ಅಂದ ಕಳೆದುಕೊಂಡ ಗುರುಮಠಕಲ್‌ ಉದ್ಯಾನ


Team Udayavani, Nov 19, 2019, 2:40 PM IST

yg-tdy-1

ಗುರುಮಠಕಲ್‌: ಸಾರ್ವಜನಿಕರಿಗೆ ಗೊತ್ತಿರದ ಅನೇಕ ಸಂಗತಿಗಳು ಇಲ್ಲಿವೆ. ಪ್ರತಿ ನಗರ ಹಸಿರಾಗಿರಬೇಕು. ಆದರೆ ಸಾರ್ವಜನಿಕರ ಉದ್ಯಾನದಲ್ಲಿ ನೀರಿಲ್ಲದೇ ಒಣಗಿದಂತೆ ಕಾಣುತ್ತದೆ. ಪಟ್ಟಣದ 23ನೇ ವಾರ್ಡ್‌ ಲಕ್ಷ್ಮೀ ನಗರದ ಬಡಾವಣೆ ಉದ್ಯಾನದಲ್ಲಿ ವಿದ್ಯುತ್‌ ಸಂಪರ್ಕವಿಲ್ಲ. ಸಮರ್ಪಕ ನಿರ್ವಹಣೆ ಇಲ್ಲ, ಹಸಿರು ಹುಲ್ಲಿನ ಹಾಸಿಗೆಯಂತೂ ಇಲ್ಲವೇ ಇಲ್ಲ. ಒಂದು ಸಮಯದಲ್ಲಿ ಆಕರ್ಷಣೀಯವಾಗಿದ್ದ ಉದ್ಯಾನ ಇದೀಗ ಅಂದಕಳೆದುಕೊಂಡು ಕಾಲಗರ್ಭಕ್ಕೆ ಸೇರುವ ಹಂತ ತಲುಪಿದೆ. ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಯೋಚಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಉದ್ಯಾನ ನಿರ್ವಹಣೆಗಾಗಿ ಪುರಸಭೆ ಸಾವಿರಾರು ರೂ. ಖರ್ಚು ಮಾಡುತ್ತಿದೆ. ಆದಾಗ್ಯೂ ಸ್ವಚ್ಛತೆ ಮರೀಚಿಕೆಯಾಗಿದೆ.

ಸ್ವಚ್ಛತೆಗಿಲ್ಲ ಆದ್ಯತೆ: ಮಕ್ಕಳ ಉದ್ಯಾನ ಅನೈರ್ಮಲ್ಯದ ತಾಣವಾಗಿದೆ. ಉದ್ಯಾನದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ತ್ಯಾಜ್ಯ, ಗಿಡಗಳು ಅಡ್ಡಾ ದಿಡ್ಡಿ ಬೆಳೆದು ನಿಂತ ಪರಿಣಾಮ ಫುಟಾತ್‌ ಪಕ್ಕದಲ್ಲಿ ಸಂಚರಿಸುವ ಸಾರ್ವಜನಿಕರ ಮುಖಕ್ಕೆ ಬಡಿಯುವಂತಾಗಿದೆ. ಉದ್ಯಾನದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ. ಜನರು ಇಲ್ಲಿ ತಿಪ್ಪೆ ಹಾಕಿದ್ದಾರೆ. ನೀರು ಸಂಗ್ರಹಾಗಾರ ಇದ್ದರೂ ನಿರುಪಯುಕ್ತವಾಗಿದೆ. ಇಲ್ಲಿ ಮನೆ ಕಟ್ಟಲು ಉಪಯೋಗಿಸುವ ಸೆಂಟ್ರಿಂಗ್‌ ವಸ್ತುಗಳು ಇಟ್ಟಿದಾರೆ.

ಇನ್ನೊಂದೆಡೆ ಹಸಿರು ಹುಲ್ಲಿನ ಹಾಸಿಗೆಯಾಗುವ ಬದಲು ಸಂಪೂರ್ಣ ಒಣಗಿದ ಭೂಮಿಯಾಗಿದೆ. ಮಕ್ಕಳ ಆಟೋಟಕ್ಕೆ ಇರುವ ಉಪಕರಣಗಳನ್ನು ಪುರುಷರು, ಮಹಿಳೆಯರು ಉಪಯೋಗಿಸುತ್ತಿರುವುದು ಉದ್ಯಾನನಿರ್ವಹಣೆ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಆವರಣಗೋಡೆ ಅಥವಾ ಸೂಕ್ತ ತಂತಿ ಬೇಲಿ ನಿರ್ಮಿಸಬೇಕು. ಉದ್ಯಾನದಲ್ಲಿ ನೀರಿನ ತೊಟ್ಟಿ, ಮೋಟಾರ್‌ ಪಂಪ್‌ ಅಳವಡಿಕೆ, ಹಣ್ಣು, ಹೂವು, ಆಯುರ್ವೇದ ಗಿಡಗಳನ್ನು ನೆಡಬೇಕು. ನಾಮಫಲಕ ಹಾಕಿ ಉದ್ಯಾನದ ಬಗ್ಗೆ ಸಮಗ್ರ ಮಾಹಿತಿ ಪ್ರಕಟಿಸಬೇಕು. ನಡೆದಾಡಲು ಸೂಕ್ತ ದಾರಿ, ಕುಳಿತುಕೊಳ್ಳಲು ಕಾಂಕ್ರಿಟ್‌ ಆಸನ, ವಿದ್ಯುತ್‌ ದೀಪಗಳ ಅಳವಡಿಸಬೇಕು. ಅಲ್ಲಲ್ಲಿ ಮಕ್ಕಳಿಗಾಗಿ ಉದ್ಯಾನವನ್ನು ವಿಶೇಷವಾಗಿ ಅಭಿವೃದ್ಧಿ ಪಡಿಸಬೇಕು. ಉದ್ಯಾನದಲ್ಲಿ ಸಮಯಕ್ಕೆ ಸರಿಯಾಗಿ ನೀರು ಹಾಕಿ ಬೆಳೆಸದ ಹಿನ್ನೆಲೆಯಲ್ಲಿ ಸಸ್ಯಗಳು ಒಣಗಿವೆ. ಹೀಗಾಗಿ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಉದ್ಯಾನದ ಪುನಶ್ಚೇತನಕ್ಕೆ ಕಾಳಜಿ ವಹಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ವಿಶ್ರಾಂತಿಗಾಗಿ ಉದ್ಯಾನ ಅಗತ್ಯವಿದೆ. ಮಕ್ಕಳ ಆಟಕ್ಕಾಗಿ ಮೈದಾನ ಇದ್ದರೆ ಬಡಾವಣೆಯಲ್ಲಿರುವ ಜನರಿಗೆ ಅನುಕೂಲವಾಗುತ್ತದೆ. ಉದ್ಯಾನದಲ್ಲಿ ತಿಪ್ಪೆ ಹಾಕಿದ್ದರಿಂದ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯಿದೆ. – ಅಸಮ್ಮೊದ್ದೀನ್‌, ಸ್ಥಳೀಯರು

 

-ಚೆನ್ನಕೇಶವುಲು ಗೌಡ

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.