ಕಾನೂನು ಬಾಹಿರ ರಸ್ತೆ ನಿರ್ಮಾಣ ತಹಶೀಲ್ದಾರ್ ಕುಮ್ಮಕ್ಕು


Team Udayavani, Nov 22, 2019, 4:07 PM IST

mandya-tdy-2

ಪಾಂಡವಪುರ: ತಾಲೂಕಿನ ಚಿಕ್ಕಾಡೆ ಗ್ರಾಮದ ರಸ್ತೆ ವಿಚಾರದಲ್ಲಿ ತಹಶೀಲ್ದಾರ್‌ ಅವರು ಒಂದು ಪಕ್ಷದ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಚಿಕ್ಕಾಡೆ ಗ್ರಾಮದ ರೈತ ಮುಖಂಡ ಹರೀಶ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಾಡೆ ಗ್ರಾಮದಲ್ಲಿ ಸರ್ವೆ ನಂಬರ್‌ 286 ಬಿ9 ನಿಂಗೇಗೌಡ ಬಿನ್‌ ಜವರೇಗೌಡರ ಹೆಸರಿನಲ್ಲಿದೆ.

ಸರ್ವೆ ನಂಬರ್‌ ಜಾಗದಲ್ಲಿ ಏಕಾಏಕಿ ಕಾನೂನು  ಬಾಹಿರವಾಗಿ ತಹಶೀಲ್ದಾರ್‌ ಪ್ರಮೋದ್‌ ಎಲ್‌.  ಪಾಟೀಲ್‌ ರಾಜಕೀಯ ಒತ್ತಡಕ್ಕೆ ಮಣಿದು ವ್ಯಕ್ತಿಯೊಬ್ಬರಿಗೆ ರಸ್ತೆ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ. ಅಲ್ಲದೆ ಎಸಿ, ತಹಶೀಲ್ದಾರ್‌ ಅವರು ಪೊಲೀಸರ ರಕ್ಷಣೆಯಲ್ಲಿ ಕಾನೂನು ಬಾಹಿರ ರಸ್ತೆ ನಿರ್ಮಾಣ ಮಾಡಿಸಿದ್ದಾರೆ. ಇದನ್ನು ಆ ವಾರ್ಡ್‌ ಗ್ರಾಪಂ ಸದಸ್ಯರು ಪ್ರಶ್ನಿಸಿದರೆ ಕಾನೂನು ರಕ್ಷಣೆ ಮಾಡ ಬೇಕಿರುವ ತಹಶೀಲ್ದಾರರೇ ಕಾನೂನು ಉಲ್ಲಂ  ಸಿ ಧಮಕಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಕಾನೂನು ಉಲ್ಲಂಘಿಸಿದರೆ ಚಳವಳಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಿರುವ ತಹಶೀಲ್ದಾರ್‌ ಅವರು ಯಾರೊಂದಿಗೂ ಸೌಜನ್ಯ  ದಿಂದ ವರ್ತಿಸುವುದಿಲ್ಲ. ಈಗಾಗಲೆ ನಾವು ಸಂಬಂಧಿಸಿದ ಮೇಲಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತಹಶೀಲ್ದಾರ್‌ ವಿರುದ್ಧ ದೂರು ನೀಡಿದ್ದೇವೆ. ಮೊದಲು ತಹಶೀಲ್ದಾರ್‌ ತಮ್ಮ ನಡವಳಿಕೆ ತಿದ್ದುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ತಹಶೀಲ್ದಾರ್‌ ವಿರುದ್ಧ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿಸ್ತುಬದ್ಧ ಕಾಮಗಾರಿ ನಡೆಯುತ್ತಿಲ್ಲ: ಚಿಕ್ಕಾಡೆ ಗ್ರಾಮಕ್ಕೆ 2.50 ಕೋಟಿ ವೆಚ್ಚದ ಅನುದಾನ ಬಿಡುಗಡೆ ಮಾಡಿಸಿರುವುದಕ್ಕೆ ಗ್ರಾಮದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಕಾಮಗಾರಿಯ ಗುಣಮಟ್ಟ ಹಾಗೂ ಶಿಸ್ತುಬದ್ಧವಾಗಿ ನಡೆಯುತ್ತಿಲ್ಲ. ವ್ಯಕ್ತಿಯೊಬ್ಬರಿಗೆ ಅನುಕೂಲ ಮಾಡಿಕೊಡಲು ಎರಡು ಅಡಿ ಜಾಗಬಿಟ್ಟು ರಸ್ತೆ ಜಾಗದಲ್ಲಿಯೇ ಚರಂಡಿ ನಿರ್ಮಿಸಿ ರಸ್ತೆ ಮಾಡಲು ಮುಂದಾಗಿದೆ. ಕಾಮಗಾರಿಗಳಲ್ಲಿ ಎಲ್ಲರಿಗೂ ಸರಿಸಮಾನ ನ್ಯಾಯ ದೊರಕಿಸಿಕೊಡುವಂತಿರ ಬೇಕು. ಆದರೆ, ಈ ಕಾಮಗಾರಿಯಲ್ಲಿ ವ್ಯಕ್ತಿಯೊಬ್ಬ ಹಿತಕಾಯಲು ಹೊರಟಿದ್ದಾರೆ.ಇದಾಗಬಾರದು ರಸ್ತೆ ಅಭಿವೃದ್ಧಿ ಗುಣಮಟ್ಟದಿಂದ ಕೂಡಿದ್ದು ನ್ಯಾಯಸಮ್ಮತವಾಗಿರಬೇಕು ಎಂದು ಒತ್ತಾಯಿಸಿದರು. ಚಿಕ್ಕಾಡೆ ಗ್ರಾಮದ ಕೆಲವು ಜೆಡಿಎಸ್‌ ಮುಖಂಡರು ನನ್ನ ವಿರುದ್ಧ ಕಳಪೆ ಕಾಮಗಾರಿ ಎಂದು ಆರೋಪಿಸಿದ್ದಾರೆ.

ನಾನು ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಿದ್ದೇನೆ. ಆ ಕಾಮಗಾರಿ ನಡೆದು ಸುಮಾರು 7 ವರ್ಷಗಳೇ ಕಳೆದಿವೆ. ಅದರಲ್ಲಿ ಒಂದು ರಸ್ತೆಯ ಡೆಕ್‌ ಅಲ್ಲಿನ ಸ್ಥಳೀಯರು ಎತ್ತಿನಗಾಡಿ ನಿಲ್ಲಿಸುವುದು, ಸೌದೆ ಹಾಕಿದ್ದರಿಂದ ಇಲಿ, ಹೆಗ್ಗಣಗಳು ಒಳಗೆ ಸೇರಿಕೊಂಡಿದ್ದರಿಂದ ಒಂದು ಡೆಕ್‌ ಸ್ವಲ್ಪಕುಸಿದಿದೆ. ಅದಕ್ಕೆ ನನ್ನ ವಿರುದ್ಧ ಕಳಪೆ ಕಾಮಗಾರಿ ಎಂದು ಆರೋಪ ಮಾಡಿದ್ದಾರೆ. ಇದೀಗ ನನ್ನ ಮೇಲೆ ಕಳಪೆ ಕಾಮಗಾರಿ ಆರೋಪಿಸುವ ಇವರು ಕಾಮಗಾರಿ ನಡೆಯುವಾಗಲೇ ನನ್ನನ್ನು ಪ್ರಶ್ನಿಸಿಬಹುದಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದ್ವೇಷದ ರಾಜಕಾರಣ: ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ವಿಜೇಂದ್ರಮೂರ್ತಿ ಮಾತನಾಡಿ, ಶಾಸಕ ಪುಟ್ಟರಾಜು ಚಿಕ್ಕಾಡೆ ಅಭಿವೃದ್ಧಿಗಾಗಿ ನಾಲ್ಕೈದು ಕೋಟಿ ಅನುದಾನ ನೀಡಿದ್ದಾರೆ. ಯಾರೇ ಆದರೂ ದ್ವೇಷದ ರಾಜಕಾರಣ ಮಾಡಬಾರದು. ಚಿಕ್ಕಾಡೆ-ಪಟ್ಟ ಸೋಮನಹಳ್ಳಿ ಸಂಪರ್ಕ ರಸ್ತೆಯೂ ಕಳಪೆ ಕಾಮಗಾರಿಯಿಂದ ಕೂಡಿದೆ. ಎಲ್ಲೆಲ್ಲಿ ಕಳಪೆ ಕಾಮಗಾರಿಯಾಗಿದೆ ಎನ್ನುವುದು ನಮಗೂ ಗೊತ್ತಿದೆ ಎಂದು ಕಿಡಿಕಾರಿದರು.

ಗೋಷ್ಠಿಯಲ್ಲಿ ರೈತಮುಖಂಡ ವಿಜೇಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್‌, ಸದಸ್ಯ ರವಿಂದ್ರಸ್ವಾಮಿ, ಜಯರಾಮು, ಡೇರಿ ಮಾಜಿ ನಿರ್ದೇಶಕ aಕಿರಣ್‌ಕುಮಾರ್‌, ಅನಿಲ್‌ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.