ಹೈಕಮಾಂಡ್‌ ಇನ್ನಾದರೂ ಪಾಠ ಕಲಿಯಲಿ: ಯತ್ನಾಳ


Team Udayavani, Nov 2, 2019, 3:06 AM IST

hicommond

ವಿಜಯಪುರ: “ಬಿಜೆಪಿ ಹೈಕಮಾಂಡ್‌ ಸ್ಥಳೀಯ ನಾಯಕರನ್ನು ಇನ್ನು ಮುಂದೆ ವಿಶ್ವಾಸಕ್ಕೆ ತೆಗೆದುಕೊಂಡು ಆದ್ಯತೆ ನೀಡಲಿದೆ ಎಂಬ ವಿಶ್ವಾಸವಿದೆ. ಏಕೆಂದರೆ ಮಹಾರಾಷ್ಟ್ರ, ಹರ್ಯಾಣ ರಾಜ್ಯಗಳ ವಿಧಾಸಭೆ ಚುನಾವಣೆಯಲ್ಲಿನ ಹಿನ್ನಡೆಯಿಂದ ಪಾಠ ಕಲಿಯಬೇಕಿದೆ’ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿ, 30 ಸಾವಿರ ಮತಗಳಿಂದ ಸೋತವರು ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಟಾರ್‌ ಪ್ರಚಾರಕರಾಗಿದ್ದರು. ಅದರಲ್ಲೂ ನಮ್ಮ ಭಾಗದಿಂದ ದೊಡ್ಡ ದೊಡ್ಡವರೆಲ್ಲ ಪ್ರಚಾರಕ್ಕೆ ಹೋಗಿದ್ದರು. ಬಿಜೆಪಿ ಬಹುಮತ ಪಡೆದು ಅನಾಯಾಸವಾಗಿ ಅಧಿಕಾರಕ್ಕೆ ಬರುತ್ತದೆ ಎಂದೆಲ್ಲ ಹೇಳಿಕೊಂಡಿದ್ದರು. ಆದರೆ ಅವರು ಹೋದಲ್ಲೆಲ್ಲ ಬಿಜೆಪಿ ಸೋತು ಹೋಗಿದೆ.

ಹೀಗಾಗಿ ಪಕ್ಷದ ವರಿಷ್ಠರು ಇನ್ನಾದರೂ ಆಯಾ ರಾಜ್ಯಗಳಲ್ಲಿ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಿ, ಗೌರವ ನೀಡಲೇಬೇಕು’ ಎಂದರು. ಬಿಜೆಪಿಗೆ ನೋವಾದರೆ ನಮ್ಮ ತಾಯಿಗೆ ನೋವಾದಂತೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಅನ್ಯಾಯ ಆದಾಗ ನಾನು ಮಾತನಾಡುತ್ತೇನೆ. ಆದರೆ ನಮ್ಮ ಪಕ್ಷದ ಕೆಲವು ನಾಯಕರು ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ಹುನ್ನಾರ ನಡೆಸಿದ್ದಾರೆ. ನನ್ನನ್ನು ಉಚ್ಚಾಟಿಸಿದ ಬಳಿಕವೇ ವಿಜಯಪುರ ನಗರಕ್ಕೆ ಬರುವ ಮಾತನ್ನೂ ಆಡಿದ್ದಾರೆ.

ಆದರೆ ಅವರ ಬಯಕೆ ಈಡೇರುವುದಿಲ್ಲ ಎಂದರು. ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಹಿನ್ನಡೆ ಆಗಲು ಕರ್ನಾಟಕದಿಂದ ಪ್ರಚಾರಕ್ಕೆ ಹೋಗಿದ್ದ ಬಿಜೆಪಿ ಮುಖಂಡರೇ ಕಾರಣ ಎಂದರು. ಕಾಂಗ್ರೆಸ್‌-ಜೆಡಿಎಸ್‌ನ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅನರ್ಹ ಶಾಸಕರು ಬಿಜೆಪಿಗೆ ಬಂದರೆ ಅವರಿಗೆ ಟಿಕೆಟ್‌ ನೀಡಿ, ಗೆಲ್ಲಿಸಬೇಕು. ಅವರಿಗೂ ಅ ಧಿಕಾರ ನೀಡವುದು ನಮ್ಮ ಪಕ್ಷದ ಜವಾಬ್ದಾರಿ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.