![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 2, 2019, 6:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಪೆಗಸಸ್ ಸ್ಪೈ ಸಾಫ್ಟ್ವೇರ್ ಮೂಲಕ ಭಾರತ ಸಹಿತ 20 ದೇಶಗಳ ರಾಷ್ಟ್ರಗಳಲ್ಲಿ ವಾಟ್ಸ್ ಆ್ಯಪ್ ಬಳಕೆದಾರರ ಮೇಲೆ ಕನ್ನ ಹಾಕಿದ್ದ ಬಗ್ಗೆ ಮಾಹಿತಿ ನೀಡದೇ ಇರುವುದಕ್ಕೆ ಕೇಂದ್ರ ಸರಕಾರ ಅಸಂತೋಷಗೊಂಡಿದೆ. ಮಾಹಿತಿಯ ಮೂಲ ಪತ್ತೆ ಮಾಡುವುದರ ಬಗ್ಗೆಯೇ ಸಂಸ್ಥೆಯಿಂದ ಖಚಿತ ಭರವಸೆ ಪಡೆದುಕೊಳ್ಳುವ ಬಗ್ಗೆ ಕೂಡ ಸರಕಾರ ಚಿಂತನೆ ನಡೆಸಿದೆ.
ನಾಗರಿಕರ ಖಾಸಗಿತನ ರಕ್ಷಿಸುವ ನಿಟ್ಟಿನಲ್ಲಿ ವಾಟ್ಸ್ಆ್ಯಪ್ ಜತೆಗೆ ಜೂನ್ನಿಂದ ಚರ್ಚಿಸಲಾಗುತ್ತಿದ್ದರೂ ಸಂಸ್ಥೆ ಮಾಹಿತಿ ನೀಡಿಯೇ ಇರಲಿಲ್ಲ ಎಂದು ಹಿರಿಯ ಅಧಿಕಾರಿ ಶುಕ್ರವಾರ ಹೇಳಿದ್ದಾರೆ. ಕನ್ನ ಹಾಕಲಾಗಿರುವ ಮಾಹಿತಿ ಬಹಿರಂಗದ ಸಮಯವನ್ನೂ ಕೇಂದ್ರ ಪ್ರಶ್ನೆ ಮಾಡಿದೆ. ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಸೂಕ್ತ ಕಾನೂನು ರಚಿಸಲು ಸುಪ್ರೀಂಕೋರ್ಟ್ನಿಂದ 3 ತಿಂಗಳ ಸಮಯ ಕೋರಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಬರಲಿದೆ ಫಿಂಗರ್ಪ್ರಿಂಟ್ ಲಾಕ್
ಆ್ಯಂಡ್ರಾಯ್ಡ ವ್ಯವಸ್ಥೆ ಇರುವ ಮೊಬೈಲ್ಗಳಲ್ಲಿ ವಾಟ್ಸ್ಆ್ಯಪ್ ಅನ್ನು ಬಳಸುವವರು ಫಿಂಗರ್ ಪ್ರಿಂಟ್ ಲಾಕ್ ಅನ್ನು ಅಳವಡಿಸಲಾಗಿದೆ. ಗ್ರಾಹಕರ ಖಾಸಗಿತನ ರಕ್ಷಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಭಾರತದಲ್ಲಿ ಶೀಘ್ರವೇ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ಹೇಳಲಾಗಿದೆ.
ಚಾಟ್ ಮಾಡಿರುವುದು, ಸಂದೇಶ ರವಾನೆಯನ್ನು ಹ್ಯಾಕ್ ಆಗುವುದರಿಂದ ರಕ್ಷಿಸಲು ಈ ವ್ಯವಸ್ಥೆ ನೆರವಾಗಲಿದೆ. ಈ ವ್ಯವಸ್ಥೆಯನ್ನು ಹೊಂದಲು ಗ್ರಾಹಕರು ಮೊದಲು ವಾಟ್ಸ್ ಆ್ಯಪ್ ಅಪ್ಡೇಟ್ ಮಾಡಬೇಕು. ಅನಂತರ ಸೆಟ್ಟಿಂಗ್ಸ್ಗೆ ಹೋಗಿ ಪ್ರೈವೆಸಿನಲ್ಲಿ ಫಿಂಗರ್ ಪ್ರಿಂಟ್ನಲ್ಲಿ ಲಾಕ್ನಲ್ಲಿ ಗ್ರಾಹಕರು ತಮ್ಮ ಬೆರಳನ್ನು ಇರಿಸಿ ತಮಗೆ ಬೇಕಾದ ಸಮಯಕ್ಕೆ ಅನುಗುಣವಾಗಿ ಆ್ಯಪ್ ಅನ್ನು ಅಲ್ಲಾಕ್ ಮಾಡಿಕೊಳ್ಳುವ ವ್ಯವಸ್ಥೆ ಪರಿಚಯಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.