ಕರ್ನಾಟಕ ರಾಜ್ಯೋತ್ಸವಕ್ಕೆ ಪರಿಸರಸ್ನೇಹಿ ಬಾವುಟ

ನಗರದ ಶಾಲೆಗಳಲ್ಲಿ ಹಾರಾಡಲಿವೆ ಬೀಜ ಧ್ವಜ !

Team Udayavani, Oct 31, 2019, 4:14 PM IST

31-October-20

ಮಹಾನಗರ : ಪ್ಲಾಸ್ಟಿಕ್‌ ಬಾವುಟಗಳನ್ನು ತ್ಯಜಿಸಿ ಬಟ್ಟೆಯ ಬಾವುಟ ಗಳನ್ನು ಹಿಡಿದಿದ್ದಾಯಿತು. ಇದೀಗ ಈ ರಾಜ್ಯೋತ್ಸವ ಸಂದರ್ಭ ಮಂಗಳೂರಿನ ಶಾಲೆಗಳಲ್ಲಿ ಬೀಜ ಬಾವುಟಗಳು ಹಾರಾಡಲಿವೆ.

ವಿಶೇಷವೆಂದರೆ, ಬಾವುಟಗಳೇ ಸುಂದರ ಸಸ್ಯಗಳಾಗಿ ರೂಪು ತಳೆದು ಕಡಲನಾಡಿನ ಜನತೆಯ ಉಸಿರಾಟಕ್ಕೆ ಶುದ್ಧ ವಾಯು, ಸೇವನೆಗೆ ಆಹಾರ ಒದಗಿಸಲಿವೆ!

ಪರಿಸರಸ್ನೇಹಿ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವ ನಗರದ ಇಕೋ ಫ್ರೆಂಡ್ಸ್‌ ತಂಡವು ಈ ಕರ್ನಾಟಕ ರಾಜ್ಯೋತ್ಸವಕ್ಕೆ ಬೀಜ ಬಾವುಟಗಳನ್ನು ತಯಾರಿಸಿದ್ದು, ಇದೇ ಮೊದಲ ಬಾರಿಗೆ ನಗರದ ಶಾಲೆಗಳಲ್ಲಿ ಬೀಜ ಬಾವುಟವನ್ನು ಅರಳಿಸಲು ಪ್ರೇರಣೆ ನೀಡಿದೆ.

ಬಾವುಟ ತಯಾರಿ
ಕನ್ನಡ ಬಾವುಟದ ಬಣ್ಣವಾದ ಕೆಂಪು, ಹಳದಿ ಬಣ್ಣದ ಪೇಪರ್‌ಗಳಲ್ಲಿ ಈ ಬಾವುಟಗಳನ್ನು ತಯಾರಿಸಲಾಗಿದೆ. ಬಾವುಟವು 3 ಇಂಚು ಉದ್ದ ಮತ್ತು 2 ಇಂಚು ಅಗಲ ಇರುತ್ತದೆ. ಮುಂದಿನ ಭಾಗದಲ್ಲಿ ಎರಡು ಬಣ್ಣದ ಪೇಪರ್‌ ಗಳು, ನಡುವೆ ತರಕಾರಿ ಬೀಜಗಳು, ಹಿಂದಿನ ಭಾಗದಲ್ಲಿ ಬಿಳಿ ಬಣ್ಣದ ಬಣ್ಣದ ಪೇಪರ್‌ಗಳನ್ನು ಅಂಟಿಸಿ ಅದಕ್ಕೆ ಪಿನ್‌ ಮಾಡಲಾಗಿದೆ. ಪೇಪರ್‌ಗಳು ಮಣ್ಣಿನಲ್ಲಿ ಸುಲಭವಾಗಿ ಕರಗುವ ಗುಣ ಹೊಂದಿರುವುದರಿಂದ ಮಕ್ಕಳು ಬಾವುಟ ಬಳಕೆ ಮಾಡಿದ ನಂತರ ಈ ಪೇಪರ್‌ಗಳನ್ನು ಪಾಟ್‌ ಅಥವಾ ಮಣ್ಣಿನಲ್ಲಿ ನೇರವಾಗಿ ಹಾಕಬಹುದು. ಕೆಲವು ದಿನಗಳ ಅನಂತರ ಈ ಪೇಪರ್‌ ಮಣ್ಣಿನಲ್ಲಿ ಕರಗಿ ಬೀಜ ಮೊಳಕೆ ಯೊಡೆಯಲು ಆರಂಭಿಸುತ್ತದೆ. ಪ್ರತಿ ದಿನ ನೀರು ಹಾಕುತ್ತಿರಬೇಕು. ಕ್ರಮೇಣ ಮೊಳಕೆಯೊಡೆದ ಬೀಜ ಗಿಡವಾಗಿ ರೂಪು ತಳೆದು ಫಲಭರಿತವಾಗುತ್ತದೆ ಎಂಬುದು ತಂಡದ ಯೋಜನೆ.

ತರಕಾರಿ ಬೀಜಗಳು
ಈ ಬಾರಿ ತರಕಾರಿ ಬೀಜಗಳನ್ನೇ ಬಾವುಟದಲ್ಲಿ ಇಡಲಾಗಿದೆ. ಟೊಮೇ ಟೊ, ಬೆಂಡೆ, ಸೌತೆ ಮತ್ತು ಹರಿವೆ ಬೀಜಗಳನ್ನು ಬಾವುಟದೊಳಗಿಟ್ಟು ಬಾವುಟ ತಯಾರಿಸಲಾಗಿದೆ. ಈ ಬೀಜಗಳು ಬಹುಬೇಗನೆ ಮೊಳಕೆಯೊಡೆಯುವುದರಿಂದ ಮಕ್ಕಳಿಗೂ ಇಷ್ಟವಾಗಬಹುದು ಎನ್ನುವ ಉದ್ದೇಶ ತಂಡದ್ದು.

ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಉಳಿಸಿ
ರಸ್ತೆ ಬದಿಗಳಲ್ಲಿ, ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಾವುಟಗಳನ್ನು ಮಾರಾಟ ಮಾಡುವುದರಿಂದ ಅದು ರಸ್ತೆಯಲ್ಲಿ ಬಿದ್ದು ಅಥವಾ ಕಸದ ತೊಟ್ಟಿಗಳ ಮೂಲಕ ಭೂಮಿ ಒಡಲನ್ನು ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ.

ಇದರಿಂದ ಜೀವಸಂಕುಲದ ಮೇಲೆಯೂ ಪರಿಣಾಮ ಉಂಟಾಗುತ್ತದೆ. ಜೈವಿಕ ಕಾಗದ ಬೀಜ ಬಾವುಟಗಳು ಪರಿಸರಕ್ಕೆ ಉತ್ತಮ ಎಂಬ ಉದ್ದೇಶದಿಂದ ಈ ಬೀಜ ಬಾವುಟ ತಯಾರಿಸಲಾಗಿದೆ.

5 ಶಾಲೆ; 500 ಬೀಜ ಬಾವುಟ ಹಾರಾಟ ಪ್ರಾಯೋಗಿಕವಾಗಿ ಈ ವರ್ಷ ಬೀಜದ ಬಾವುಟಗಳನ್ನು ತಯಾರಿಸಲಾಗಿದ್ದು, ನಗರದ 5 ಶಾಲೆಗಳ ಮಕ್ಕಳಿಗೆ ಗುರುವಾರ ಬಾವುಟಗಳನ್ನು ಉಚಿತವಾಗಿ ನೀಡಲಾಗುತ್ತದೆ. ಉರ್ವ ಕೆನರಾ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಉರ್ವ ಸರಕಾರಿ ಶಾಲೆ, ಡೊಂಗರಕೇರಿ ಕೆನರಾ ಶಾಲೆ, ಕದ್ರಿ ಸರಕಾರಿ ಶಾಲೆಗಳಲ್ಲಿ ನ. 1ರ ಕರ್ನಾಟಕ ರಾಜ್ಯೋತ್ಸವದಂದು ಈ ಬಾವುಟಗಳು ಹಾರಾಡಲಿವೆ. ಈಗಾಗಲೇ 600 ಬಾವುಟಗಳನ್ನು ತಯಾರಿಸಲಾಗಿದ್ದು, ಈ ಪೈಕಿ 500 ಬಾವುಟಗಳನ್ನು ತಲಾ 100ರಂತೆ 5 ಶಾಲೆಗಳಿಗೆ ನೀಡಲಾಗುತ್ತದೆ. ಉಳಿದ 100 ಬಾವುಟಗಳನ್ನು ಮಣ್ಣಗುಡ್ಡೆ ಸಾವಯವ ಸಂತೆಯಲ್ಲಿ ಇಟ್ಟು ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುವುದು ಎನ್ನುತ್ತಾರೆ ತಂಡದ ಸದಸ್ಯರು.

ಪರಿಸರ ಸ್ನೇಹಿ ಆಚರಣೆ
ಪರಿಸರಸ್ನೇಹಿ ರಾಜ್ಯೋತ್ಸವ ಆಚರಿಸುವ ಉದ್ದೇಶದಿಂದ ಬೀಜ ಬಾವುಟಗಳನ್ನು ತಯಾರಿಸಲಾಗಿದೆ. 500 ಬಾವುಟಗಳನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಮುಂದೆ ಆ. 15ರಂದು ಶಾಲೆ ಗಳಲ್ಲೇ ಬೀಜ ಬಾವುಟ ತಯಾರಿಸುವಂತೆ ಪ್ರೇರೇಪಿಸುವ ಉದ್ದೇಶವಿದೆ.
– ರಾಜೇಶ್‌, ಇಕೋ ಫ್ರೆಂಡ್ಸ್‌
ಗ್ರೂಪ್‌

‡ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.