ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ಮೀನ ಮೇಷ


Team Udayavani, Nov 6, 2019, 3:00 AM IST

raste-abivruddi

ಅರಕಲಗೂಡು: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಸಾಲಗೇರಿ ರಸ್ತೆಯೂ ವಾಹನಗಳ ದಟ್ಟಣೆ ಅಧಿಕವಾಗಿದ್ದು ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದೆ. ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ಮೀನ ಮೇಷ, ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ರಸ್ತೆ ಅಭಿವೃದ್ಧಿಗೆ 2.58 ಕೋಟಿ ರೂ. ಬಿಡುಗಡೆ: ರಸ್ತೆ 12ರಿಂದ 15 ಅಡಿ ವಿಸ್ತೀರ್ಣ ಹೊಂದಿದ್ದು, ವಾಹನಗಳ ಸಂಚಾರಕ್ಕೆ ವಾಸದ ಮನೆಗಳೇ ಅಡ್ಡಿಯಾಗಿವೆ. ಇದನ್ನು ಮನಗಂಡ ಮಾಜಿ ಸಚಿವ ಎ.ಮಂಜು ರಸ್ತೆಯ ಅಭಿವೃದ್ಧಿಗೆ ಲೋಕಪಯೋಗಿ ಇಲಾಖೆಯಿಂದ 900 ಮೀಟರ್‌ ವಿಸ್ತೀರ್ಣದ ರಸ್ತೆಗೆ 2.58 ಕೋಟಿ ಬಿಡುಗಡೆ ಮಾಡಿಸಿದರೂ, ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ರಸ್ತೆ ವಿಸ್ತಣೆಗೆ ಮೂಡದ ಒಮ್ಮತ: ಎ.ಮಂಜು ಅವರ ಆಡಳಿತ ಮುಕ್ತಾಯದ ನಂತರ ಹೊಸದಾಗಿ ಆಯ್ಕೆಯಾದ ಶಾಸಕ ಎ.ಟಿ. ರಾಮಸ್ವಾಮಿ ಅವರು ರಸ್ತೆ ಅಭಿವೃದ್ಧಿಗಾಗಿ ನಿವಾಸಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದರೂ ರಸ್ತೆಯ ವಿಸ್ತೀರ್ಣದ ಬಗ್ಗೆ ಒಮ್ಮತಕ್ಕೆ ಬರದ ಕಾರಣ ಸರ್ಕಾರದ ಜಾಗದ ಗಡಿ ಗುರುತಿಸಿ ಸ್ಥಳ ತೆರವುಗೊಳಿಸಲು ಆದೇಶಿಸಿದರು. ಸರ್ಕಾರದ ಜಾಗವನ್ನು ಒತ್ತುವರಿ ಮಾಡಿರುವ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯ ಮೂಲಕ ಮೂರು ನಾಲ್ಕು ನೋಟೀಸ್‌ಗಳನ್ನು ನೀಡಿದರೂ ಈವರೆಗೂ ರಸ್ತೆ ಒತ್ತುವರಿ ತೆರವುಗೊಳಿಸಿಲ್ಲ.

ನಿವಾಸಿಗಳು, ಅಧಿಕಾರಿಗಳ ನಡುವೆ ಜಟಾಪಟಿ: ಸಾಲಗೇರಿ ರಸ್ತೆ ಅಭಿವೃದ್ಧಿಗೆಂದು ಮಾಜಿ ಸಚಿವ ಎ.ಮಂಜು ರವರು ಹಣ ಬಿಡುಗಡೆ ಮಾಡಿಸಿ ಕಾಮಗಾರಿ ಮಾಡಲು ಮುಂದಾದರು. ಆದರೆ ಸಾಲಗೇರಿ ರಸ್ತೆಯ ಎರಡೂ ಬದಿಯಲ್ಲಿರುವ ನಿವಾಸಿಗಳು ತಮ್ಮ ಮನೆಯನ್ನು ತೆರವುಗೊಳಿಸಲು ನಿರಾಕರಿಸಿದ ಕಾರಣ ಅವರುಗಳೊಂದಿಗೆ ಹಲವಾರು ಸಭೆಗಳನ್ನ ನಡೆಸಿದರೂ ಪ್ರಯೋಜನವಾಗಿಲ್ಲ.

ಸಾಲಗೇರಿ ರಸ್ತೆಯ ನಿವಾಸಿಗಳಿಗೆ ನ್ಯಾಯಾಲಯದಿಂದ ನೋಟೀಸ್‌ ನೀಡಲು ಪಟ್ಟಣ ಪಂಚಾಯಿತಿ ಲಕ್ಷಾಂತರ ಹಣವನ್ನ ಕಳೆದರೂ ಕಾಮಗಾರಿ ಮುಂದಾಗದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪಟ್ಟಣ ಪಂಚಾಯಿತಿ ಲೋಕೋಪಯೋಗಿ ಇಲಾಖೆಗಳ ನಡುವೆ ಸಾಲಗೇರಿ ರಸ್ತೆಯ ನಿವಾಸಿಗಳ ಜಟಾಪಟಿ ಇನ್ನೂ ನಿಂತಿಲ್ಲ. ಇವೆಲ್ಲವನ್ನು ಸರಿಪಡಿಸುವುದು ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ರಸ್ತೆಯ ಅಭಿವೃದ್ಧಿಯ ವಿಷಯದಲ್ಲಿ ಶಾಸಕರು ಲೋಕಪಯೋಗಿ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆಯ ಅಭಿವೃದ್ಧಿಗೆ ಕಾನೂನು ಪ್ರಕಾರ ಮುಂದಾಗುವಂತೆ ತಿಳಿಸುವ ಮೂಲಕ ನಿವಾಸಿಗಳಿಗೆ ತೊಂದರೆಯಾಗದಂತೆ ರಸ್ತೆಯ ವಿಸ್ತೀರ್ಣವನ್ನ 10.5 ಮೀ.ರಸ್ತೆಯನ್ನ ಅಗಲೀಕರಣ ಮಾಡುವಂತೆ ಈಗಾಗಲೇ ತಿಳಿಸಿದರೂ ಶಾಸಕರ ಮಾತಿಗೂ ಬೆಲೆ ಇಲ್ಲದಂತಾಗಿದೆ.

ರಸ್ತೆ ಅಭಿವೃದ್ಧಿಗೆ ಟೆಂಡರ್‌: ಸಾಲಗೇರಿ ರಸ್ತೆಯ ಅಭಿವೃದ್ಧಿ ಕುರಿತು ಮಾಹಿತಿ ನೀಡಿರುವ ಲೋಕಪಯೋಗಿ ಇಲಾಖೆ ಅಭಿಯಂತರ ರಾಜಶೇಖರ್‌, ರಸ್ತೆ ಅಭಿವೃದ್ಧಿಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರನ್ನು ನಿಗದಿಗೊಳಿಸಲಾಗಿದೆ. ಈ ರಸ್ತೆಯ ಅಭಿವೃದ್ಧಿಗೆ 2.58 ಕೋಟಿ ಹಣ ಬಿಡುಗಡೆಯಾಗಿದೆ. ಅಲ್ಲಿಯ ನಿವಾಸಿಗಳು ಮನೆಗಳನ್ನು ತೆರವುಗೊಳಿಸದ ಕಾರಣ ರಸ್ತೆ ಅಭಿವೃದ್ಧಿ ಕಾರ್ಯವಿಳಂಬವಾಗುತ್ತಿದೆ. ಪಟ್ಟಣ ಪಂಚಾಯಿತಿಯವರು ಎಂದು ಒತ್ತುವರಿ ತೆರವುಗೊಳಿಸುವರೋ ಅಂದಿನಿಂದ 6 ತಿಂಗಳೊಳಗೆ ಕಾಮಗಾರಿ ಮುಗಿಸುವುದಾಗಿ ತಿಳಿಸಿದರು.

ಸಾಲಗೇರಿ ರಸ್ತೆ ಬದಿಯ ನಿವಾಸಿಗಳಿಗೆ ಮನೆ ತೆರವುಗೊಳಿಸುವಂತೆ ನೋಟೀಸ್‌ ನೀಡಲಾಗಿದೆ. ಅಲ್ಲಿಯ ನಿವಾಸಿಗಳು ಮಳೆಗಾಲ ಇರುವ ಕಾರಣ ಮನೆಗಳನ್ನ ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ ಅದ್ದರಿಂದ ಮಳೆಗಾಲ ಕಳೆಯುವವರೆಗೆ ಕಾಲವಕಾಶ ಕೇಳಿದ್ದಾರೆ. ಮಳೆ ಕಡಿಮೆಯಾದ ನಂತರ ನಿವಾಸಿಗಳ ಮನೆ ತೆರವಿಗೆ ಮುಂದಾಗುತ್ತೇವೆ.
-ಸುರೇಶ್‌ಬಾಬು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.