![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 17, 2019, 8:03 PM IST
ಹುಬ್ಬಳ್ಳಿ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರನಿಗೆ ರಾಣಿಬೆನ್ನೂರ ಕ್ಷೇತ್ರದ ಟಿಕೆಟ್ ಕೇಳಿರಲಿಲ್ಲ, ಅದೆಲ್ಲ ಮಾಧ್ಯಮದ ಸೃಷ್ಟಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಯಾವುದೇ ಲಾಬಿ ಮಾಡಿಲ್ಲ. ರಾಣಿಬೆನ್ನೂರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಯಾವುದೇ ಸಮಿತಿ ರಚಿಸಿಲ್ಲ. ಅಭ್ಯರ್ಥಿ ಆಯ್ಕೆಗಾಗಿ ಸಮಿತಿ ರಚನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿಲ್ಲ. ರಾಣಿಬೆನ್ನೂರಿನಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಅರುಣಕುಮಾರ ಹೆಸರು ಫೈನಲ್ ಆಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರತಿ ಚುನಾವಣೆಯಲ್ಲೂ ಆಕಾಂಕ್ಷಿಗಳಿಗೆ ಟಿಕೆಟ್ ಸಿಗದಿದ್ದಾಗ ಅಸಮಾಧಾನ ಸಹಜ. ಗೆಲ್ಲುವ ಪಕ್ಷದಲ್ಲಿ ಅಸಮಾಧಾನ ಹೆಚ್ಚಾಗಿರುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ನಮ್ಮ ಮುಖಂಡರು ಬಂಡಾಯ ಶಮನ ಮಾಡಲಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಅಶೋಕ ಪೂಜಾರ ಅವರ ಬಂಡಾಯ ತಣ್ಣಗಾಗಿಸಲಾಗುವುದು. 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 12-13 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.