![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 29, 2019, 6:54 PM IST
ನವದೆಹಲಿ: ನೀವು ಕಾಯ್ದಿರಿಸಿದ ರೈಲ್ವೇ ಟಿಕೆಟ್ ಅನ್ನು ಕ್ಯಾನ್ಸಲ್ ಮಾಡಿದಲ್ಲಿ ಅಥವಾ ತತ್ಕಾಲ್ ನಲ್ಲೇ ಉಳಿದ ಟಿಕೆಟ್ ಗಳಿಗೆ ಹಣ ಹಿಂದಿರುಗಿಸುವ ವಿಧಾನವನ್ನು ಭಾರತೀಯ ರೈಲ್ವೇ ಇನ್ನಷ್ಟು ಪಾರದರ್ಶಕಗೊಳಿಸಿದೆ. ಒಟಿಪಿ ಆಧಾರಿತ ಹಣ ವಾಪಸಾತಿ ವಿಧಾನಕ್ಕೆ ಮಂಗಳವಾರದಂದು ಚಾಲನೆ ನೀಡಿರುವ ಭಾರತೀಯ ರೈಲ್ವೇ ಈ ಮೂಲಕ ನೀವು ಅಧಿಕೃತ ಐ.ಆರ್.ಸಿ.ಟಿ.ಸಿ. ಏಜೆಂಟರ ಮೂಲಕ ಕಾಯ್ದಿರಿಸಿದ ರೈಲ್ವೇ ಟಿಕೆಟ್ ಅನ್ನು ರದ್ದುಗೊಳಿಸಿದರೆ ಅಥವಾ ನಿಮ್ಮ ಪ್ರಯಾಣ ಖಾತ್ರಿಯಾಗದಿದ್ದರೆ ಆ ಸಂದರ್ಭದಲ್ಲಿ ಒಟಿಪಿ ಸಂದೇಶವನ್ನು ಪ್ರಯಾಣಿಕರ ಮೊಬೈಲ್ ಗೆ ಕಳುಹಿಸುವ ವ್ಯವಸ್ಥೆ ಇದಾಗಿದೆ. ಟಿಕೆಟ್ ಶುಲ್ಕವನ್ನು ರಿಫಂಡ್ ಮಾಡುವ ಸಂದರ್ಭದಲ್ಲೇ ಈ ಒಟಿಪಿ ಸಂದೇಶವೂ ಸಹ ಬರುತ್ತದೆ.
ಭಾರತೀಯ ರೈಲ್ವೇಯ ಪಿ.ಎಸ್.ಯು. ಮತ್ತು ಐ.ಆರ್.ಸಿ.ಟಿ.ಸಿ. ಜಂಟಿಯಾಗಿ ಈ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿವೆ. ಐ.ಆರ್.ಸಿ.ಟಿ.ಸಿ. ಅಧಿಕೃತ ಏಜೆಂಟರುಗಳ ಮೂಲಕ ಬುಕ್ಕಿಂಗ್ ಮಾಡಿದ ಟಿಕೆಟ್ ಗಳಿಗೆ ಮಾತ್ರವೇ ಈ ಒಟಿಪಿ ಸಂದೇಶ ಬರುತ್ತದೆ.
ಟಿಕೆಟ್ ಅಲಭ್ಯತೆಯಿಂದ ಅಥವಾ ಇನ್ಯಾವುದೇ ಕಾರಣಗಳಿಂದ ಒಂದು ವೇಳೆ ನಿಮ್ಮ ಉದ್ದೇಶಿತ ರೈಲ್ವೇ ಪ್ರಯಾಣವು ರದ್ದುಗೊಂಡಲ್ಲಿ, ಪ್ರಯಾಣಿಕರು ಅಧಿಕೃತ ಏಜೆಂಟರ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ಸಂದರ್ಭದಲ್ಲಿ ನೀಡುವ ಮೊಬೈಲ್ ನಂಬರ್ ಗೆ ಒಟಿಪಿ ಸಂದೇಶವನ್ನು ಕಳುಹಿಸಲಾಗುತ್ತದೆ. ಈ ಒಟಿಪಿ ಸಂದೇಶವನ್ನು ನೀವು ಟಿಕೆಟ್ ಬುಕ್ಕಿಂಗ್ ಮಾಡಿರುವ ಏಜೆಂಟ್ ಅವರಿಗೆ ತೋರಿಸುವ ಮೂಲಕ ನೀವು ನಿಮ್ಮ ಟಿಕೆಟ್ ಹಣವನ್ನು ಮರಳಿ ಪಡೆಯಬಹುದಾಗಿರುತ್ತದೆ.
ಒಟಿಪಿ ಆಧಾರಿತ ಟಿಕೆಟ್ ಶುಲ್ಕ ಹಿಂದಿರುಗಿಸುವಿಕೆ ವಿಧಾನವು ಹೆಚ್ಚು ಪಾರದರ್ಶಕತೆಯಿಂದ ಕೂಡಿದ್ದಾಗಿದೆ ಎಂದು ನಂಬಲಾಗುತ್ತಿದೆ. ಯಾಕೆಂದರೆ ಈ ವಿಧಾನದಲ್ಲಿ ಪ್ರಯಾಣಿಕರಿಗೆ ತಮ್ಮ ಟಿಕೆಟ್ ಶುಲ್ಕದಲ್ಲಿ ಎಷ್ಟು ಮೊತ್ತ ರಿಫಂಡ್ ಆಗಿ ಏಜೆಂಟರ ಕೈಸೇರಿದೆ ಎಂಬ ನಿಖರವಾದ ಮಾಹಿತಿ ಲಭ್ಯವಾಗುತ್ತದೆ. ಇದರಿಂದಾಗಿ ಟಿಕೆಟ್ ರಿಫಂಡ್ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳಲು ರೈಲ್ವೇ ಪ್ರಯಾಣಿಕರು ತಾವು IRCTCಯ ಅಧಿಕೃತ ಏಜೆಂಟರ ಬಳಿ ಟಿಕೆಟ್ ಕಾಯ್ದಿರಿಸುವ ಸಂದರ್ಭದಲ್ಲಿ ತಮ್ಮ ಸರಿಯಾದ ಮೊಬೈಲ್ ನಂಬರನ್ನು ನೀಡುವುದು ಅಗತ್ಯವಾಗಿರುತ್ತದೆ, ಮಾತ್ರವಲ್ಲದೇ ಏಜೆಂಟರುಗಳು ಈ ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ ಎಂಬುದನ್ನೂ ಸಹ ಖಚಿತಪಡಿಸಿಕೊಳ್ಳುವುದು ಪ್ರಯಾಣಿಕರ ಜವಾಬ್ದಾರಿಯಾಗಿರುತ್ತದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.