ಬಗೆಹರಿಯದ ಗ್ರಂಥಾಲಯದ ಜಾಗದ ಸಮಸ್ಯೆ


Team Udayavani, Nov 14, 2019, 3:00 AM IST

bagehariyada

ಸಕಲೇಶಪುರ: ತಾಲೂಕು ಗ್ರಂಥಾಲಯ ಕಟ್ಟಲು ಬಂದಿರುವ ಅನುದಾನ ಜಾಗದ ಸಮಸ್ಯೆಯಿಂದಾಗಿ ಅನುದಾನ ಹಿಂತಿರುಗಿ ಹೋಗುವ ಸಾಧ್ಯತೆ ಇದ್ದು ಇದರಿಂದ ಸುಂದರ ಗ್ರಂಥಾಲಯ ಕಟ್ಟಡ ತಾಲೂಕಿಗೆ ಮತ್ತೊಮ್ಮೆ ಮರೀಚಿಕೆಯಾಗುವ ಸಾಧ್ಯತೆಯಿದೆ.

ಪಟ್ಟಣದ ಇಂದಿರಾ ಕ್ಯಾಂಟೀನ್‌ ಪಕ್ಕ ಸುಮಾರು 2 ಗುಂಟೆಯಷ್ಟು ಗ್ರಂಥಾಲಯಕ್ಕೆ ಮೀಸಲಾದ ಜಾಗವನ್ನು ಎತ್ತಿನಹೊಳೆ ಯೋಜನೆ ಕಚೇರಿಗೆ ನೀಡಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಕಚೇರಿ ಪಕ್ಕದಲ್ಲೇ ಇದ್ದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರುವ ಹೆಂಚಿನ ಮನೆಯೊಂದನ್ನು ಗ್ರಂಥಾಲಯಕ್ಕಾಗಿ ಕೆಡವಿ ಆ ಜಾಗದಲ್ಲಿ ಗ್ರಂಥಾಲಯ ಕಟ್ಟಡ ಕಟ್ಟುವ ತೀರ್ಮಾನಕ್ಕೆ ಬರಲಾಗಿತ್ತು.

ಈ ಹಿನ್ನೆಲೆಯಲ್ಲಿ ಗ್ರಂಥಾಲಯದ ಮುಖ್ಯ ಪಾಲಕ ಚಂದ್ರಕುಮಾರ್‌ ಶಾಸಕ ಎಚ್‌.ಕೆ. ಕುಮಾರಸ್ವಾಮಿರವರ ಜೊತೆ ನಿರಂತರ ಶ್ರಮ ಹಾಕಿ ಸುಮಾರು 30 ಲಕ್ಷ ರೂ. ಅನುದಾನವನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಬಿಡುಗಡೆ ಮಾಡಿಸಿದ್ದರು.

ಇದೀಗ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲು 30 ಲಕ್ಷ ರೂ. ಅನುದಾನ ಸಿದ್ಧವಿದೆ. ಆದರೆ ಲೋಕೋಪಯೋಗಿ ಇಲಾಖೆಯವರು ಇದೀಗ ನಾವು ಸಂಪೂರ್ಣ ಜಾಗ ಬಿಟ್ಟುಕೊಡುವುದಿಲ್ಲ, ಅರ್ಧ ಜಾಗ ಮಾತ್ರ ಬಿಟ್ಟು ಕೊಡುತ್ತೇವೆ ಎನ್ನುತ್ತಿದ್ದು ಇದರಿಂದ ಬಂದಿರುವ ಹಣ ಹಿಂತಿರುಗಿ ಹೋಗುವ ಸಾಧ್ಯತೆಗಳಿದೆ.

ಅನುದಾನ ವಾಪಸ್‌: ಈ ಹಿಂದೆಯೂ ಒಮ್ಮೆ ಇದೇ ರೀತಿ ಗೊಂದಲ ಉಂಟಾಗಿ ಹಣ ಹಿಂತಿರುಗಿ ಹೋಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಇದೇ ರೀತಿ ಗೊಂದಲ ಮುಂದುವರಿದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯ ನಿರ್ಮಾಣಕ್ಕೆ ಯಾವುದೇ ಅನುದಾನ ಬರುವುದಿಲ್ಲ.

ಶಿಥಿಲ ಕಟ್ಟಡದಲ್ಲಿ ಗ್ರಂಥಾಲಯ: ಈಗಿರುವ ಗ್ರಂಥಾಲಯ ಕಟ್ಟಡವು ಸ್ಕೌಟ್‌ ಮತ್ತು ಗೈಡ್ಸ್‌ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುಸುತ್ತಿದೆ. ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ನೀರು ಸೋರುವುದರಿಂದ ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಳಾಗಿವೆ. ಕಟ್ಟಡ ಯಾವುದೇ ಸಂಧರ್ಭದಲ್ಲಿ ಬೀಳುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ನೂತನ ಕಟ್ಟಡದ ಅವಶ್ಯಕತೆಯಿದೆ. ಇದೇ ವೇಳೆ ಶಾಸಕರು ಸಮಸ್ಯೆಯನ್ನು ಬಗೆಹರಿಸಲು ಮುಂದಾಗದೇ ಗುದ್ದಲಿ ಪೂಜೆಯನ್ನು ಮಾಡಲು ಹೊರಟಿದ್ದು ಮುಂದೇನೆಂದು ಕಾದು ನೋಡಬೇಕಾಗಿದೆ.

ಒಟ್ಟಾರೆಯಾಗಿ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ತಾಲೂಕು ಕೇಂದ್ರದಲ್ಲೆ ಸುಸಜ್ಜಿತ ಗ್ರಂಥಾಲಯದ ಭಾಗ್ಯ ಇಲ್ಲದಂತಾಗಿದ್ದು ಕೂಡಲೇ ಶಾಸಕರು ಇತ್ತ ಗಮನಹರಿಸಿ ಜಾಗದ ಸಮಸ್ಯೆಯನ್ನು ಬಗೆಹರಿಸಿ ಬಂದಿರುವ ಅನುದಾನ ಹಿಂತಿರುಗಿ ಹೋಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಹಾಗೂ ಗ್ರಂಥಾಲಯ ಕಟ್ಟಡದ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ತರಲು ಶ್ರಮ ವಹಿಸಬೇಕಾಗಿದೆ.

ಬದಲಿ ನಿವೇಶನ ನೀಡಿಲ್ಲ: ಗ್ರಂಥಾಲಯಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಈ ಹಿಂದೆ ಎತ್ತಿನಹೊಳೆ ಯೋಜನೆಯವರಿಗೆ ನೀಡಲಾಯಿತು. ಇದರ ಬದಲಿ ಜಾಗವಾಗಿ ಪಕ್ಕದ ಜಾಗವನ್ನು ನೀಡಲು ಗುರುತಿಸಲಾಗಿತ್ತು. ಇದೀಗ ಲೋಕೋಪಯೋಗಿ ಇಲಾಖೆಯವರು ಪೂರ್ತಿ ಜಾಗ ನೀಡಲು ಮುಂದಾಗುತ್ತಿಲ್ಲ. ಕಟ್ಟಡ ಕಾಮಗಾರಿ ಆರಂಭಿಸದಿದ್ದಲ್ಲಿ ಬಂದಿರುವ ಅನುದಾನ ಹಿಂತಿರುಗಿ ಹೋಗುತ್ತದೆ ಎಂದು ಸಕಲೇಶಪುರ ಕೇಂದ್ರ ಗ್ರಂಥಾಲಯ ಗ್ರಂಥಪಾಲಕ ಚಂದ್ರಕುಮಾರ್‌ ತಿಳಿಸಿದ್ದಾರೆ.

ಗ್ರಂಥಾಲಯ ಕಟ್ಟಡ ನಿರ್ಮಾಣವಾಗಲು ಜಾಗದ ಸಮಸ್ಯೆಯನ್ನು ಕೂಡಲೇ ಶಾಸಕರು ಬಗೆಹರಿಸಬೇಕು. ಜಾಗದ ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು.
-ನಾರಾಯಣ ಆಳ್ವ, ಸಮಾಜ ಸೇವಕರು

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.