ಸೌಕರ್ಯ ವಂಚಿತ ಗುರುಮಠಕಲ್‌ ಗ್ರಂಥಾಲಯ

ಬಿರುಕು ಬಿಟ್ಟಿದೆ ಕಟ್ಟಡ ಗೋಡೆ ಸಮರ್ಪಕ ವಿದ್ಯುತ್‌ ವ್ಯವಸ್ಥೆ ಇಲ್ಲ

Team Udayavani, Oct 31, 2019, 6:00 PM IST

31-October-28

ಗುರುಮಠಕಲ್‌: ಜ್ಞಾನಾರ್ಜನೆಗೆ ಪ್ರೇರಣೆ ಆಗಬೇಕಾಗಿದ್ದ ಗುರುಮಠಕಲ್‌ ಗ್ರಂಥಾಲಯ ಸಮಸ್ಯೆಗಳ ಆಗರದಿಂದ ಕೂಡಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿದೆ. ಅಂದಿನ ಸಹಕಾರ ಸಚಿವರಾಗಿದ್ದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು, ಸಾರ್ವಜನಿಕರಿಗೆ ಅನುಕೂಲ ಆಗಲೆಂದು ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಯೋಜನೆಯಡಿ 1993ರಲ್ಲಿ ಸಾರ್ವಜನಿಕ ಗ್ರಂಥಾಲಯ ಉದ್ಘಾಟಿಸಿದ್ದರು. ಪ್ರಸ್ತುತ 800 ಸದಸ್ಯರ ನೋಂದಣಿ ಹೊಂದಿರುವ ಗ್ರಂಥಾಲಯದಲ್ಲಿ 16,000 ಪುಸ್ತಕಗಳಿವೆ. ಮೂರು ಕೋಣೆ ಮತ್ತು 20 ಜನ ಓದಲು ಆಸನಗಳ ವ್ಯವಸ್ಥೆ ಇದೆ.

ಆದರೆ ಗ್ರಂಥಾಲಯದಲ್ಲಿ ಮೂಲ ಸೌಲಭ್ಯಗಳು ಮರೀಚಿಕೆ ಯಾಗಿವೆ. ಉತ್ತಮ ವಿದ್ಯುತ್‌ ಸಂಪರ್ಕ ಇಲ್ಲ. ಗೋಡೆಗಳು ಬಿರುಕು ಬಿಟ್ಟಿವೆ. ಮಳೆ ಬಂದರೆ ಛಾವಣಿ ಸೋರುತ್ತದೆ. ಗ್ರಂಥಾಲಯ ಸುತ್ತಲೂ ಹುಲ್ಲು ಮತ್ತು ಜಾಲಿಕಂಟಿ ಬೆಳೆದಿದೆ. ಈ ಸ್ಥಳದಲ್ಲಿಯೇ ಜನರು ಬಯಲು ಶೌಚ ಮಾಡುವುದು ಕಂಡು ಬರುತ್ತಿದೆ.

ಗ್ರಂಥಾಲಯ ಆವರಣದಲ್ಲಿಯೇ ಶಾಲಾ-ಕಾಲೇಜು ಹಾಗೂ ಅಲ್ಪಸಂಖ್ಯಾತರ ಮತ್ತು ಕಾಲೇಜು ಬಾಲಕಿಯರ ವಸತಿ ನಿಲಯ ಇರುವುದರಿಂದ ಶಾಲಾ-ಕಾಲೇಜು ಮಕ್ಕಳು ಸಾಮಾನ್ಯ ಜ್ಞಾನ, ಇತಿಹಾಸ, ವಿಜ್ಞಾನ ಪುಸ್ತಕಗಳತ್ತ ಕಣ್ಣಾಡಿಸುವುದು ಕಂಡು ಬರುತ್ತದೆ. ಆದರೆ ಶಿಥಿಲಗೊಂಡ ಕಟ್ಟಡದಿಂದ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಲು ಹಿಂದೇಟು ಹಾಕುವಂತೆ ಆಗಿದೆ.

ಗ್ರಂಥಾಲಯ ದುರಸ್ತಿ ಮಾಡಿಕೊಡುವಂತೆ ಗ್ರಂಥಪಾಲಕರು ಮೇಲಧಿಕಾರಿಗಳಿಗೆ ಅನೇಕ ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಳೆ ಕಟ್ಟಡ ತೆಗೆದು ಹೊಸ ಕಟ್ಟಡ ನಿರ್ಮಿಸಿದರೆ ಸುಮಾರು 40×70 ಅಳತೆಯಲ್ಲಿ ವಿಶಾಲ ಗ್ರಂಥಾಲಯ ನಿರ್ಮಿಸುವ ಮೂಲಕ ಓದುಗರ ಸಂಖ್ಯೆ ಇನ್ನಷ್ಟು ಹೆಚ್ಚಿಸಬಹುದು. ಸಾರ್ವಜನಿಕ ಗ್ರಂಥಾಲಯ ಆಧುನಿಕ ಶೈಲಿಯಲ್ಲಿ ನಿರ್ಮಿಸಿ ಅಭಿವೃದ್ಧಿ ಪಡಿಸಲು ಮುಂದಾಗಬೇಕು. ಓದುಗರಿಗೆ ಅನುಕೂಲ ಆಗುವಂತಹ ಕಟ್ಟಡವನ್ನು ಗ್ರಂಥಾಲಯಕ್ಕೆ ಬಿಟ್ಟು ಕೊಡುವ ಮೂಲಕ ಜ್ಞಾನ ಭಂಡಾರದ ರಕ್ಷಣೆಗೆ ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು ಮತ್ತು ಸರ್ಕಾರ ಮುಂದಾಗಬೇಕು ಎಂಬುದು ಓದುಗರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.