![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 4, 2019, 1:45 PM IST
ನವದೆಹಲಿ: ಮಹಾರಾಷ್ಟ್ರದಲ್ಲಿ ಸರಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ, ಶಿವಸೇನಾದ ನಡುವೆ ತಿಕ್ಕಾಟ ಮುಂದುವರಿದಿರುವ ನಡುವೆಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಶಾ ಜತೆಗಿನ ಮಾತುಕತೆ ಬಳಿಕ ಸರಕಾರ ರಚನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಫಡ್ನವೀಸ್, ಯಾರು ಏನು ಹೇಳಿದರು? ಹಲವಾರು ಜನರು ಮಾತನಾಡುತ್ತಿದ್ದಾರೆ. ಆದರೆ ನಾನು ಬಿಜೆಪಿ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡೋದಿಲ್ಲ. ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಬಗ್ಗೆ ನನಗೆ ವಿಶ್ವಾಸವಿದೆ ಎಂದರು.
ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಭಾರೀ ನಷ್ಟ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿರುವುದಾಗಿ ಫಡ್ನವೀಸ್ ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದಲ್ಲಿ ಮಳೆಯಿಂದ ತೊಂದರೆಗೊಳಗಾದ ರೈತರಿಗೆ 10ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ನಮ್ಮ ಸರ್ಕಾರ ಸದಾ ರೈತರ ಬೆಂಬಲಕ್ಕೆ ನಿಲ್ಲಲಿದೆ ಎಂದು ಫಡ್ನವೀಸ್ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.