ಪ್ರಸಾರಂಗದಿಂದ ಪಿಎಚ್‌ಡಿ ಪ್ರಬಂಧಗಳ ಪ್ರಕಟಣೆ


Team Udayavani, Nov 14, 2019, 3:00 AM IST

prasarangadinda

ಮೈಸೂರು: ಪ್ರಸಾರಂಗ ವತಿಯಿಂದ ಮೈಸೂರು ವಿವಿ ಸಂಶೋಧಕರು ಮಂಡಿಸಿದ ಪಿಎಚ್‌ಡಿ ಪ್ರಬಂಧಗಳನ್ನು ಪುಸ್ತಕವಾಗಿ ಪ್ರಕಟಿಸುವ ಚಿಂತನೆ ನಡೆಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ನಿರ್ದೇಶಕ ಪ್ರೊ.ಎಂ.ಜಿ. ಮಂಜುನಾಥ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ವತಿಯಿಂದ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ 40 ಪುಸ್ತಕಗಳ ಲೋಕಾರ್ಪಣೆ ಹಾಗೂ ಪ್ರಚಾರೋಪನ್ಯಾಸ ಮಾಲೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಮೈಸೂರು ವಿವಿಯ ಸಂಶೋಧಕರು ಮಂಡಿಸಿದ ನೂರು ಪಿಎಚ್‌ಡಿ ಪ್ರಬಂಧಗಳನ್ನು ಪ್ರಸಾರಂಗ ಪುಸ್ತಕವನ್ನಾಗಿ ಪ್ರಕಟಿಸಿದೆ. ಇದರಿಂದ ಇತರೆ ವಿದ್ಯಾರ್ಥಿಗಳಿಗು ವಿಷಯವನ್ನು ತಲುಪಿಸಿದಂತಾಗುತ್ತದೆ. ಜೊತೆಗೆ ಸಂಗ್ರಹಿಸಿ ಇಡಲು ಸಹಕಾರಿ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಪ್ರಸಾರಂಗ ವತಿಯಿಂದ ಯೋಗ್ಯ ಪ್ರಬಂಧಗಳನ್ನು ಪುಸ್ತಕಗಳ ರೂಪದಲ್ಲಿ ಹೊರತರುವ ಚಿಂತನೆ ನಡೆಸಲಾಗಿದೆ. ಇದಕ್ಕೆ ಕುಲಪತಿಗಳು ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

ಪ್ರೋತ್ಸಾಹ: ಕಳೆದ ನಾಲ್ಕು ತಿಂಗಳಲ್ಲಿ ಪ್ರಸಾರಂಗದಿಂದ 20 ಪುಸ್ತಕಗಳನ್ನು ಪ್ರಕಟ ಮಾಡಲಾಗಿದೆ. ಇದುವರೆಗೆ 3 ಸಾವಿರ ಪುಸ್ತಕಗಳನ್ನು ಪ್ರಕಟಿಸಿ, ಹೊಸ ಬರಹಗಾರರಿಗೆ ಹಾಗೂ ವಿದ್ವಾಂಸರಿಗೆ ಪ್ರೋತ್ಸಹ ನೀಡಲಾಗಿದೆ. ಅಲ್ಲದೇ ಪ್ರಬುದ್ಧ ಕರ್ನಾಟಕ ಎಂಬ ಪುಸ್ತಕದ ವಿಶೇಷ ಸಂಚಿಕೆಯನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ಟಿ.ವಿ. ವೆಂಕಟಾಚಲಶಾಸ್ತ್ರಿ ಮಾತನಾಡಿ, ಮೈಸೂರು ವಿವಿ ಹಾಗೂ ಪ್ರಸಾರಂಗಕ್ಕೆ ಪ್ರೊ.ಎನ್‌.ಎಸ್‌. ಸುಬ್ಬರಾಯರು, ಬಿಎಂಶ್ರೀ, ಜಿ. ಹನುಮಂತರಾಯರು ಹಾಗೂ ಕುವೆಂಪು ಅವರ ಕೊಡುಗೆ ಅಪಾರ. ಇವರು ಪ್ರಸಾರಂಗಕ್ಕೆ ಅಡಿಪಾಯ ಹಾಕುವಲ್ಲಿ ಶ್ರಮಿಸಿದ್ದಾರೆ. ಇವರೆಲ್ಲ ಹಾಕಿಕೊಟ್ಟ ದಾರಿಯಲ್ಲಿ ಪ್ರಸಾರಂಗದ ಕೆಲಸಗಳು ಸಾಗಬೇಕು. ಜೊತೆಗೆ ಜಿ. ಹನುಮಂತರಾಯರ ಸಮಗ್ರ ಸಾಹಿತ್ಯ ಲೇಖನ ಸಂಪುಟವನ್ನು ಪ್ರಕಟಿಸುವ ಕೆಲಸವನ್ನು ಪ್ರಸಾರಂಗ ಮಾಡಬೇಕು ಎಂದು ಹೇಳಿದರು.

ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್‌.ಎಂ. ತಳವಾರ ಮಾತನಾಡಿ, ಮೈಸೂರು ವಿಶ್ವವಿದ್ಯಾಲಯ ಹಾಗೂ ಪ್ರಸಾರಂಗಕ್ಕೆ ಸುದೀರ್ಘ‌ ಇತಿಹಾಸವಿದೆ. ಪ್ರಸಾರಂಗವು ಸಮಗ್ರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಮರು ಮುದ್ರಣ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ ಕುಮಾರ್‌, ಪ್ರಸಾರಂಗದ ಸಹಾಯಕ ನಿರ್ದೇಶಕ ಡಾ.ಬಿ.ಎಸ್‌. ಅನಿಲ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪುಸ್ತಕ ಮಾರಾಟಕ್ಕೆ ಶೇ.50 ರಿಯಾಯಿತಿ: ಪ್ರಸಾರಂಗ ಲಾಭದ ಉದ್ದೇಶವನ್ನು ಹೊಂದಿಲ್ಲ. ಬದಲಿಗೆ ಜ್ಞಾನ ಪ್ರಸರಣೆ ಇದರ ಪ್ರಮುಖ ಉದ್ದೇಶವಾಗಿದೆ. ಶೇ.50ರಷ್ಟು ರಿಯಾಯಿತಿ ದರದಲ್ಲಿ ವರ್ಷಕ್ಕೆ 50 ಲಕ್ಷ ರೂ. ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದೆ. ಜೊತೆಗೆ ಐಎಸ್‌ಎಸ್‌ಎನ್‌ ಹಾಗೂ ಐಎಸ್‌ಬಿಎನ್‌ ಮಾನ್ಯತೆಗಳು ಪ್ರಸಾರಂಗಕ್ಕೆ ಶೀಘ್ರದಲ್ಲಿಯೇ ಸಿಗಲಿದೆ. ಕಳೆದ ವರ್ಷ ಕುಲಪತಿಗಳು ಇಲ್ಲದ ಕಾರಣ ಪ್ರಸಾರಂಗಕ್ಕೆ ಅನುದಾನ ಬಂದಿರಲಿಲ್ಲ. ಈ ವರ್ಷ ಅನುದಾನ ನೀಡಿದರೆ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಲು ಸಾಧ್ಯವಾಗಲಿದೆ ಎಂದು ಪ್ರಸಾರಂಗ ನಿರ್ದೇಶಕ ಪ್ರೊ.ಎಂ.ಜಿ. ಮಂಜುನಾಥ ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.