![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Nov 6, 2019, 3:00 AM IST
ಚಿಕ್ಕಬಳ್ಳಾಪುರ: ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆದು ಲಾಭದಾಯಕ ಮಾಡಿಕೊಳ್ಳಬೇಕೆಂದು ಜಿಲ್ಲೆಯ ಕುರುಬೂರು ರೇಷ್ಮೆ ಕೃಷಿ ಶಿಕ್ಷಣ ಮಹಾ ವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ವೆಂಕಟರವಣಪ್ಪ ತಿಳಿಸಿದರು.
ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದಲ್ಲಿ ಕಳೆದ 3 ತಿಂಗಳಿನಿಂದ ಕೃಷಿ ವಿಶ್ವವಿದ್ಯಾನಿಲಯ ಹಾಗೂ ಕುರುಬೂರು ರೇಷ್ಮೆ ಕೃಷಿ ಮಹಾವಿದ್ಯಾಲಯದ ಕಾಲೇಜಿನ ಅಂತಿಮ ವರ್ಷದ ಸುಮಾರು 15 ಬಿ.ಎಸ್ಸಿ., ವಿದ್ಯಾರ್ಥಿಗಳ ತಂಡ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ವೈಜ್ಞಾನಿಕ ಮಾರ್ಗಗಳ ಅರಿವು: ಗ್ರಾಮದಲ್ಲಿ ರೈತರು ಮಾಡುತ್ತಿರುವ ಕೃಷಿ ಭೂಮಿಗಳಿಗೆ ಪ್ರತಿದಿನ ಭೇಟಿ ನೀಡಿ, ಬೆಳೆಗಳಿಗೆ ಆಗುತ್ತಿರುವ ರೋಗಗಳ ತಡೆಗಟ್ಟುವಿಕೆಯ ಮಾರ್ಗ ಹಾಗೂ ಅಧಿಕ ಇಳುವರಿ ಪಡೆಯಲು ಅನುಸರಿಸಬೇಕಾದ ವೈಜ್ಞಾನಿಕ ಮಾರ್ಗಗಳನ್ನು ತಿಳಿಸುವುದರ ಜೊತೆಗೆ ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳೇ ರೈತರೊಂದಿಗೆ ಸೇರಿ ವ್ಯವಸಾಯ ಚಟುವಟಿಕೆಗಳಲ್ಲಿ ಭಾಗವಹಿಸುವುದು. ರೈತರು ಇಂದಿನ ದಿನಮಾನಗಳಲ್ಲಿ ಆಧುನಿಕ ಪದ್ಧತಿ ಅಳವಡಿಸಿಕೊಂಡು ಕೃಷಿ ಚಟುವಟಿಕೆ ನಡೆಸಲು ಮಾರ್ಗದರ್ಶನ ನೀಡುವುದು, ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಮೂಲ ಉದ್ದೇಶ ಎಂದರು.
ವಿದ್ಯಾರ್ಥಿಗಳಿಗೆ ಸ್ವ ಅನುಭವ: ಭವಿಷ್ಯದಲ್ಲಿ ದೇಶದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮಗಳು ಹೆಚ್ಚು ಸಹಕಾರಿ ಆಗುತ್ತವೆ. ವಿದ್ಯಾರ್ಥಿಗಳೇ ಎಲ್ಲಾ ರೈತರಿಗೆ ಆಧುನಿಕ ಕೃಷಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಹವಾಮಾನ ವೈಪರೀತ್ಯ ಇಂದಿನ ದಿನಗಳಲ್ಲಿ ಸಾಮಾಜಿಕ ಅರಣ್ಯವನ್ನು ಉತ್ತೇಜಿಸಲು ಗ್ರಾಮಸ್ಥರಿಗೆ ಸಸಿಗಳನ್ನು ನೀಡಿ ತಮ್ಮ ತೋಟ, ಹೊಲ, ಗದ್ದೆ ಬದಿಗಳಲ್ಲಿ ನೆಟ್ಟು ಪೋಷಿಸುವಂತೆ ತಿಳಿಸಿಕೊಡುವುದು,
ರೈತರಿಗೆ ಹೊಸ ತಳಿಗಳು ಮತ್ತು ಸಮಗ್ರವಾಗಿ ರೋಗಕೀಟಗಳ ನಿರ್ವಾಹಣೆಯ ಬಗ್ಗೆ ತಿಳಿಸಲು ಬೆಳೆ ಪ್ರಾತ್ಯಕ್ಷಿಕೆಯಲ್ಲಿ ರೈತರಿಗೆ ಮಾದರಿಗಳನ್ನು ತೋರಿಸಿ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಪ್ರಾಧ್ಯಾಪಕರಾದ ಡಾ. ಆರ್.ಗೋಲ್ಯಾನಾಯ್ಕ, ರಾಮಕೃಷ್ಣನಾಯಕ, ಸಹಾಯಕ ಪ್ರಾಧ್ಯಾಪಕರಾದ ಶ್ರೀನಿವಾಸರೆಡ್ಡಿ, ದೇವರಾಜ್ ಹಾಗೂ ಚಿಕ್ಕಪೈಲಗುರ್ಕಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಯೋಜನೆ ಲಭ್ಯತೆ ಬಗ್ಗೆ ಅರಿವು: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ರೈತರಲ್ಲಿ ಅರಿವು ಮೂಡಿಸಲು ಪ್ರತಿ ವಾರಕ್ಕೊಮ್ಮೆ ಗ್ರಾಮದ ಸಮುದಾಯ ಭವನದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸುವುದು, ರೈತರಿಗೆ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಪರಿಣಾಮ ಮತ್ತು ಕ್ಷೇತ್ರೊತ್ಸವ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಡೆಸಿಕೊಡುವುದು. ಕೃಷಿ ಪದ್ದತಿಗಳ ಬಗ್ಗೆ ಮನವರಿಕೆ, ಕೃಷಿ ಯಂತ್ರೋಪಕರಣಗಳು, ಕೃಷಿ ಪರಿಕರಗಳು ಮತ್ತು ಸರ್ಕಾರದ ವಿವಿಧ 30 ಕ್ಕೂ ಹೆಚ್ಚು ಯೋಜನೆಯ ಲಭ್ಯತೆ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.