![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 2, 2019, 7:10 PM IST
ಭೋಪಾಲ್/ನವದೆಹಲಿ:ಅತ್ಯಂತ ಸೂಕ್ಷ್ಮ ಎಂದು ಪರಿಗಣಿಸಲಾದ ಅಯೋಧ್ಯೆ ಭೂವಿವಾದ ಪ್ರಕರಣದ ತೀರ್ಪು ಸದ್ಯದಲ್ಲೇ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮುಂದಿನ ಸೂಚನೆಯವರೆಗೆ ರಜೆ ತೆಗೆದುಕೊಳ್ಳದಂತೆ ಆದೇಶಿಸಲಾಗಿದೆ.
ಎಲ್ಲ ಜಿಲ್ಲೆಗಳ ಎಸ್ಪಿಗಳು ಹಾಗೂ ಇತರೆ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಪ್ರಧಾನಕಚೇರಿಯಿಂದ ಈ ಆದೇಶದ ಸುತ್ತೋಲೆ ಕಳುಹಿಸಲಾಗಿದೆ. ಸದ್ಯದಲ್ಲೇ ಮಿಲಾದ್ ಉನ್ ನೆಬಿ, ಗುರುನಾನಕ್ ಜಯಂತಿಯಂಥ ಹಬ್ಬಗಳು ಬರಲಿದ್ದು, ಅದರ ಜೊತೆಗೇ ಸುಪ್ರೀಂ ಕೋರ್ಟ್ ಅಯೋಧ್ಯೆಯ ತೀರ್ಪು ಪ್ರಕಟಿಸಲಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಮತ್ತು ಸಾಮರಸ್ಯ ಕಾಪಾಡಿಕೊಳ್ಳುವ ಸಲುವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖೀಸಲಾಗಿದೆ.
ಪ್ರಸ್ತುತ ಸುಪ್ರೀಂ ಕೋರ್ಟ್ಗೆ ದೀಪಾವಳಿ ನಿಮಿತ್ತ ರಜೆಯಿದ್ದು, ಇದೇ 4ರಿಂದ ಕಾರ್ಯಾರಂಭಗೊಳ್ಳಲಿದೆ. ನಂತರದ 12 ದಿನಗಳೊಳಗೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.
10 ದಿನಗಳಲ್ಲಿ 4 ಪ್ರಮುಖ ತೀರ್ಪುಗಳು
ನ.4ರಿಂದ 10 ದಿನಗಳ ಕೆಲಸದ ದಿನಗಳಲ್ಲಿ ಯಾವಾಗ ಬೇಕಿದ್ದರೂ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠವು ಅಯೋಧ್ಯೆ ಸೇರಿದಂತೆ ನಾಲ್ಕು ಪ್ರಮುಖ ಪ್ರಕರಣಗಳ ತೀರ್ಪು ಪ್ರಕಟಿಸಲಿದ್ದಾರೆ. ದೇಶದ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ದೀರ್ಘಾವಧಿಯ ಪರಿಣಾಮ ಬೀರುವಂಥ ತೀರ್ಪುಗಳು ಇವಾಗಿವೆ. ಅಯೋಧ್ಯೆ ಮಾತ್ರವಲ್ಲದೆ, ಶಬರಿಮಲೆಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಪ್ರವೇಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿ, ರಫೇಲ್ ಡೀಲ್ಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ, ಸಿಜೆಐ ಕಚೇರಿಯನ್ನು ಆರ್ಟಿಐ ವ್ಯಾಪ್ತಿಗೆ ತರಬೇಕೆಂದು ಕೋರಿರುವ ಅರ್ಜಿಗೆ ಸಂಬಂಧಿಸಿದ ತೀರ್ಪು ಕೂಡ 10 ದಿನಗಳೊಳಗೆ ಹೊರಬೀಳಲಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.