ಹಾಸನಾಂಬೆ ಹುಂಡಿಯಲ್ಲಿ ಸಿಕ್ಕಿದವು ಭಕ್ತರ ವಿಚಿತ್ರ ಬೇಡಿಕೆಗಳು

ಹಾಸನಾಂಬೆಗೆ 3.06 ಕೋಟಿ ರೂ.ಆದಾಯ

Team Udayavani, Oct 30, 2019, 9:25 PM IST

hasanaba

ಹಾಸನ: ಹಾಸನಾಂಬಾ ಜಾತ್ರಾ ಮಹೋತ್ಸವದ 11 ದಿನಗಳಲ್ಲಿ ದೇವಾಲಯಕ್ಕೆ ಒಟ್ಟು 3.06 ಕೋಟಿ ರೂ.ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 58.12 ಲಕ್ಷ ರೂ.ಆದಾಯ ಹೆಚ್ಚಾಗಿದೆ.
ವಿಶೇಷ ದರ್ಶನದ ಟಿಕೆಟ್‌ಗಳ ಮಾರಾಟದಿಂದ 1.75 ಕೋಟಿ ರೂ.ಸಂಗ್ರಹವಾಗಿದ್ದರೆ, ಹುಂಡಿ ಕಾಣಿಕೆಯಿಂದ 1.31 ಕೋಟಿ ರೂ.ಸಂಗ್ರಹವಾಗಿದೆ. ಹಾಸನಾಂಬೆ ದೇಗುಲದ ಆವರಣದಲ್ಲಿರುವ ಸಿದ್ದೇಶ್ವರ ದೇವಾಲಯದ ಮುಂಭಾಗ ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಹುಂಡಿಯ ಎಣಿಕೆ ಸಂಜೆ 5.30ರ ವೇಳೆಗೆ ಮುಗಿಯಿತು. ಈ ವರ್ಷ ಹಾಸನಾಂಬ ದೇವಾಲಯದ ಬಾಗಿಲು ಒಟ್ಟು 13 ದಿನ ತೆರೆದಿತ್ತು.

ಈ ಮಧ್ಯೆ, ಭಕ್ತರು ಹಾಸನಾಂಬೆಯ ಸನ್ನಿಧಿಯಲ್ಲಿ ಚಿತ್ರ- ವಿಚಿತ್ರ ಬೇಡಿಕೆಗಳನ್ನು ಮಂಡಿಸಿದ್ದು, ಹುಂಡಿ ತೆರೆದಾಗ ಕಾಣಿಕೆ, ಚಿನ್ನ, ಬೆಳ್ಳಿಯ ಜೊತೆಗೆ ಲಿಖೀತ ಬೇಡಿಕೆಗಳೂ ಅನಾವರಣಗೊಂಡವು;

– ತಾಯೇ ನಮ್ಮ ಸಾಲಗಳನ್ನೆಲ್ಲಾ ತೀರಿಸಿ, ಒಂದು ನಿವೇಶನ ತೆಗೆದುಕೊಳ್ಳಲು ದಯೆ ತೋರಮ್ಮ.

– ನನ್ನ ಮಕ್ಕಳಿಗೆ ಒಳ್ಳೆ ವಿದ್ಯೆ, ಬುದ್ದಿ ಮತ್ತು ಗಂಡನಿಗೆ ಹಾಗೂ ಕುಟುಂಬದವರಿಗೆ ಆಯಸ್ಸು ಕೊಡು ತಾಯಿ.

– ನಾನು ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗುವಂತೆ ಮಾಡು ತಾಯಿ. ಓದುವ ಆಸಕ್ತಿ ಕರುಣಿಸು, ಒಳ್ಳೆ ಕಾಲೇಜಿನಲ್ಲಿ ಸೀಟು ಸಿಗುವಂತೆ ಮಾಡು.

– ನನ್ನ ತಾಯಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಸಿಗುವಂತೆ ಮಾಡು.

– ಪ್ರೀತಿ ಮಾಡುತ್ತಿರುವ ಹುಡುಗಿ ಮನೆಯವರು ಮತ್ತು ನಮ್ಮ ಮನೆಯವರು ಒಪ್ಪಿಕೊಳ್ಳುವಂತೆ ಮಾಡಿದರೇ ನಾನು ಪ್ರತಿ ವರ್ಷ ನಿನ್ನ ದರ್ಶನಕ್ಕೆ ಬರುತ್ತೀನಿ.

– ಹಾಸನ ಉಪ ವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಹಾಸನದಲ್ಲೇ ಇರಬೇಕು.

– ನನ್ನ ಮಗಳ ಮದುವೆ ಮಾಡಿ 6 ತಿಂಗಳಾಯ್ತು, ನನ್ನ ಸೈಟು ಮಾರಿ 20 ಲಕ್ಷ ಖರ್ಚು ಮಾಡಿ ಮದುವೆ ಮಾಡಿದೆ, ಈಗ ಗಂಡನ ಮನೆಯಲ್ಲಿ ಹಿಂಸೆ ಕೊಡುತ್ತಿದ್ದಾರೆ. ಅವಳಿಗೆ ನೆಮ್ಮದಿ ಕೊಡು ತಾಯಿ.

– ಬೀಗರ ಮನೆಗೆ ಹೋದರೆ ನಾಯಿಗಿಂತ ಕಡೆಯಾಗಿ ನಮ್ಮ ಕಾಣುತ್ತಿದ್ದಾರೆ. ಸರಿ ಮಾಡು ತಾಯಿ.

– ನನಗೆ ಬೇಗ ಸೈಟು ಸಿಕ್ಕಿ ಮನೆ ಕಟ್ಟಬೇಕು.

– ನನ್ನ ಗಂಡನಿಗೆ ಒಳ್ಳೆ ಬುದ್ದಿ ಕೊಡವ್ವ, ನನ್ನ ಗಂಡ ನಾನು ಹೇಳಿದ ಹಾಗೇ ಕೇಳಬೇಕು.

– ನಾನು ಮದುವೆಯಾಗಿ 10 ವರ್ಷ ಕಳೆದಿದೆ, ನಮಗೆ ಸಂತಾನ ಫ‌ಲ ನೀಡಮ್ಮ. ಇನ್ನು ಒಂದು ವರ್ಷದೊಳಗೆ ಮಗುವಾದರೆ ಪ್ರತಿ ವರ್ಷ ನಿನ್ನ ಸನ್ನಿದಿಗೆ ಬಂದು ಹರಕೆ ತೀರಿಸುತ್ತೇನೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.