![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 10, 2019, 4:56 PM IST
ಮುಂಡರಗಿ: ತಾಲೂಕಿನ ಮೇವುಂಡಿ ಗ್ರಾಮದ ಗ್ರಂಥಾಲಯದ ಕಾಂಕ್ರೀಟ್ ಮೇಲ್ಛಾವಣಿ ಉದುರುತ್ತಿದ್ದು, ಓದುಗರು ಭಯದಲ್ಲೇ ಕುಳಿತು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಂಥಾಲಯ ಕಟ್ಟಡ ಇಪ್ಪತ್ತು ವರ್ಷಗಳಷ್ಟು ಪುರಾತನವಾಗಿದ್ದು, ಎರಡು ವಿಭಾಗದಲ್ಲಿದೆ. ಒಂದು ವಿಭಾಗದ ಕಟ್ಟಡ ಮೇಲ್ಛಾವಣಿಯ ಕಾಂಕ್ರೀಟ್ ದಿನಂಪ್ರತಿ ಉದುರುತ್ತಿದ್ದು, ಓದುಗರ ತಲೆಯ ಮೇಲೆಯೇ ಕಾಂಕ್ರೀಟ್ನ ಕಲ್ಲು, ಉಸುಕು ಬೀಳುತ್ತಿರುತ್ತವೆ. ಅಲ್ಲದೇ ಇನ್ನೊಂದು ವಿಭಾಗದ ಮೇಲ್ಛಾವಣಿ ಉತ್ತಮವಾಗಿದ್ದರೂ ಉಬ್ಬಿದೆ.
ಕಳೆದ ಇಪ್ಪತ್ತು ವರ್ಷಗಳಿಂದ ಗ್ರಾಪಂ ಕಟ್ಟಡದಲ್ಲಿ ಸಾರ್ವಜನಿಕ ಗ್ರಂಥಾಲಯವು ಸಾಗಿ ಬಂದಿದೆ. ಗ್ರಾಪಂ ಕಟ್ಟಡದ ಮೇಲ್ಛಾವಣಿ ಶಿಥಿಲಾವಸ್ಥೆ ತಲುಪಿದೆ. ಮೇಲ್ಛಾವಣಿ ಉದುರಿ ಟೇಬಲ್ ಮತ್ತು ಕುರ್ಚಿಗಳ ಮೇಲೆ ಕಾಂಕ್ರೀಟ್ನ ಗಟ್ಟಿಯಾದ ಉಂಡೆಗಳು ಬೀಳುತ್ತಿವೆ. ಗ್ರಂಥಾಲಯದಲ್ಲಿ 4,230 ಗ್ರಂಥಗಳಿವೆ. ಗ್ರಂಥಾಲಯಕ್ಕೆ 254 ಜನ ಕಾಯಂ ಸದಸ್ಯರಿದ್ದಾರೆ. ಗ್ರಂಥಾಲಯದಲ್ಲಿ ಎರಡೇ ಎರಡು ದಿನಪತ್ರಿಕೆಗಳು ಬರುತ್ತಿವೆ. ಆದರೆ ಗ್ರಂಥಾಲಯದ ಮೇಲ್ವಿಚಾರಕರು ಆಸಕ್ತಿ ತಾಳಿ ಕಳೆದ ಮೂರು ವರ್ಷಗಳಿಂದ ಸ್ವಂತ ಹಣದಿಂದಲೇ ಇನ್ನೆರಡು ಪತ್ರಿಕೆ ತರಿಸುತ್ತಿದ್ದಾರೆ. ಇಂತಹ ಗ್ರಾಮೀಣ ಪ್ರದೇಶದ ಗ್ರಂಥಾಲಯ ಕಟ್ಟಡ ಬೀಳುವ ಭೀತಿಯಿದ್ದು, ಶೀಘ್ರ ದುರಸ್ತಿ ಮಾಡಬೇಕಿದೆ.
ಗ್ರಂಥಾಲಯ ಮೇಲ್ಛಾವಣಿ ಉದುರುತ್ತಿರುವ ಬಗ್ಗೆ ಗ್ರಂಥಾಲಯ ಇಲಾಖೆಗೂ, ಗ್ರಾಪಂ ಗಮನಕ್ಕೂ ತರಲಾಗಿದೆ. ಗ್ರಾಪಂನವರು ಮೇಲ್ಛಾವಣಿ ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. –ಹಾಲಪ್ಪ ಕೋರ್ಲಹಳ್ಳಿ,ಗ್ರಂಥಾಲಯ ಮೇಲ್ವಿಚಾರಕ
ದುರಸ್ತಿಗಾಗಿ 14ನೇ ಹಣಕಾಸು ಯೋಜನೆಯಲ್ಲಿ 2 ಲಕ್ಷ ರೂ. ಕ್ರಿಯಾಯೋಜನೆಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಇನ್ನೂ ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೇಗನೆ ಮೇಲ್ಛಾವಣಿ ದುರಸ್ತಿ ಮಾಡಲಾಗುವುದು. –ಸಂತೋಷ್ ಹೂಗಾರ, ಪಿಡಿಒ
-ಹು.ಬಾ. ವಡ್ಡಟ್ಟಿ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.