![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 3, 2019, 3:00 AM IST
ಬೆಂಗಳೂರು: ಹಾಲಿನ ಉತ್ಪನ್ನಗಳಿಗೆ ಸುಂಕ ಇಲ್ಲದೆ ಆಮದು ಮಾಡಿಕೊಳ್ಳುವ ಆರ್ಸಿಇಪಿ ಒಪ್ಪಂದದ ವಿಚಾರ ದಲ್ಲಿ ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ಕತ್ತಲಲ್ಲಿ ಇಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಆರ್ಸಿಇಪಿ ಒಪ್ಪಂದವನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಒಪ್ಪಂದಕ್ಕೆ ಸಹಿ ಹಾಕಿದರೆ ನಮ್ಮ ರಾಜ್ಯದ ರೈತರ ಸ್ಥಿತಿ ಕಷ್ಟಕರವಾಗುತ್ತದೆ ಎಂದು ವಿಷಾದಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ದಿಂದ ನೆರೆ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಎರಡೂ ಸರ್ಕಾರ ಗಳೂ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿಲ್ಲ.
ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಆರ್ಸಿಇಪಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌಪ್ಯತೆ ಕಾಪಾಡುತ್ತಿದೆ. ನ.4 ರಂದು ಶೃಂಗ ಸಭೆ ನಡೆಯುತ್ತಿದೆ. ಆದರೆ, ಪ್ರತಿಪಕ್ಷಗಳ ಗಮನಕ್ಕೂ ಈ ವಿಚಾರವನ್ನು ತಂದಿಲ್ಲ. ಎಲ್ಲರನ್ನೂ ಕತ್ತಲಲ್ಲಿಟ್ಟು ನಿರ್ಧಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರ ರೈತಾಪಿ ಸಮುದಾಯಕ್ಕೆ ಮಾರಕವಾಗುವ ಈ ಒಪ್ಪಂದಕ್ಕೆ ಸಹಿ ಹಾಕಿದರೆ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.