ಅಯೋಧ್ಯೆ ತೀರ್ಪು: ಗೊಗೊಯ್ ಪ್ರಶಂಸಿಸಿ ಪತ್ರ ಬರೆದರೇ ಪ್ರಧಾನಿ ಮೋದಿ?
Team Udayavani, Nov 13, 2019, 11:41 PM IST
ನವದೆಹಲಿ: ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಅಯೋಧ್ಯಾ ತೀರ್ಪನ್ನು ಸುಪ್ರೀಂ ಕೋರ್ಟಿನ ಐವರು ಸದಸ್ಯರ ಸಾಂವಿಧಾನಿಕ ಪೀಠ ನೀಡಿ ನಾಲ್ಕು ದಿನಗಳು ಕಳೆದಿದೆ. ದೇಶವಾಸಿಗಳ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹೆಚ್ಚಿನ ರಾಜಕೀಯ ನಾಯಕರು ಮತ್ತು ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಸುಪ್ರೀಂ ಕೋರ್ಟಿನ ಈ ತೀರ್ಪನ್ನು ಸ್ವಾಗತಿಸಿದ್ದಾರೆ.
ಆದರೆ ಇಲ್ಲೊಂದು ಬೆಳವಣಿಗೆಯಲ್ಲಿ ಪ್ರಧಾನಿ ಮೋದಿ ಅವರು ಈ ತೀರ್ಪು ನೀಡಿದ ಪಂಚ ಸದಸ್ಯ ಪೀಠದ ಐವರಲ್ಲಿ ಒಬ್ಬರಾಗಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಪ್ರಶಂಸಿಸಿ ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಇದೀಗ ಚರ್ಚೆಯ ವಸ್ತುವಾಗಿದೆ. ಇನ್ನೂ ವಿಶೇಷವೆಂದರೆ ಈ ವಿವಾದಾತ್ಮಕ ಪತ್ರ ಬಾಂಗ್ಲಾ ದೇಶದ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಅಯೋಧ್ಯೆಯ ವಿವಾದಿತ ಬಾಬ್ರಿ ಮಸೀದಿ ಇದ್ದ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟು ‘ಹಿಂದೂ ರಾಷ್ಟ್ರ’ ನಿರ್ಮಾಣಕ್ಕೆ ಹಾದಿ ಸುಗಮ ಮಾಡಿಕೊಟ್ಟಿರುವ ಈ ಐತಿಹಾಸಿಕ ತೀರ್ಪಿಗೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಸೇರಿದಂತೆ ಪಂಚ ಸದಸ್ಯರ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಡಿ. ವೈ. ಚಂದ್ರಚೂಢ್, ಮತ್ತು ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರನ್ನು ಪ್ರಶಂಸಿಸಿ ಸ್ವತಃ ಪ್ರಧಾನಿ ಮೋದಿ ಅವರು ಈ ಪತ್ರ ಬರೆದಿರುವಂತೆ ಇದನ್ನು ರಚಿಸಲಾಗಿದೆ. ಮಾತ್ರವಲ್ಲದೇ ಈ ಪತ್ರದ ಕೆಳಗೆ ಪ್ರಧಾನ ಮಂತ್ರಿ ಅವರ ಸಹಿಯೂ ಇದೆ.
ಬಾಂಗ್ಲಾದ ವಿವಿಧ ಮಾಧ್ಯಮಗಳಲ್ಲಿ ಈ ನಕಲು ಪತ್ರ ಪ್ರಕಟಗೊಂಡಿರುವುದಕ್ಕೆ ಭಾರತೀಯ ವಿದೇಶಾಂಗ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು. ಇದು ದೇಶದೊಳಗಿನ ಎರಡು ಸಮುದಾಯಗಳ ನಡುವಿನ ಶಾಂತಿ ಕದಡುವ ಪ್ರಯತ್ನವಾಗಿದೆ ಮತ್ತು ಭಾರತ ಮತ್ತು ಬಾಂಗ್ಲಾ ದೇಶಗಳ ಜನರ ನಡುವಿನ ಸ್ನೇಹ ಸಂಬಂಧವನ್ನು ಕೆಡಿಸಲು ವಿಚ್ಛಿದ್ರಕಾರಿ ಶಕ್ತಿಗಳು ಕೈಗೊಂಡಿರುವ ವ್ಯರ್ಥ ಪ್ರಯತ್ನವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಟ್ವೀಟ್ ಮೂಲಕ ಖಂಡಿಸಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಈ ಪತ್ರ ಫೇಕ್ ಎಂದು ಸ್ಪಷ್ಟಪಡಿಸಿದೆ.
We strongly condemn those responsible for deliberately spreading such fake and malicious news, to divide communities, create disharmony and undermine friendship between the people of India and Bangladesh. https://t.co/LEdXxutzNc
— Raveesh Kumar (@MEAIndia) November 13, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.