಲ್ಲ. ಇದಕ್ಕೆ ಸರಕಾರದ ನೀತಿ-ನಿಯಮಗಳೇ ಕಾರಣ. ಯಾವುದೇ ಸೌಲಭ್ಯ ನೀಡದೇ
ನೆರೆ ಹಾವಳಿ ಪೀಡಿತ ಪ್ರದೇಶದಲ್ಲಿ ಜನರ ಜೀವನ ಹದೆಗೆಟ್ಟಿದ್ದು, ಅವರ ಬದುಕು ನೀರು ಪಾಲಾಗಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ಸುರೇಖಾ ಕುಲಕರ್ಣಿ ಮಾತನಾಡಿ, ಹಕ್ಕುಗಳಿಗಾಗಿ ಹೋರಾಟ ಮಾಡಲು ಹೋದರೆ ಸರಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಆದ್ದರಿಂದ ನಮ್ಮ ಹಕ್ಕು ಪಡೆದುಕೊಳ್ಳಲು ನಾವೇ ಹೋರಾಟ ಮಾಡುವುದು ಅನಿವಾರ್ಯ. ಸಂಘಟಿತರಾಗಿ ಹೋರಾಟ ಮಾಡಿದ್ದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದರು.
ಮುಖಂಡ ದಾವಲಸಾಬ ನದಾಫ್ ಮಾತನಾಡಿ, ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದಂತೆ ಕೂಲಿಕಾರರು ಕೂಡ ಹೋರಾಟ ಮಾಡಲು ಮುನ್ನುಗ್ಗಬೇಕಿದೆ ಎಂದರು. ಸಮ್ಮೇಳನ ಆರಂಭಕ್ಕೂ ಮುನ್ನ ಪ್ರಾರಂಭವಾದ ಮೆರವಣಿಗೆ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ನೀಲಕಂಠೇಶ್ವರ ದೇವಸ್ಥಾನದವರೆಗೂ ನಡೆಯಿತು.
ಮಲ್ಲಮ್ಮ ಕೋಡ್ಲಿ, ಮಲ್ಲಮ್ಮ ಗಡದ, ಸೋಫಿಸಾಬ ನದಾಫ್, ಬಂದಗೀಸಾಬ ಅಗ್ನಿ, ಕಾಶೀನಾಥ ಹಾದಿಮನಿ, ಬಸವರಾಜ ಅನಸೂರ, ಬಸಮ್ಮ ಆಲಾಳ, ಸಿದ್ದಪ್ಪ ಪೂಜಾರಿ, ರಾಜು ದೊಡ್ಡಮನಿ, ಇಮಾಮಬಿ ಇತರರು ಇದ್ದರು. ಬಸವರಾಜ ಕಾಮನಟಗಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![Frud](https://www.udayavani.com/wp-content/uploads/2024/12/Frud-1-150x90.jpg)
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
![MCC-BankArrest](https://www.udayavani.com/wp-content/uploads/2024/12/MCC-BankArrest-150x90.jpg)
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
![KND-Amber-greece](https://www.udayavani.com/wp-content/uploads/2024/12/KND-Amber-greece-150x90.jpg)
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
![Surthkal-Spota](https://www.udayavani.com/wp-content/uploads/2024/12/Surthkal-Spota-150x90.jpg)
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.