ಹತ್ತೂರಿನ ಮಕ್ಕಳಿಗೆ ಅಕ್ಷರ ಕಲಿಸಿದ ಜ್ಞಾನ ದೇಗುಲಕ್ಕೆ 130ರ ಸಂಭ್ರಮ

ತಲ್ಲೂರು ಸರಕಾರಿ ಹಿ.ಪ್ರಾ. ಶಾಲೆ

Team Udayavani, Nov 8, 2019, 5:00 AM IST

0511KDPP7A-2

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಕುಂದಾಪುರ: ತಲ್ಲೂರಿನ ಸರಕಾರಿ ಮಾದರಿ ಹಿ.ಪ್ರಾ. ಶಾಲೆಗೆ 130 ವರ್ಷಗಳ ಇತಿಹಾಸವಿದೆ. 1890ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಈವರೆಗೆ ಅನೇಕ ಮಂದಿ ಮಹಾನ್‌ ಸಾಧಕರು ಜ್ಞಾನಾರ್ಜನೆ ಮಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.

ತಲ್ಲೂರು, ಹೆಮ್ಮಾಡಿ, ಹೊಸ್ಕಳಿ, ಸಂತೋಷ್‌ ನಗರ, ದೇವಲ್ಕುಂದ, ಕಟ್‌ಬೆಲೂ¤ರು, ಕರ್ಕಿ, ಕೂಡ್ಲು – ಕನ್ಯಾನ, ರಾಜಾಡಿ, ಸಬ್ಲಾಡಿ ಹೀಗೆ ಹತ್ತಾರು ಊರುಗಳಿಗೆ ಆಗ ಸ್ವಾತಂತ್ರತ್ರ್ಯ ಪೂರ್ವದಲ್ಲಿ ಇದ್ದದು ಇದೊಂದೇ ಶಿಕ್ಷಣ ಸಂಸ್ಥೆ. ಈಗ ಹೆಮ್ಮಾಡಿ, ಕೂಡ್ಲು – ಕನ್ಯಾನ, ದೇವಲ್ಕುಂದ. ಕಟ್‌ಬೆಲೂ¤ರು, ಸಬ್ಲಾಡಿ ಸಹಿತ ಹಲವೆಡೆಗಳಲ್ಲಿ ಶಾಲೆಗಳಾಗಿವೆ.

ಓದಿದ ಮಹನೀಯರು
ಇಂಗ್ಲೆಂಡ್‌ನ‌ಲ್ಲಿ ವೈದ್ಯರಾಗಿರುವ ಡಾ| ಮೈಕಲ್‌ ಮೆನೇಜಸ್‌, ಊರಲ್ಲಿಯೇ ವೈದ್ಯರಾಗಿರುವ ಡಾ| ರಂಜಿತ್‌ ಕುಮಾರ್‌ ಹೆಗ್ಡೆ, ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ ಶೆಟ್ಟಿ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡ ತಲ್ಲೂರು ಶಿವರಾಮ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಟಿ.ಕೆ. ಕೋಟ್ಯಾನ್‌, ಹೀಗೆ ಅನೇಕ ಮಂದಿ ಇಲ್ಲಿ ಕಲಿತವರು ಪ್ರಸಿದ್ಧರಾಗಿದ್ದಾರೆ.

ಈ ಶಾಲೆ ಶತಮಾನೋತ್ಸವ ಪೂರೈಸಿರುವ ಬಗ್ಗೆ ಹೆಮ್ಮೆಯಿದೆ. ಊರಿನ ದಾನಿಗಳು, ಹಳೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಗ್ರಾ.ಪಂ. ಸಹಕಾರದಿಂದ ಗುಣಮಟ್ಟದ ಶಿಕ್ಷಣದಲ್ಲಿಯೂ ಮುಂಚೂಣಿಯಲ್ಲಿದೆ. 2010ರಲ್ಲಿ 140 ಇದ್ದ ಮಕ್ಕಳ ಸಂಖ್ಯೆ ಈಗ 210 ಕ್ಕೆ ತಲುಪಿದೆ. ಹಾಗಾಗಿ ಶಾಲೆಗೆ ಹೆಚ್ಚುವರಿ ಕಟ್ಟಡದ ಅಗತ್ಯವಿದೆ. ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ 130ನೇ ವರ್ಷಾಚರಣೆ ಆಚರಿಸುವ ಯೋಜನೆಯಿದೆ.
-ಶಂಕರ್‌, ಮುಖ್ಯೋಪಾಧ್ಯಾಯರು

ಶತಮಾನೋತ್ಸವ ಸಮಿತಿ ಆಚರಣೆ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದೆ. ಈಗ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷನಾಗಿದ್ದೇನೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಶಾಲೆಯಿದು. ಈಗಲೂ ಅದೇ ಗುಣ ಮಟ್ಟವನ್ನು ಕಾಪಾಡಿಕೊಂಡಿದೆ. ಈ ಶಾಲೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ಹೆಮ್ಮೆ ಅನ್ನಿಸುತ್ತದೆ.
-ಟಿ.ಬಿ. ಶೆಟ್ಟಿ, ಹಿರಿಯ ನ್ಯಾಯವಾದಿ
(ಹಳೆ ವಿದ್ಯಾರ್ಥಿ)

1890ರಲ್ಲಿ ಆರಂಭ
1890ರಲ್ಲಿ ಆರಂಭವಾದ ಈ ಶಾಲೆ ಈಗ 129 ವಸಂತಗಳನ್ನು ಪೂರೈಸಿ, 130ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಶಾಂತಮೂರ್ತಿ ಅವರು ಇಲ್ಲಿನ ಮೊದಲ ಮುಖ್ಯೋಪಾಧ್ಯಾಯರು. ಆಗ ಉಪ್ಪಿನಕುದ್ರುವಿನಲ್ಲಿ ಹೊರತುಪಡಿಸಿದರೆ, ಆಸುಪಾಸಿನಲ್ಲಿ ಇದ್ದುದು ಇದೊಂದೇ ಶಾಲೆ. ಹಾಗಾಗಿ ದೂರ-ದೂರದ ಊರುಗಳಿಂದ ಇಲ್ಲಿಗೆ ವಿದ್ಯಾರ್ಜನೆಗೆ ಬರುತ್ತಿದ್ದರು.

210 ವಿದ್ಯಾರ್ಥಿಗಳು
ಸರಕಾರಿ ಶಾಲೆಗೆ ವಿದ್ಯಾರ್ಥಿಗಳ ಕೊರತೆ ಹೆಚ್ಚಿನ ಕಡೆಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದ್ದರೂ ಈ ಶಾಲೆಗೆ ಮಾತ್ರ ಅಂತಹ ಯಾವುದೇ ಸಮಸ್ಯೆ ಎದುರಾಗಿಲ್ಲ. ಪ್ರಸ್ತುತ ಇಲ್ಲಿ 210 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಬಾರಿ 1ನೇ ತರಗತಿಗೆ ದಾಖಲಾದ ಮಕ್ಕಳ ಸಂಖ್ಯೆ 23. ಒಟ್ಟಾರೆ ಈ ವರ್ಷ 35 ಮಕ್ಕಳ ಹೊಸದಾಗಿ ದಾಖಲಾತಿಯಾಗಿದೆ. ಮುಖ್ಯ ಶಿಕ್ಷಕರು ಸೇರಿ, ಒಟ್ಟು 7 ಮಂದಿ ಬೋಧಕರಿದ್ದಾರೆ.
ಕಳೆದ 5 ವರ್ಷಗಳಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕೋಲಾಟದಲ್ಲಿ ಪ್ರತಿ ಬಾರಿ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ಈ ಶಾಲೆಯ ವಿದ್ಯಾರ್ಥಿಗಳದ್ದು.

-  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.